AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸದಲ್ಲೇ ಮೊದಲು: ಸುಪ್ರೀಂಕೋರ್ಟ್​ಗೆ ನೇಮಕವಾದ 9 ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ

ಮೊದಲಿನಿಂದಲೂ ನಡೆದುಕೊಂಡ ಪದ್ಧತಿಯಂತೆ ಹೊಸದಾಗಿ ನೇಮಕಗೊಳ್ಳುವ ನ್ಯಾಯಾಧೀಶರು, ಸಿಜೆಐ ಅವರ ಕೋರ್ಟ್​ ರೂಮ್​​ನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಆದರೆ ಈ ಬಾರಿ ಹಾಗೆ ಮಾಡಿಲ್ಲ.

ಇತಿಹಾಸದಲ್ಲೇ ಮೊದಲು: ಸುಪ್ರೀಂಕೋರ್ಟ್​ಗೆ ನೇಮಕವಾದ 9 ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ
ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಜೆಐ ಎನ್​.ವಿ.ರಮಣ
TV9 Web
| Updated By: Lakshmi Hegde|

Updated on: Aug 31, 2021 | 1:07 PM

Share

ದೆಹಲಿ: ಇಂದು ಒಟ್ಟು 9 ನ್ಯಾಯಾಧೀಶರು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ(Supreme Court Judges)ಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂವರು ಮಹಿಳಾ ಜಡ್ಜ್​ಗಳು ಸೇರಿ 9 ನ್ಯಾಯಾಧೀಶರಿಗೆ ಮುಖ್ಯ ನ್ಯಾಯಮೂರ್ತಿ (CJI) ಎನ್​.ವಿ.ರಮಣ (NV Ramana) ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ 33ಕ್ಕೆ ಏರಿಕೆಯಾಗಿದ್ದು, ಸಿಜೆಐ ಸೇರಿ ನ್ಯಾಯಮೂರ್ತಿಗಳ ಬಲ 34ಕ್ಕೆ ತಲುಪಿದೆ. ಇನ್ನೊಂದು ಪ್ರಮುಖ ವಿಷಯವೆಂದರೆ, ಇತಿಹಾಸದಲ್ಲಿ ಇದೇ ಮೊದಲಬಾರಿಗೆ 9 ನ್ಯಾಯಾಧೀಶರು, ಸುಪ್ರೀಂ ನ್ಯಾಯಮೂರ್ತಿಗಳಾಗಿ ಒಟ್ಟಿಗೇ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ಮೊದಲಿನಿಂದಲೂ ನಡೆದುಕೊಂಡ ಪದ್ಧತಿಯಂತೆ ಹೊಸದಾಗಿ ನೇಮಕಗೊಳ್ಳುವ ನ್ಯಾಯಾಧೀಶರು, ಸಿಜೆಐ ಅವರ ಕೋರ್ಟ್​ ರೂಮ್​​ನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಆದರೆ ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಪ್ರಮಾಣವಚನ ಸಮಾರಂಭ ಸುಪ್ರೀಂಕೋರ್ಟ್​ಗೆ ಹೊಂದಿಕೊಂಡಿರುವ ಕಟ್ಟಡ ಸಂಕೀರ್ಣದ ಅಡಿಟೋರಿಯಂನಲ್ಲಿ ನಡೆದಿದೆ. ಈ ಬಾರಿ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಹುದ್ದೆಗೆ ನೇಮಕಾತಿ ಮಾಡಲು ಸುಪ್ರೀಂಕೋರ್ಟ್​ ಕೊಲಿಜಿಯಂ 9 ಜಡ್ಜ್​​ಗಳ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅದರಲ್ಲಿ ಕೆಲವು ಹೆಸರುಗಳನ್ನು ಮರುಪರಿಶೀಲನೆ ಮಾಡುವಂತೆ ಸರ್ಕಾರ ಹೇಳಿತ್ತು. ಆದರೆ ಸುಪ್ರೀಂಕೋರ್ಟ್ ಸಿಜೆಐ ಅದನ್ನು ನಿರಾಕರಿಸಿದ್ದರು. ನಂತರ ಸರ್ಕಾರ 9 ಮಂದಿಯ ಹೆಸರಿಗೂ ಅನುಮೋದನೆ ನೀಡಿತ್ತು.

ಸುಪ್ರೀಂಕೋರ್ಟ್​ನ ಹೊಸ ನ್ಯಾಯಮೂರ್ತಿಗಳ ಹೆಸರು ಹೀಗಿದೆ.. 1.ಗುಜರಾತ್​ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ವಿಕ್ರಮ್​ ನಾಥ್ 2.ಕರ್ನಾಟಕ ಹೈಕೋರ್ಟ್​ ಮುಖ್ಯನ್ಯಾಯಮೂರ್ತಿ ಎ.ಎಸ್​.ಒಕಾ 3.ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ 4.ಸಿಕ್ಕಿಂ ಮುಖ್ಯನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ 5. ಕರ್ನಾಟಕ ಹೈಕೋರ್ಟ್​ ನ್ಯಾಯಾಧೀಶೆ ಬಿ.ವಿ.ನಾಗರತ್ನಾ 6. ಮದ್ರಾಸ್​ ಹೈಕೋರ್ಟ್​ ಜಡ್ಜ್​​ ಎಂ.ಎಂ.ಸುಂದರೇಶ್​ 7. ಕೇರಳ  ಹೈಕೋರ್ಟ್​ ನ್ಯಾಯಾಧೀಶ ಸಿ.ಟಿ.ರವಿಕುಮಾರ್​ 8. ಗುಜರಾತ್​ ಹೈಕೋರ್ಟ್​ ನ್ಯಾಯಾಧೀಶ ಬೇಲಾ ಎಂ.ತ್ರಿವೇದಿ 9. ಹಿರಿಯ ನ್ಯಾಯವಾಧಿ ಪಿ.ಎಸ್​.ನರಸಿಂಹ​

ಇದನ್ನೂ ಓದಿ: ಮೇಕೆದಾಟು ಡಿಪಿಆರ್ ಬಗ್ಗೆ ಪ್ರಸ್ತಾಪಿಸಲು ಮುಂದಾದ ಕರ್ನಾಟಕ; ಚರ್ಚೆ ಮಾಡಕೂಡದು ಎಂದು ಆಕ್ಷೇಪ ತೆಗೆದ ತಮಿಳುನಾಡು

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

(CJI Ramana Administers Oath to 9 New SC Judges Including 3 Women)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ