AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ಬಗ್ಗೆ ಮೋದಿ ಶ್ಲಾಘನೆ; ಅತಿಥಿಗಳು ಚಪ್ಪಾಳೆ ತಟ್ಟುತ್ತಿರುವಾಗ ವಿನೀತರಾಗಿ ಕೈ ಮುಗಿದ ಸಿಜೆಐ ಚಂದ್ರಚೂಡ್

ನಾನು ಸುಪ್ರೀಂಕೋರ್ಟ್‌ಗೂ ಧನ್ಯವಾದ ಹೇಳುತ್ತೇನೆ. ತೀರ್ಪುಗಳ ಕಾರ್ಯಕಾರಿ ಭಾಗವು ಮಾತೃಭಾಷೆಯಲ್ಲಿ ಇರುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾತೃಭಾಷೆಯ ಮಹತ್ವ ಹೆಚ್ಚುತ್ತಿದೆ ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದ್ದಾರೆ. ಹೀಗೆ ಹೇಳುವಾಗ ಇತರ ಅತಿಥಿಗಳು ಚಪ್ಪಾಳೆ ತಟ್ಟಿದರೆ, ಅತಿಥಿಗಳ ನಡುವೆ ಇದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವಿನೀತರಾಗಿ ಕೈಮುಗಿದುಕೊಂಡಿದ್ದು ಕಂಡು ಬಂತು.

ಸುಪ್ರೀಂಕೋರ್ಟ್ ಬಗ್ಗೆ ಮೋದಿ ಶ್ಲಾಘನೆ; ಅತಿಥಿಗಳು ಚಪ್ಪಾಳೆ ತಟ್ಟುತ್ತಿರುವಾಗ ವಿನೀತರಾಗಿ ಕೈ ಮುಗಿದ ಸಿಜೆಐ ಚಂದ್ರಚೂಡ್
ಡಿವೈ ಚಂದ್ರಚೂಡ್
ರಶ್ಮಿ ಕಲ್ಲಕಟ್ಟ
|

Updated on:Aug 15, 2023 | 2:30 PM

Share

ದೆಹಲಿ ಆಗಸ್ಟ್ 15:  ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ಐತಿಹಾಸಿಕ ಕೆಂಪು ಕೋಟೆಯಲ್ಲಿ ಮಾಡಿದ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ (Independence Day speech) ಪ್ರಾದೇಶಿಕ ಭಾಷೆಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಪ್ರಾದೇಶಿಕ ಭಾಷೆಗಳಲ್ಲಿ ತೀರ್ಪು ನೀಡಲು ಸುಪ್ರೀಂಕೋರ್ಟ್‌ನ(Supreme Court) ಇತ್ತೀಚಿನ ನಡೆಯನ್ನು ಉಲ್ಲೇಖಿಸಿದ ಪ್ರಧಾನಿ, ಮಾತೃಭಾಷೆಯ ಮಹತ್ವ ಹೆಚ್ಚುತ್ತಿದೆ ಎಂದು ಹೇಳಿದರು.

ನಾನು ಸುಪ್ರೀಂಕೋರ್ಟ್‌ಗೂ ಧನ್ಯವಾದ ಹೇಳುತ್ತೇನೆ. ತೀರ್ಪುಗಳ ಕಾರ್ಯಕಾರಿ ಭಾಗವು ಮಾತೃಭಾಷೆಯಲ್ಲಿ ಇರುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾತೃಭಾಷೆಯ ಮಹತ್ವ ಹೆಚ್ಚುತ್ತಿದೆ ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದ್ದಾರೆ. ಹೀಗೆ ಹೇಳುವಾಗ ಇತರ ಅತಿಥಿಗಳು ಚಪ್ಪಾಳೆ ತಟ್ಟಿದರೆ, ಅತಿಥಿಗಳ ನಡುವೆ ಇದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವಿನೀತರಾಗಿ ಕೈಮುಗಿದುಕೊಂಡಿದ್ದು ಕಂಡು ಬಂತು.

ನ್ಯಾಯಾಲಯಗಳು ಪ್ರಾದೇಶಿಕ ಭಾಷೆಗಳಲ್ಲಿ ತೀರ್ಪು ನೀಡುವ ಅಗತ್ಯವನ್ನು ಸಿಜೆಐ ಚಂದ್ರಚೂಡ್ ಒತ್ತಿ ಹೇಳಿದರು. ಜನವರಿಯಲ್ಲಿ, ಸುಪ್ರೀಂಕೋರ್ಟ್ ನೀಡಿದ ತೀರ್ಪುಗಳನ್ನು ಹಿಂದಿ, ತಮಿಳು, ಗುಜರಾತಿ ಮತ್ತು ಒಡಿಯಾ ಎಂಬ ನಾಲ್ಕು ಭಾಷೆಗಳಿಗೆ ಅನುವಾದಿಸಲಾಗುವುದು ಎಂದು ಸಿಜೆಐ ಘೋಷಿಸಿದರು, ಪ್ರಾದೇಶಿಕ ಭಾಷೆಗಳಲ್ಲಿ ತೀರ್ಪುಗಳ ಅನುವಾದವು ನಾಗರಿಕರಿಗೆ ನ್ಯಾಯದ ಪ್ರವೇಶಕ್ಕೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದರು.

ನಾವು ಇತ್ತೀಚೆಗೆ ಅಳವಡಿಸಿಕೊಂಡಿರುವ ಒಂದು ಪ್ರಮುಖ ಉಪಕ್ರಮವೆಂದರೆ ಸುಪ್ರೀಂಕೋರ್ಟ್‌ನ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಅನುವಾದಿಸುವುದು. ಏಕೆಂದರೆ ನಾವು ಬಳಸುವ ಇಂಗ್ಲಿಷ್ ಭಾಷೆಯು 99.9% ನಷ್ಟು ನಾಗರಿಕರಿಗೆ ಗ್ರಹಿಸಲಾಗದ ಭಾಷೆಯಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು ಎಂದಿದ್ದರು ಸಿಜೆಐ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಚಂದ್ರಚೂಡ್ ಅವರು “ಮುಂದಿನ ಹೆಜ್ಜೆ… ಸುಪ್ರೀಂ ಕೋರ್ಟ್‌ನ ತೀರ್ಪುಗಳ ಅನುವಾದಿತ ಪ್ರತಿಗಳನ್ನು ಪ್ರತಿ ಭಾರತೀಯ ಭಾಷೆಯಲ್ಲಿ ಒದಗಿಸುವುದು” ಎಂದು ಹೇಳಿದ್ದು, ನ್ಯಾಯಾಲಯಗಳು ಭಾರತದಾದ್ಯಂತ ನಾಗರಿಕರನ್ನು ತಲುಪಲು ಸಹಾಯ ಮಾಡಲು ತಂತ್ರಜ್ಞಾನದ ಬಳಕೆಯನ್ನು ಒತ್ತಿ ಹೇಳಿದ್ದರು.

ಇದನ್ನೂ ಓದಿ: Independence Day 2023: ಕೆಂಪುಕೋಟೆಯಲ್ಲಿ ಭಾಯಿಯೋ ಔರ್ ಬೆಹೆನೋ ಬಿಟ್ಟು ಬೇರೆ ಪದ ಬಳಸಿ ಭಾಷಣ ಆರಂಭಿಸಿದ ಮೋದಿ

ಈ”ಶ್ಲಾಘನೀಯ” ಸಲಹೆಗಾಗಿ ಪ್ರಧಾನಿ ಮೋದಿ ಅವರು ಸಿಜೆಐ ಅವರನ್ನು ಹೊಗಳಿದ್ದರು. ಇತ್ತೀಚಿನ ಸಮಾರಂಭವೊಂದರಲ್ಲಿ, ಗೌರವಾನ್ವಿತ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು. ಅದಕ್ಕೆ ತಂತ್ರಜ್ಞಾನವನ್ನೂ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ, ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಸಿಜೆಐ ಭಾಷಣದ ವಿಡಿಯೊದ ತುಣಕನ್ನು ಟ್ವೀಟ್ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Tue, 15 August 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ