AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸದಲ್ಲೇ ಮೊದಲು: ಸುಪ್ರೀಂಕೋರ್ಟ್​ಗೆ ನೇಮಕವಾದ 9 ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ

ಮೊದಲಿನಿಂದಲೂ ನಡೆದುಕೊಂಡ ಪದ್ಧತಿಯಂತೆ ಹೊಸದಾಗಿ ನೇಮಕಗೊಳ್ಳುವ ನ್ಯಾಯಾಧೀಶರು, ಸಿಜೆಐ ಅವರ ಕೋರ್ಟ್​ ರೂಮ್​​ನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಆದರೆ ಈ ಬಾರಿ ಹಾಗೆ ಮಾಡಿಲ್ಲ.

ಇತಿಹಾಸದಲ್ಲೇ ಮೊದಲು: ಸುಪ್ರೀಂಕೋರ್ಟ್​ಗೆ ನೇಮಕವಾದ 9 ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ
ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಜೆಐ ಎನ್​.ವಿ.ರಮಣ
TV9 Web
| Edited By: |

Updated on: Aug 31, 2021 | 1:07 PM

Share

ದೆಹಲಿ: ಇಂದು ಒಟ್ಟು 9 ನ್ಯಾಯಾಧೀಶರು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ(Supreme Court Judges)ಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂವರು ಮಹಿಳಾ ಜಡ್ಜ್​ಗಳು ಸೇರಿ 9 ನ್ಯಾಯಾಧೀಶರಿಗೆ ಮುಖ್ಯ ನ್ಯಾಯಮೂರ್ತಿ (CJI) ಎನ್​.ವಿ.ರಮಣ (NV Ramana) ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ 33ಕ್ಕೆ ಏರಿಕೆಯಾಗಿದ್ದು, ಸಿಜೆಐ ಸೇರಿ ನ್ಯಾಯಮೂರ್ತಿಗಳ ಬಲ 34ಕ್ಕೆ ತಲುಪಿದೆ. ಇನ್ನೊಂದು ಪ್ರಮುಖ ವಿಷಯವೆಂದರೆ, ಇತಿಹಾಸದಲ್ಲಿ ಇದೇ ಮೊದಲಬಾರಿಗೆ 9 ನ್ಯಾಯಾಧೀಶರು, ಸುಪ್ರೀಂ ನ್ಯಾಯಮೂರ್ತಿಗಳಾಗಿ ಒಟ್ಟಿಗೇ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ಮೊದಲಿನಿಂದಲೂ ನಡೆದುಕೊಂಡ ಪದ್ಧತಿಯಂತೆ ಹೊಸದಾಗಿ ನೇಮಕಗೊಳ್ಳುವ ನ್ಯಾಯಾಧೀಶರು, ಸಿಜೆಐ ಅವರ ಕೋರ್ಟ್​ ರೂಮ್​​ನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಆದರೆ ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಪ್ರಮಾಣವಚನ ಸಮಾರಂಭ ಸುಪ್ರೀಂಕೋರ್ಟ್​ಗೆ ಹೊಂದಿಕೊಂಡಿರುವ ಕಟ್ಟಡ ಸಂಕೀರ್ಣದ ಅಡಿಟೋರಿಯಂನಲ್ಲಿ ನಡೆದಿದೆ. ಈ ಬಾರಿ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಹುದ್ದೆಗೆ ನೇಮಕಾತಿ ಮಾಡಲು ಸುಪ್ರೀಂಕೋರ್ಟ್​ ಕೊಲಿಜಿಯಂ 9 ಜಡ್ಜ್​​ಗಳ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅದರಲ್ಲಿ ಕೆಲವು ಹೆಸರುಗಳನ್ನು ಮರುಪರಿಶೀಲನೆ ಮಾಡುವಂತೆ ಸರ್ಕಾರ ಹೇಳಿತ್ತು. ಆದರೆ ಸುಪ್ರೀಂಕೋರ್ಟ್ ಸಿಜೆಐ ಅದನ್ನು ನಿರಾಕರಿಸಿದ್ದರು. ನಂತರ ಸರ್ಕಾರ 9 ಮಂದಿಯ ಹೆಸರಿಗೂ ಅನುಮೋದನೆ ನೀಡಿತ್ತು.

ಸುಪ್ರೀಂಕೋರ್ಟ್​ನ ಹೊಸ ನ್ಯಾಯಮೂರ್ತಿಗಳ ಹೆಸರು ಹೀಗಿದೆ.. 1.ಗುಜರಾತ್​ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ವಿಕ್ರಮ್​ ನಾಥ್ 2.ಕರ್ನಾಟಕ ಹೈಕೋರ್ಟ್​ ಮುಖ್ಯನ್ಯಾಯಮೂರ್ತಿ ಎ.ಎಸ್​.ಒಕಾ 3.ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ 4.ಸಿಕ್ಕಿಂ ಮುಖ್ಯನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ 5. ಕರ್ನಾಟಕ ಹೈಕೋರ್ಟ್​ ನ್ಯಾಯಾಧೀಶೆ ಬಿ.ವಿ.ನಾಗರತ್ನಾ 6. ಮದ್ರಾಸ್​ ಹೈಕೋರ್ಟ್​ ಜಡ್ಜ್​​ ಎಂ.ಎಂ.ಸುಂದರೇಶ್​ 7. ಕೇರಳ  ಹೈಕೋರ್ಟ್​ ನ್ಯಾಯಾಧೀಶ ಸಿ.ಟಿ.ರವಿಕುಮಾರ್​ 8. ಗುಜರಾತ್​ ಹೈಕೋರ್ಟ್​ ನ್ಯಾಯಾಧೀಶ ಬೇಲಾ ಎಂ.ತ್ರಿವೇದಿ 9. ಹಿರಿಯ ನ್ಯಾಯವಾಧಿ ಪಿ.ಎಸ್​.ನರಸಿಂಹ​

ಇದನ್ನೂ ಓದಿ: ಮೇಕೆದಾಟು ಡಿಪಿಆರ್ ಬಗ್ಗೆ ಪ್ರಸ್ತಾಪಿಸಲು ಮುಂದಾದ ಕರ್ನಾಟಕ; ಚರ್ಚೆ ಮಾಡಕೂಡದು ಎಂದು ಆಕ್ಷೇಪ ತೆಗೆದ ತಮಿಳುನಾಡು

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

(CJI Ramana Administers Oath to 9 New SC Judges Including 3 Women)

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ