AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ನಲ್ಸಾರ್ ಕಾನೂನು ವಿವಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಲು ವಿದ್ಯಾರ್ಥಿಗಳಿಂದ ವಿರೋಧ?

Hyderabad NALSAR students oppose CJI as convocation chief guest over NEET row: ಹೈದರಾಬಾದ್​ನ ನಲ್ಸಾರ್ ಲಾ ಯೂನಿವರ್ಸಿಟಿಯ ಈ ಬಾರಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಿಜೆಐ ಸೂರ್ಯಕಾಂತ್ ಅವರು ಮುಖ್ಯ ಅತಿಥಿಯಾಗಿದ್ದಾರೆ. ಆದರೆ, ಕೆಲ ವಿದ್ಯಾರ್ಥಿಗಳ ಗುಂಪಿನಿಂದ ಇದಕ್ಕೆ ವಿರೋಧ ವ್ಯಕ್ತವಾಗಿರುವುದು ತಿಳಿದುಬಂದಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಗುರವಾಗಿ ಮಾತನಾಡಿರುವುದಕ್ಕೆ ಆಕ್ಷೇಪಗಳಿವೆ.

ಹೈದರಾಬಾದ್: ನಲ್ಸಾರ್ ಕಾನೂನು ವಿವಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಲು ವಿದ್ಯಾರ್ಥಿಗಳಿಂದ ವಿರೋಧ?
ಸಿಜೆಐ ಸೂರ್ಯಕಾಂತ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 09, 2026 | 3:33 PM

Share

ಹೈದರಾಬಾದ್, ಆಗಸ್ಟ್ 9: ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ (NALSAR University of Law) 2026ರ ಸಾಲಿನ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳ ಗುಂಪೊಂದು, ಮುಂಬರುವ ಘಟಿಕೋತ್ಸವ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

2026ರ ಬ್ಯಾಚ್‌ನ ಹೊರಹೋಗುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಉಪಕುಲಪತಿಗಳು (VC), ರಿಜಿಸ್ಟ್ರಾರ್ ಮತ್ತು ಉಪನ್ಯಾಸಕರಿಗೆ ಜಂಟಿ ಪತ್ರ ಬರೆದಿದ್ದು, ಸಿಜೆಐ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ವಿರೋಧಕ್ಕೆ ಕಾರಣ: ಇತ್ತೀಚಿನ ಜಂತರ್ ಮಂತರ್ ಪ್ರತಿಭಟನೆ ಮತ್ತು ಇತರ ನ್ಯಾಯಾಂಗ ವಿಚಾರಣೆಗಳ ಸಂದರ್ಭದಲ್ಲಿ ಸಿಜೆಐ ಸೂರ್ಯ ಕಾಂತ್ ಅವರು ನೀಡಿದರೆನ್ನಲಾದ ಕೆಲವು ಹೇಳಿಕೆಗಳು ಹಾಗೂ ವಿದ್ಯಾರ್ಥಿ ಪ್ರತಿಭಟನೆ ಬಗ್ಗೆ ವ್ಯಕ್ತಪಡಿಸಿದ ನಿಲುವುಗಳು ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 90ರ ದಶಕದ ಕರಾಳ ಕಾಶ್ಮೀರಿ ಉಗ್ರ ಇತಿಹಾಸ ಮರುಕಳಿಸುತ್ತಿದೆಯೇ? ಪಂಡಿತರಿಗೆ ಶುರುವಾಗಿವೆ ಉಗ್ರ ಬೆದರಿಕೆಗಳು

‘ಅವರ ಕೈಯಿಂದ ಪದವಿ ಪಡೆಯಲು ಇಷ್ಟವಿಲ್ಲ’

ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಭಾವನಾತ್ಮಕವಾಗಿ ಅತ್ಯಂತ ಮಹತ್ವದಾಗಿರುವ ಘಟಿಕೋತ್ಸವದಲ್ಲಿ ಇಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯಿಂದ ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸುವುದು ಸೂಕ್ತವಲ್ಲ ಎಂದು ಈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಶ್ವವಿದ್ಯಾಲಯದ ಪ್ರತಿಕ್ರಿಯೆ: ನಲ್ಸಾರ್ ವಿಶ್ವವಿದ್ಯಾಲಯದ ಸಮಾರಂಭಗಳಲ್ಲಿ ಸಿಜೆಐ ಅವರನ್ನು ಆಹ್ವಾನಿಸುವುದು ಈ ಹಿಂದಿನಿಂದಲೂ ನಡೆದುಬಂದ ಸಂಪ್ರದಾಯವಾಗಿದೆ. ಆದರೆ ವಿದ್ಯಾರ್ಥಿಗಳ ಈ ಆಕ್ಷೇಪಣಾ ಪತ್ರದ ಕುರಿತು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ

ಮುಂಬೈನಲ್ಲೂ ಮುಂದೂಡಿಕೆಯಾಗಿತ್ತು ಟಿಸ್ ಘಟಿಕೋತ್ಸವ ಕಾರ್ಯಕ್ರಮ

ಎರಡು ವಾರಗಳ ಹಿಂದೆ ಮುಂಬೈನಲ್ಲಿರುವ ಟಾಟಾ ಇನ್ಸ್​ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಸಂಸ್ಥೆಯ 86ನೇ ಘಟಿಕೋತ್ಸವ ಕೂಡ ಮುಂದೂಡಿಕೆ ಆಗಿತ್ತು. ಆಗಸ್ಟ್ 2ರಂದು ನಡೆಯಬೇಕಿದ್ದ ಈ ಕಾರ್ಯಕ್ರಮಕ್ಕೆ ಸಿಜೆಐ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದರು. ಆದರೆ, ಭದ್ರತಾ ಕಳವಳ ವ್ಯಕ್ತಪಡಿಸಿ, ಶಿಕ್ಷಣ ಸಂಸ್ಥೆಯು ಘಟಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಿತ್ತು. ಕೆಲ ವರದಿಗಳ ಪ್ರಕಾರ, ಸಿಜೆಐ ಮುಖ್ಯ ಅತಿಥಿಗಳಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಗಳ ವಿರೋಧ ಬಂದಿತ್ತು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ