AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿರುವ ದೇಶದ 50 ನ್ಯಾಯಾಧೀಶರ ಮಾಹಿತಿ ಇದೆ: ಸಿಜೆಐ

ಶುಕ್ರವಾರ ಸಂಜೆ ದೆಹಲಿಯಲ್ಲಿ ರಾಮ್ ಜೇಠ್ಮಲಾನಿ ಸ್ಮಾರಕ ಉಪನ್ಯಾಸದ ಸಂದರ್ಭದಲ್ಲಿ ಮಾತನಾಡಿದ ಸಿಜೆಐ, ನಮ್ಮಲ್ಲಿ ತೀರ್ಪುಗಳ ಡೇಟಾ ಇದೆ, ವರದಿ ಮಾಡಬಹುದಾದ ತೀರ್ಪುಗಳ ಡೇಟಾ ನಮ್ಮ ಬಳಿ ಇದೆ, ನ್ಯಾಯಾಧೀಶರು ನೀಡುವ ತೀರ್ಪುಗಳ ಗುಣಮಟ್ಟದ ಬಗ್ಗೆ ನಮ್ಮ ಬಳಿ ಡೇಟಾ ಇದೆ.ಭಾರತದ ಸುಪ್ರೀಂಕೋರ್ಟ್‌ಗೆ ನ್ಯಾಯಾಧೀಶರನ್ನು ಶಿಫಾರಸು ಮಾಡುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸುವುದು (ಈ ಡೇಟಾವನ್ನು ಸಂಗ್ರಹಿಸುವ ಹಿಂದಿನ) ಆಲೋಚನೆಯಾಗಿದೆ

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿರುವ ದೇಶದ 50 ನ್ಯಾಯಾಧೀಶರ ಮಾಹಿತಿ ಇದೆ: ಸಿಜೆಐ
ಸಿಜೆಐ ಚಂದ್ರಚೂಡ್
Follow us
ರಶ್ಮಿ ಕಲ್ಲಕಟ್ಟ
|

Updated on:Sep 15, 2023 | 8:42 PM

ದೆಹಲಿ ಸೆಪ್ಟೆಂಬರ್ 15: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯ (collegium system )ವಿರುದ್ಧದ ಟೀಕೆಗಳನ್ನು ಶುಕ್ರವಾರ ತಳ್ಳಿಹಾಕಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಾ.ಡಿ.ವೈ.ಚಂದ್ರಚೂಡ್ (CJI Chandrachud), ಭವಿಷ್ಯದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಪರಿಗಣಿಸಲ್ಪಡುವ ದೇಶದ ಪ್ರಮುಖ 50 ನ್ಯಾಯಾಧೀಶರಲ್ಲಿ ಪ್ರತಿಯೊಬ್ಬರ ಡೇಟಾವನ್ನು ನಾವು ಹೊಂದಿದ್ದೇವೆ ಎಂದು ಹೇಳಿದ್ದಾರೆ. ಕೊಲಿಜಿಯಂ ವಿರುದ್ಧದ ಟೀಕಾಕಾರರು ಸುಪ್ರೀಂಕೋರ್ಟ್‌ಗೆ (Supreme Court) ಬಡ್ತಿ ನೀಡಲು ನಾವು ಪರಿಗಣಿಸುತ್ತಿರುವ ಜನರನ್ನು ಮೌಲ್ಯಮಾಪನ ಮಾಡಲು ನಮ್ಮ ಬಳಿ ನಿಜವಾದ ಮಾಹಿತಿ ಇಲ್ಲ ಎಂದು ಹೇಳಿದ್ದರು.

ಆದರೆ ಹೆಚ್ಚು ಪಾರದರ್ಶಕತೆಯನ್ನು ಖಚಿತಪಡಿಸುವ ಮತ್ತು ಭಾರತದ ಸುಪ್ರೀಂಕೋರ್ಟ್‌ಗೆ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕವಾಗಿಸುವ ವ್ಯವಸ್ಥೆಯನ್ನು ನಾವು ಜಾರಿಗೆ ತಂದಿದ್ದೇವೆ ಎಂದು ನಾನು ನಿಮಗೆ ಹೇಳುತ್ತೇನೆ. ನಾವು ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ಸಂಶೋಧನೆ ಮತ್ತು ಯೋಜನೆಗಾಗಿ ಕೇಂದ್ರವನ್ನು ಹೊಂದಿದ್ದೇವೆ. ನಾವು ವಿಶಾಲವಾದ ವೇದಿಕೆಯನ್ನು ಸಿದ್ಧಪಡಿಸಿದ್ದೇವೆ, ಅಲ್ಲಿ ನಾವು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಪರಿಗಣಿಸಲ್ಪಡುವ ದೇಶದ ಉನ್ನತ 50 ನ್ಯಾಯಾಧೀಶರಲ್ಲಿ ಪ್ರತಿಯೊಬ್ಬರನ್ನು ಮೌಲ್ಯಮಾಪನ ಮಾಡಿದ್ದೇವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಶುಕ್ರವಾರ ಸಂಜೆ ದೆಹಲಿಯಲ್ಲಿ ರಾಮ್ ಜೇಠ್ಮಲಾನಿ ಸ್ಮಾರಕ ಉಪನ್ಯಾಸದ ಸಂದರ್ಭದಲ್ಲಿ ಮಾತನಾಡಿದ ಸಿಜೆಐ, ನಮ್ಮಲ್ಲಿ ತೀರ್ಪುಗಳ ಡೇಟಾ ಇದೆ, ವರದಿ ಮಾಡಬಹುದಾದ ತೀರ್ಪುಗಳ ಡೇಟಾ ನಮ್ಮ ಬಳಿ ಇದೆ, ನ್ಯಾಯಾಧೀಶರು ನೀಡುವ ತೀರ್ಪುಗಳ ಗುಣಮಟ್ಟದ ಬಗ್ಗೆ ನಮ್ಮ ಬಳಿ ಡೇಟಾ ಇದೆ. ಭಾರತದ ಸುಪ್ರೀಂಕೋರ್ಟ್‌ಗೆ ನ್ಯಾಯಾಧೀಶರನ್ನು ಶಿಫಾರಸು ಮಾಡುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸುವುದು (ಈ ಡೇಟಾವನ್ನು ಸಂಗ್ರಹಿಸುವ ಹಿಂದಿನ) ಆಲೋಚನೆಯಾಗಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನ್ಯಾಯಾಧೀಶರ ನಡುವೆ ಚರ್ಚೆಯನ್ನು ಹಂಚಿಕೊಳ್ಳುವ ಅರ್ಥದಲ್ಲಿ ಪಾರದರ್ಶಕವಾಗಿಲ್ಲ, ನೀವು ನಿಸ್ಸಂಶಯವಾಗಿ ಅದನ್ನು ಮಾಡಲು ಸಾಧ್ಯವಿಲ್ಲ. ಆದರೆ ಉಚ್ಛ ನ್ಯಾಯಾಲಯಗಳು ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯದ ಆಯ್ಕೆಗೆ ವಸ್ತುನಿಷ್ಠ ನಿಯತಾಂಕಗಳನ್ನು ಹಾಕುವ ಮೂಲಕ ಮಾಡಬಹುದು ಎಂದು ಅವರು ಹೇಳಿದ್ದಾರೆ.

ದೀರ್ಘಕಾಲದವರೆಗೆ, ನ್ಯಾಯಾಧೀಶರ ನೇಮಕದ ಕೊಲಿಜಿಯಂ ವ್ಯವಸ್ಥೆಯು ಪಾರದರ್ಶಕವಾಗಿಲ್ಲ ಮತ್ತು ನ್ಯಾಯಾಧೀಶರನ್ನು ನೇಮಿಸುವ ನ್ಯಾಯಾಧೀಶರ ವ್ಯವಸ್ಥೆಯು ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸೂಕ್ತವಲ್ಲ ಎಂಬ ಕಾರಣಕ್ಕಾಗಿ ವಿವಿಧ ವಲಯಗಳಿಂದ ಟೀಕೆಗಳು ಕೇಳಿ ಬಂದಿದೆ.

ಇದನ್ನೂ ಓದಿ: ಎಡಿಟರ್ಸ್ ಗಿಲ್ಡ್ ಪ್ರಕರಣ: ವರದಿ ನೀಡುವುದು ಅಪರಾಧ ಹೇಗಾಗುತ್ತದೆ?: ಸುಪ್ರೀಂಕೋರ್ಟ್

ಕೊಲಿಜಿಯಂ ವ್ಯವಸ್ಥೆಯ ಅಡಿಯಲ್ಲಿ, ಭಾರತದ ಸರ್ವೋಚ್ಚ ನ್ಯಾಯಾಲಯದ ಪ್ರಮುಖ ಮೂರು ನ್ಯಾಯಾಧೀಶರು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಮಾಡಿದ ಶಿಫಾರಸುಗಳ ಆಧಾರದ ಮೇಲೆ ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಿಸುತ್ತಾರೆ. ಅಂತೆಯೇ, ಸುಪ್ರೀಂಕೋರ್ಟ್‌ಗೆ ನ್ಯಾಯಾಧೀಶರ ನೇಮಕಕ್ಕೆ, ಸುಪ್ರೀಂಕೋರ್ಟ್‌ನ ಉನ್ನತ ಐದು ನ್ಯಾಯಾಧೀಶರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕೆಲವು ವರ್ಷಗಳ ಹಿಂದೆ, ನ್ಯಾಯಾಧೀಶರು ನ್ಯಾಯಾಧೀಶರನ್ನು ನೇಮಿಸುವ ಅಭ್ಯಾಸವನ್ನು ರದ್ದುಗೊಳಿಸಲು ಭಾರತ ಸರ್ಕಾರವು ಕಾನೂನನ್ನು ತಂದಿತು, ಆದರೆ ಕಾನೂನನ್ನು ಭಾರತದ ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ಹೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Fri, 15 September 23

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು