AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದರ ಇಳಿಕೆ ಬಗ್ಗೆ ಸುಳಿವು ನೀಡಿದ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು

ನಾನು ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ. ಖಂಡಿತವಾಗಿ, ನನ್ನ ಉದ್ದೇಶವು (ಟಿಕೆಟ್) ಬೆಲೆಗಳನ್ನು ಕಡಿಮೆ ಮಾಡುವುದು. ಏಕೆಂದರೆ ಅದು ಸಾಮಾನ್ಯ ಜನರಿಗೆ ಸವಾಲಾಗಿದೆ. ವಿಮಾನ ಪ್ರಯಾಣವನ್ನು ಸಾಮಾನ್ಯ ಜನರಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ, ದರ ಕೈಗೆಟುಕುವಂತೆ ಮಾಡದಿದ್ದರೆ ಅದು ಆಗುವುದಿಲ್ಲ ಎಂದಿದ್ದಾರೆ ಸಚಿವರು.

ವಿಮಾನ ದರ ಇಳಿಕೆ ಬಗ್ಗೆ ಸುಳಿವು ನೀಡಿದ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು
ರಾಮ್ ಮೋಹನ್ ನಾಯ್ಡು
ರಶ್ಮಿ ಕಲ್ಲಕಟ್ಟ
|

Updated on: Jun 13, 2024 | 4:52 PM

Share

ದೆಹಲಿ ಜೂನ್ 13: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ (Union Civil Aviation minister) ಗುರುವಾರ ಅಧಿಕಾರ ಸ್ವೀಕರಿಸಿದ ಕಿಂಜರಾಪು ರಾಮ್ ಮೋಹನ್ ನಾಯ್ಡು (Kinjarapu Ram Mohan Naidu) ಅವರು ವಿಮಾನ ದರವನ್ನು (Airfare) ಕಡಿಮೆ ಮಾಡುವ ಸುಳಿವು ನೀಡಿದ್ದಾರೆ. ಪ್ರತಿಯೊಬ್ಬರಿಗೂ ವಿಮಾನಯಾನ ಸೌಲಭ್ಯ ಕಲ್ಪಿಸುವುದು ಸರ್ಕಾರದ ಗುರಿಯಾಗಿದ್ದು, ಕೈಗೆಟಕುವ ದರದಲ್ಲಿ ವಿಮಾನ ಟಿಕೆಟ್ ನೀಡಿದರೇ ಮಾತ್ರ ಇದನ್ನು ಸಾಧಿಸಲು ಸಾಧ್ಯ ಎಂದರು. ನಾನು ನಾಗರಿಕ ವಿಮಾನಯಾನ ಸಚಿವ ಎಂದು ಘೋಷಿಸಿದ ಸಮಯದಿಂದ, ನಾನು ಎಲ್ಲಿಗೆ ಹೋದರೂ, ಕಳೆದ ಕೆಲವು ವರ್ಷಗಳಿಂದ, ವಿಶೇಷವಾಗಿ ಕೋವಿಡ್ ನಂತರ ದರ ಹೆಚ್ಚಳದ ಬಗ್ಗೆಯೇ ಜನ ಮಾತನಾಡುತ್ತಾರೆ. ನನಗೆ ಈ ವಿಷಯದ ಬಗ್ಗೆ ಸಂಪೂರ್ಣ ತಿಳುವಳಿಕೆ ಬೇಕು ಅದಕ್ಕಾಗಿ ನಾನು ಮಧ್ಯಸ್ಥಗಾರರ ಜೊತೆ ಮಾತುಕತೆ ನಡೆಸಲಿದ್ದೇನೆ ಎಂದು ರಾಮ್ ಮೋಹನ್ ನಾಯ್ಡು ಪಿಟಿಐಗೆ ತಿಳಿಸಿದ್ದಾರೆ.

ನಾನು ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ. ಖಂಡಿತವಾಗಿ, ನನ್ನ ಉದ್ದೇಶವು (ಟಿಕೆಟ್) ಬೆಲೆಗಳನ್ನು ಕಡಿಮೆ ಮಾಡುವುದು. ಏಕೆಂದರೆ ಅದು ಸಾಮಾನ್ಯ ಜನರಿಗೆ ಸವಾಲಾಗಿದೆ. ವಿಮಾನ ಪ್ರಯಾಣವನ್ನು ಸಾಮಾನ್ಯ ಜನರಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ, ದರ ಕೈಗೆಟುಕುವಂತೆ ಮಾಡದಿದ್ದರೆ ಅದು ಆಗುವುದಿಲ್ಲ ಎಂದಿದ್ದಾರೆ ಸಚಿವರು.

ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರು ಕೇಂದ್ರದ ನರೇಂದ್ರ ಮೋದಿ 3.0 ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. 36 ವರ್ಷ ವಯಸ್ಸಿನ ನಾಯಕ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಉತ್ತರ ಆಂಧ್ರಪ್ರದೇಶದ ಶ್ರೀಕಾಕುಳದಿಂದ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಅವರು ವೈಎಸ್‌ಆರ್‌ಸಿಪಿಯ ತಿಲಕ್ ಪೆರಡಾ ಅವರನ್ನು 3.2 ಲಕ್ಷ ಮತಗಳ ಅಂತರದಿಂದ ಸೋಲಿಸಿದರು.

ಥಾಮಸ್ ಕುಕ್ (ಭಾರತ) ಮತ್ತು ಎಸ್‌ಒಟಿಸಿ ಟ್ರಾವೆಲ್‌ನ ಅಂಕಿಅಂಶಗಳ ಪ್ರಕಾರ, ಕೋಲ್ಕತ್ತಾ-ಬಾಗ್ಡೋಗ್ರಾ, ದೆಹಲಿ-ಬೆಂಗಳೂರು ಮತ್ತು ದೆಹಲಿ-ಮುಂಬೈನಂತಹ ಪ್ರಮುಖ ದೇಶೀಯ ಮಾರ್ಗಗಳಲ್ಲಿನ ವಿಮಾನ ದರಗಳು ಈ ವರ್ಷದ ಮೇ ತಿಂಗಳಲ್ಲಿ 12.7% ವರೆಗೆ ವರ್ಷದಿಂದ ವರ್ಷಕ್ಕೆ ಏರಿಕೆ ಕಂಡಿವೆ.

ಹೆಚ್ಚಿದ ವಾಯುಯಾನ ಟರ್ಬೈನ್ ಇಂಧನ ಬೆಲೆಗಳು, ರೂಪಾಯಿ ಮೌಲ್ಯ ಕುಸಿತ, ಪ್ರಮುಖ ಸಂಸ್ಥೆಗಳಿಂದ ಕಡಿಮೆಯಾದ ವಿಮಾನಗಳು ಮತ್ತು ಎಂಜಿನ್ ಪೂರೈಕೆ ಸಮಸ್ಯೆಗಳು ಇತ್ತೀಚಿನ ವಿಮಾನ ದರಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಏವಿಯೇಷನ್ ಉದ್ಯಮದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸರಣಿ ಭಯೋತ್ಪಾದಕ ದಾಳಿ, ಜಮ್ಮು-ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಗ್ಗೆ ಪರಿಶೀಲಿಸಿದ ಪ್ರಧಾನಿ ಮೋದಿ

ನಾಗರಿಕ ವಿಮಾನಯಾನ ನಿಯಂತ್ರಕ, ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA), ಮಾರ್ಚ್‌ನಲ್ಲಿ ಬೇಸಿಗೆ ವೇಳಾಪಟ್ಟಿಗಾಗಿ ಡೊಮೆಸ್ಟಿಕ್ ವೀಕ್ಲಿ ಡಿಪಾರ್ಚರ್ಸ್ ಅನುಮೋದಿಸಿದೆ, ಇದು ಕಳೆದ ವರ್ಷ ಇದೇ ಅವಧಿಗಿಂತ ಸುಮಾರು 6% ಹೆಚ್ಚಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.ಬೇಸಿಗೆಯ ಗರಿಷ್ಠ ಪ್ರಯಾಣದಲ್ಲಿನ ಬೇಡಿಕೆಯನ್ನು ನೋಡಿದರೆ, ಇದು 14 ದೇಶೀಯ ವಿಮಾನಯಾನ ಸಂಸ್ಥೆಗಳಲ್ಲಿ 24,275 ಸಾಪ್ತಾಹಿಕ ದೇಶೀಯ ನಿರ್ಗಮನಗಳನ್ನು ಅನುಮೋದಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?