AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವೀಗನ್, ಕೋವಿಡ್ ಬಂದಾಗ ಮೋದಿ ಕರೆ ಮಾಡಿ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಸಿಜೆಐ

ನನಗೆ ಕೋವಿಡ್ ಬಂದಾಗ ಪ್ರಧಾನಿ ನನಗೆ ಕರೆ ಮಾಡಿದ್ದರು. 'ನೀವು ಕೋವಿಡ್‌ನಿಂದ ಬಳಲುತ್ತಿದ್ದೀರಿ ಅಲ್ವಾ, ಎಲ್ಲವೂ ಚೆನ್ನಾಗಿದೆ ಎಂದು ನಾನು ಭಾವಿಸುತ್ತೇನೆ. ನೀವು ಉತ್ತಮ ಸ್ಥಿತಿಯಲ್ಲಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ನಾವು ಎಲ್ಲವನ್ನೂ ಮಾಡುತ್ತೇವೆ. ಆಯುಷ್‌ನಲ್ಲಿ ಕಾರ್ಯದರ್ಶಿಯೂ ಆಗಿರುವ ಒಬ್ಬ ವೈದ್ಯ ಇದ್ದಾರೆ. ನಾನು ಅವರಿಗೆ ಈ ಬಗ್ಗೆ ಹೇಳುತ್ತೇನೆ. ಅವರು ನಿಮಗೆ ಬೇಕಾದ ಔಷಧಿಯನನ್ನು ಕಳುಹಿಸುತ್ತಾರೆ ಎಂದು ಮೋದಿಯವರ ಫೋನ್ ಕರೆಯನ್ನು ನೆನಪಿಸಿಕೊಂಡಿದ್ದಾರೆ ಸಿಜೆಐ ಚಂದ್ರಚೂಡ್

ನಾನು ವೀಗನ್, ಕೋವಿಡ್ ಬಂದಾಗ ಮೋದಿ ಕರೆ ಮಾಡಿ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಸಿಜೆಐ
ಡಿವೈ ಚಂದ್ರಚೂಡ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 22, 2024 | 3:26 PM

Share

ದೆಹಲಿ ಫೆಬ್ರುವರಿ 22: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI Chandrachud) ಅವರು ಗುರುವಾರ ಸುಪ್ರೀಂಕೋರ್ಟ್ (Supreme Court) ಆವರಣದಲ್ಲಿ ಆಯುಷ್ ಹೋಲಿಸ್ಟಿಕ್ ವೆಲ್ನೆಸ್ ಸೆಂಟರ್ ( AYUSH Holistic Wellness Centre) ಉದ್ಘಾಟಿಸಿದ್ದಾರೆ. ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಕೋವಿಡ್ -19 ಕಾಲದಲ್ಲಿ ಆಯುಷ್ – ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ಬಗ್ಗೆತಮ್ಮ ಅನುಭವವನ್ನು ಹಂಚಿಕೊಂಡಿದ್ದು,ಪ್ರಧಾನಿ ನರೇಂದ್ರ ಮೋದಿಯವರು ಕರೆ ಬಗ್ಗೆಯೂ ಉಲ್ಲೇಖಿಸಿದ್ದಾರೆ.

“ಕೋವಿಡ್ ಉಲ್ಬಣಗೊಂಡಾಗಿನಿಂದ ನಾನು ಆಯುಷ್‌ನೊಂದಿಗೆ ಸಂಬಂಧ ಹೊಂದಿದ್ದೇನೆ. ಪ್ರಧಾನಿಯವರು ಆಗ ನನಗೆ ಕರೆ ಮಾಡಿದ್ದರು. ‘ನೀವು ಕೋವಿಡ್‌ನಿಂದ ಬಳಲುತ್ತಿದ್ದೀರಿ ಅಲ್ವಾ, ಎಲ್ಲವೂ ಚೆನ್ನಾಗಿದೆ ಎಂದು ನಾನು ಭಾವಿಸುತ್ತೇನೆ. ನೀವು ಉತ್ತಮ ಸ್ಥಿತಿಯಲ್ಲಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ನಾವು ಎಲ್ಲವನ್ನೂ ಮಾಡುತ್ತೇವೆ. ಆಯುಷ್‌ನಲ್ಲಿ ಕಾರ್ಯದರ್ಶಿಯೂ ಆಗಿರುವ ಒಬ್ಬ ವೈದ್ಯ ಇದ್ದಾರೆ. ನಾನು ಅವರಿಗೆ ಈ ಬಗ್ಗೆ ಹೇಳುತ್ತೇನೆ. ಅವರು ನಿಮಗೆ ಬೇಕಾದ ಔಷಧಿಯನನ್ನು ಕಳುಹಿಸುತ್ತಾರೆ ಎಂದು ಚಂದ್ರಚೂಡ್ ಹೇಳಿದ್ದಾರೆ.

“ನಾನು ಕೋವಿಡ್‌ನಿಂದ ಬಳಲುತ್ತಿರುವಾಗ ನಾನು ಆಯುಷ್‌ನಿಂದ ಔಷಧ ತೆಗೆದುಕೊಂಡೆ. ಎರಡನೇ ಮತ್ತು ಮೂರನೇ ಬಾರಿ ನನಗೆ ಕೋವಿಡ್ ಬಂದಾಗ, ನಾನು ಯಾವುದೇ ಅಲೋಪತಿ ಔಷಧವನ್ನು ತೆಗೆದುಕೊಳ್ಳಲಿಲ್ಲ” ಎಂದ ಅವರು ಪರ್ಯಾಯ ಸಮಗ್ರ ಚಿಕಿತ್ಸೆಗಳಲ್ಲಿ ಅವರ ನಂಬಿಕೆಯನ್ನು ಒತ್ತಿಹೇಳಿದರು.

ಸುಪ್ರೀಂಕೋರ್ಟ್​​ನ ಎಲ್ಲ ಸಿಬ್ಬಂದಿಗಳ ಯೋಗಕ್ಷೇಮದ ಬಗ್ಗೆ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಾಂಗವನ್ನು ಮೀರಿ ಸಮಗ್ರ ಆರೋಗ್ಯ ರಕ್ಷಣೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. “ಅವರು ಸಮಗ್ರ ಜೀವನ ಮಾದರಿಯನ್ನು ಹೊಂದಬೇಕೆಂದು ನಾನು ಬಯಸುತ್ತೇನೆ” ಎಂದ ಸಿಜೆಐ, ಎಲ್ಲರಿಗೂ ಸಮಗ್ರ ಕ್ಷೇಮವನ್ನು ಖಾತ್ರಿಪಡಿಸುವ ಅವರ ಬದ್ಧತೆಯನ್ನು ಒತ್ತಿಹೇಳಿದರು. ಆಯುಷ್ ಸಮಗ್ರ ಕ್ಷೇಮ ಕೇಂದ್ರವು ನ್ಯಾಯಾಧೀಶರು, ಅವರ ಕುಟುಂಬಗಳು ಮತ್ತು ಸುಪ್ರೀಂಕೋರ್ಟ್‌ನ ಸಿಬ್ಬಂದಿ ಸದಸ್ಯರಲ್ಲಿ ಆಯುರ್ವೇದ ಮತ್ತು ಸಮಗ್ರ ಜೀವನಶೈಲಿ ಅಭ್ಯಾಸಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​​​ಗೆ ಯಾವ ಪ್ರಕರಣವೂ ಚಿಕ್ಕದಲ್ಲ: ಕೇಂದ್ರ ಕಾನೂನು ಸಚಿವರ ಹೇಳಿಕೆಗೆ ಸಿಜೆಐ ಡಿವೈ ಚಂದ್ರಚೂಡ್​​ ಪ್ರತಿಕ್ರಿಯೆ

ಕ್ಷೇಮ ಕೇಂದ್ರವನ್ನು ಸ್ಥಾಪಿಸಲು ನಿಖರವಾದ ಸಿದ್ಧತೆಯನ್ನು ಸಿಜೆಐ ಶ್ಲಾಘಿಸಿದ್ದಾರೆ. ಆಂಟಿ-ಸ್ಕಿಡ್ ಟೈಲ್ಸ್ ಅಥವಾ ಚಿಕಿತ್ಸಾ ಕೊಠಡಿಗಳೇ ಆಗಿರಲಿ ಸೌಲಭ್ಯಗಳನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ. ವಿಶ್ರಾಂತಿ ಕೊಠಡಿಗಳು ನಡೆಯುತ್ತಿರುವ ಚಿಕಿತ್ಸೆಯ ಸ್ವರೂಪಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಇದನ್ನು ಹೆಚ್ಚಿನ ಕಾಳಜಿಯಿಂದ ಪರಿಶೀಲಿಸಲಾಗುತ್ತಿದೆ” ಎಂದು ಸಿಜೆಐ ಹೇಳಿದ್ದಾರೆ.

“ನಾನು ಯೋಗ ಮಾಡುತ್ತೇನೆ. ನಾನು ವೀಗನ್ , ಕಳೆದ ಐದು ತಿಂಗಳಲ್ಲಿ ನಾನು ಸಂಪೂರ್ಣವಾಗಿ ವೀಗನ್ ಡಯಟ್ ಅನುಸರಿಸಿದ್ದೇನೆ. ನಾನು ಅದನ್ನು ಮುಂದುವರಿಸುತ್ತೇನೆ. ನಾವೇನು ತಿನ್ನುತ್ತೇವೆಯೋ ಅದರಿಂದ ಪ್ರಾರಂಭವಾಗುವ ಸಮಗ್ರ ಜೀವನ ಮಾದರಿಯನ್ನು ನಾನು ಅನುಸರಿಸುತ್ತೇನೆ ಮತ್ತು ಅದರ ಬಗ್ಗೆ ಗಮನ ಹರಿಸುತ್ತೇನೆ ಎಂದು ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Thu, 22 February 24

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!