AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವೀಗನ್, ಕೋವಿಡ್ ಬಂದಾಗ ಮೋದಿ ಕರೆ ಮಾಡಿ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಸಿಜೆಐ

ನನಗೆ ಕೋವಿಡ್ ಬಂದಾಗ ಪ್ರಧಾನಿ ನನಗೆ ಕರೆ ಮಾಡಿದ್ದರು. 'ನೀವು ಕೋವಿಡ್‌ನಿಂದ ಬಳಲುತ್ತಿದ್ದೀರಿ ಅಲ್ವಾ, ಎಲ್ಲವೂ ಚೆನ್ನಾಗಿದೆ ಎಂದು ನಾನು ಭಾವಿಸುತ್ತೇನೆ. ನೀವು ಉತ್ತಮ ಸ್ಥಿತಿಯಲ್ಲಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ನಾವು ಎಲ್ಲವನ್ನೂ ಮಾಡುತ್ತೇವೆ. ಆಯುಷ್‌ನಲ್ಲಿ ಕಾರ್ಯದರ್ಶಿಯೂ ಆಗಿರುವ ಒಬ್ಬ ವೈದ್ಯ ಇದ್ದಾರೆ. ನಾನು ಅವರಿಗೆ ಈ ಬಗ್ಗೆ ಹೇಳುತ್ತೇನೆ. ಅವರು ನಿಮಗೆ ಬೇಕಾದ ಔಷಧಿಯನನ್ನು ಕಳುಹಿಸುತ್ತಾರೆ ಎಂದು ಮೋದಿಯವರ ಫೋನ್ ಕರೆಯನ್ನು ನೆನಪಿಸಿಕೊಂಡಿದ್ದಾರೆ ಸಿಜೆಐ ಚಂದ್ರಚೂಡ್

ನಾನು ವೀಗನ್, ಕೋವಿಡ್ ಬಂದಾಗ ಮೋದಿ ಕರೆ ಮಾಡಿ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಸಿಜೆಐ
ಡಿವೈ ಚಂದ್ರಚೂಡ್
ರಶ್ಮಿ ಕಲ್ಲಕಟ್ಟ
|

Updated on:Feb 22, 2024 | 3:26 PM

Share

ದೆಹಲಿ ಫೆಬ್ರುವರಿ 22: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI Chandrachud) ಅವರು ಗುರುವಾರ ಸುಪ್ರೀಂಕೋರ್ಟ್ (Supreme Court) ಆವರಣದಲ್ಲಿ ಆಯುಷ್ ಹೋಲಿಸ್ಟಿಕ್ ವೆಲ್ನೆಸ್ ಸೆಂಟರ್ ( AYUSH Holistic Wellness Centre) ಉದ್ಘಾಟಿಸಿದ್ದಾರೆ. ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ -19 ಕಾಲದಲ್ಲಿ ಆಯುಷ್ – ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ಬಗ್ಗೆತಮ್ಮ ಅನುಭವವನ್ನು ಹಂಚಿಕೊಂಡಿದ್ದು,ಪ್ರಧಾನಿ ನರೇಂದ್ರ ಮೋದಿಯವರು ಕರೆ ಬಗ್ಗೆಯೂ ಉಲ್ಲೇಖಿಸಿದ್ದಾರೆ.

“ಕೋವಿಡ್ ಉಲ್ಬಣಗೊಂಡಾಗಿನಿಂದ ನಾನು ಆಯುಷ್‌ನೊಂದಿಗೆ ಸಂಬಂಧ ಹೊಂದಿದ್ದೇನೆ. ಪ್ರಧಾನಿಯವರು ಆಗ ನನಗೆ ಕರೆ ಮಾಡಿದ್ದರು. ‘ನೀವು ಕೋವಿಡ್‌ನಿಂದ ಬಳಲುತ್ತಿದ್ದೀರಿ ಅಲ್ವಾ, ಎಲ್ಲವೂ ಚೆನ್ನಾಗಿದೆ ಎಂದು ನಾನು ಭಾವಿಸುತ್ತೇನೆ. ನೀವು ಉತ್ತಮ ಸ್ಥಿತಿಯಲ್ಲಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ನಾವು ಎಲ್ಲವನ್ನೂ ಮಾಡುತ್ತೇವೆ. ಆಯುಷ್‌ನಲ್ಲಿ ಕಾರ್ಯದರ್ಶಿಯೂ ಆಗಿರುವ ಒಬ್ಬ ವೈದ್ಯ ಇದ್ದಾರೆ. ನಾನು ಅವರಿಗೆ ಈ ಬಗ್ಗೆ ಹೇಳುತ್ತೇನೆ. ಅವರು ನಿಮಗೆ ಬೇಕಾದ ಔಷಧಿಯನನ್ನು ಕಳುಹಿಸುತ್ತಾರೆ ಎಂದು ಚಂದ್ರಚೂಡ್ ಹೇಳಿದ್ದಾರೆ.

“ನಾನು ಕೋವಿಡ್‌ನಿಂದ ಬಳಲುತ್ತಿರುವಾಗ ನಾನು ಆಯುಷ್‌ನಿಂದ ಔಷಧ ತೆಗೆದುಕೊಂಡೆ. ಎರಡನೇ ಮತ್ತು ಮೂರನೇ ಬಾರಿ ನನಗೆ ಕೋವಿಡ್ ಬಂದಾಗ, ನಾನು ಯಾವುದೇ ಅಲೋಪತಿ ಔಷಧವನ್ನು ತೆಗೆದುಕೊಳ್ಳಲಿಲ್ಲ” ಎಂದ ಅವರು ಪರ್ಯಾಯ ಸಮಗ್ರ ಚಿಕಿತ್ಸೆಗಳಲ್ಲಿ ಅವರ ನಂಬಿಕೆಯನ್ನು ಒತ್ತಿಹೇಳಿದರು.

ಸುಪ್ರೀಂಕೋರ್ಟ್​​ನ ಎಲ್ಲ ಸಿಬ್ಬಂದಿಗಳ ಯೋಗಕ್ಷೇಮದ ಬಗ್ಗೆ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಾಂಗವನ್ನು ಮೀರಿ ಸಮಗ್ರ ಆರೋಗ್ಯ ರಕ್ಷಣೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. “ಅವರು ಸಮಗ್ರ ಜೀವನ ಮಾದರಿಯನ್ನು ಹೊಂದಬೇಕೆಂದು ನಾನು ಬಯಸುತ್ತೇನೆ” ಎಂದ ಸಿಜೆಐ, ಎಲ್ಲರಿಗೂ ಸಮಗ್ರ ಕ್ಷೇಮವನ್ನು ಖಾತ್ರಿಪಡಿಸುವ ಅವರ ಬದ್ಧತೆಯನ್ನು ಒತ್ತಿಹೇಳಿದರು. ಆಯುಷ್ ಸಮಗ್ರ ಕ್ಷೇಮ ಕೇಂದ್ರವು ನ್ಯಾಯಾಧೀಶರು, ಅವರ ಕುಟುಂಬಗಳು ಮತ್ತು ಸುಪ್ರೀಂಕೋರ್ಟ್‌ನ ಸಿಬ್ಬಂದಿ ಸದಸ್ಯರಲ್ಲಿ ಆಯುರ್ವೇದ ಮತ್ತು ಸಮಗ್ರ ಜೀವನಶೈಲಿ ಅಭ್ಯಾಸಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​​​ಗೆ ಯಾವ ಪ್ರಕರಣವೂ ಚಿಕ್ಕದಲ್ಲ: ಕೇಂದ್ರ ಕಾನೂನು ಸಚಿವರ ಹೇಳಿಕೆಗೆ ಸಿಜೆಐ ಡಿವೈ ಚಂದ್ರಚೂಡ್​​ ಪ್ರತಿಕ್ರಿಯೆ

ಕ್ಷೇಮ ಕೇಂದ್ರವನ್ನು ಸ್ಥಾಪಿಸಲು ನಿಖರವಾದ ಸಿದ್ಧತೆಯನ್ನು ಸಿಜೆಐ ಶ್ಲಾಘಿಸಿದ್ದಾರೆ. ಆಂಟಿ-ಸ್ಕಿಡ್ ಟೈಲ್ಸ್ ಅಥವಾ ಚಿಕಿತ್ಸಾ ಕೊಠಡಿಗಳೇ ಆಗಿರಲಿ ಸೌಲಭ್ಯಗಳನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ. ವಿಶ್ರಾಂತಿ ಕೊಠಡಿಗಳು ನಡೆಯುತ್ತಿರುವ ಚಿಕಿತ್ಸೆಯ ಸ್ವರೂಪಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಇದನ್ನು ಹೆಚ್ಚಿನ ಕಾಳಜಿಯಿಂದ ಪರಿಶೀಲಿಸಲಾಗುತ್ತಿದೆ” ಎಂದು ಸಿಜೆಐ ಹೇಳಿದ್ದಾರೆ.

“ನಾನು ಯೋಗ ಮಾಡುತ್ತೇನೆ. ನಾನು ವೀಗನ್ , ಕಳೆದ ಐದು ತಿಂಗಳಲ್ಲಿ ನಾನು ಸಂಪೂರ್ಣವಾಗಿ ವೀಗನ್ ಡಯಟ್ ಅನುಸರಿಸಿದ್ದೇನೆ. ನಾನು ಅದನ್ನು ಮುಂದುವರಿಸುತ್ತೇನೆ. ನಾವೇನು ತಿನ್ನುತ್ತೇವೆಯೋ ಅದರಿಂದ ಪ್ರಾರಂಭವಾಗುವ ಸಮಗ್ರ ಜೀವನ ಮಾದರಿಯನ್ನು ನಾನು ಅನುಸರಿಸುತ್ತೇನೆ ಮತ್ತು ಅದರ ಬಗ್ಗೆ ಗಮನ ಹರಿಸುತ್ತೇನೆ ಎಂದು ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 22 February 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್