AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ. ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ […]

ದೇಶಾದ್ಯಂತ ಪೌರತ್ವ ಕಾಯ್ದೆ ವಿರುದ್ಧ ಬೆಂಕಿ, ತಕ್ಷಣ ಹಿಂಸಾಚಾರ ನಿಲ್ಲಿಸಲು ‘ಸುಪ್ರೀಂ’ ವಾರ್ನಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 12:25 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ಜಾಮಿಯಾ ಇಸ್ಲಾಮಿಯಾ ವಿವಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಬಂಧನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿರುದ್ಧವೂ ಕೇಸ್​ ದಾಖಲಾಗಿದೆ. ವಿವಿ ಒಳಹೊಕ್ಕು ಆಧಾರವಿಲ್ಲದೆ ವಿದ್ಯಾರ್ಥಿಗಳನ್ನ ಬಂಧಿಸಿದ್ದಾರೆ ಅಂತಾ ಮಾನವ ಹಕ್ಕುಗಳ ಆಯೋಗವು ಪೊಲೀಸರ ವಿರುದ್ಧ ಕೇಸ್ ದಾಖಲಿಸಿದೆ.

ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ‘ಸುಪ್ರೀಂ’ ವಾರ್ನಿಂಗ್: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಪಿಐಎಲ್​ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ತಕ್ಷಣ ಹಿಂಸಾಚಾರ ನಿಲ್ಲಿಸುವಂತೆ ಧರಣಿ ನಿರತ ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿಯನ್ನು ಕೋರ್ಟ್​ ಸಹಿಸುವುದಿಲ್ಲ. ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದಿದೆ. ಇನ್ನು ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.18ರಂದು ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಿರ್ಧರಿಸಿದೆ.

ಪೊಲೀಸರ ಮೇಲೆ ಕಲ್ಲು ತೂರಾಟ: ಲಖನೌ: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲೂ ಸಾವಿರಾರು ವಿದ್ಯಾರ್ಥಿಗಳ ಆಕ್ರೋಶ ಮುಂದುವರಿದಿದೆ. ನಾದ್ವಾ ವಿವಿ ಗೇಟ್ ಒಳಭಾಗದಿಂದ ಪೊಲೀಸರ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಹತ್ತಿಕ್ಕಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

Published On - 11:48 am, Mon, 16 December 19

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್