AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಉಗ್ರರ ಗುಂಡಿಗೆ ಫಾರ್ಮಸಿ ಉದ್ಯೋಗಿ ಬಲಿ

ಬೋಹ್ರಿ ಕಡಲ್​ ಏರಿಯಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ನಡೆದ ಬಗ್ಗೆ ಸಂಜೆ ಸುಮಾರು 8.10ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ನಾವು ಹೋಗಿ ನೋಡಿದಾಗ ಇಬ್ರಾಹಿಂ ಖಾನ್​ ರಕ್ತದ ಮಡುವಲ್ಲಿ ಬಿದ್ದಿದ್ದರು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಉಗ್ರರ ಗುಂಡಿಗೆ ಫಾರ್ಮಸಿ ಉದ್ಯೋಗಿ ಬಲಿ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 08, 2021 | 10:04 PM

Share

ಜಮ್ಮು-ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರಿದಿದೆ. ಇಂದು ಸಂಜೆ ಶ್ರೀನಗರದ ಬೊಹ್ರಿ ಕಡಾಲ್​ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತನನ್ನು ಮೊಹಮ್ಮದ್​ ಇಬ್ರಾಹಿಂ ಖಾನ್​ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು. ಅವರು ಸೇಲ್ಸ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್​​ರ ಹೊಟ್ಟೆಗೆ ಗುಂಡು ಹೊಡೆದಿದ್ದರು. ಇದರಿಂದಾಗಿ ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಅವರನ್ನು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು. 

ಇಬ್ರಾಹಿಂ ಫಾರ್ಮಸಿಯೊಂದರ ಸೇಲ್ಸ್​ಮ್ಯಾನ್​ ಆಗಿದ್ದರು. ಈ ಫಾರ್ಮಸಿ ನಡೆಸುತ್ತಿರುವ ವೈದ್ಯರು ಕಾಶ್ಮೀರಿ ಪಂಡಿತರಾಗಿದ್ದಾರೆ ಎಂದು ಹೇಳಲಾಗಿದೆ.  ಬೋಹ್ರಿ ಕಡಲ್​ ಏರಿಯಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ನಡೆದ ಬಗ್ಗೆ ಸಂಜೆ ಸುಮಾರು 8.10ರ ಹೊತ್ತಿಗೆ ನಮಗೆ ಮಾಹಿತಿ ಸಿಕ್ಕಿದೆ. ನಾವು ಹೋಗಿ ನೋಡಿದಾಗ ಇಬ್ರಾಹಿಂ ಖಾನ್​ ರಕ್ತದ ಮಡುವಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಗುಂಡಿನ ದಾಳಿ ನಡೆದ ಸ್ಥಳದಲ್ಲಿ ಪೊಲೀಸ್​ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಭಯೋತ್ಪಾದಕರನ್ನು ಹುಡುಕುವ ಕಾರ್ಯಾಚರಣೆಯೂ ಮುಂದುವರಿದಿದೆ. ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಈ ಹತ್ಯೆಯನ್ನು ಖಂಡಿಸಿದ್ದಾರೆ.

ಇನ್ನು ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಪ್ರಮಾಣ ಹೆಚ್ಚಾಗಿದೆ. ಬಿಹಾರದ ಕಾರ್ಮಿಕರು, ಶಾಲೆಯೊಂದರ ಇಬ್ಬರು ಶಿಕ್ಷಕರು ಸೇರಿ ಹಲವು ನಾಗರಿಕರನ್ನು ಈಗಾಗಲೇ ಉಗ್ರರು ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್​ ಶಾ, ಇಲ್ಲಿನ ನಾಗರಿಕರ ಸುರಕ್ಷತೆ ನಮ್ಮ ಜವಾಬ್ದಾರಿ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?