AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Case: ಎರಡನೇ ಬಾರಿಗೂ ಆಶೀಶ್​ ಮಿಶ್ರಾಗೆ ನಿರಾಸೆ; ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್​

ಆಶೀಶ್​ ಮಿಶ್ರಾ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಈ ಹಿಂದೆಯೇ ಅವರು ಸಲ್ಲಿಸಿದದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಇದೀಗ ಎರಡನೇ ಬಾರಿಯೂ ಅರ್ಜಿ ವಜಾಗೊಂಡ ಬಗ್ಗೆ ಹಿರಿಯ ಪ್ರಾಸಿಕ್ಯೂಟರ್​ ಎಸ್​. ಪಿ.ಯಾದವ್​ ತಿಳಿಸಿದ್ದಾರೆ.

Lakhimpur Kheri Case: ಎರಡನೇ ಬಾರಿಗೂ ಆಶೀಶ್​ ಮಿಶ್ರಾಗೆ ನಿರಾಸೆ; ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್​
ಆಶೀಶ್​ ಮಿಶ್ರಾ
TV9 Web
| Updated By: Lakshmi Hegde

Updated on:Dec 18, 2021 | 11:12 AM

Share

ಲಖಿಂಪುರ ಖೇರಿ ಹಿಂಸಾಚಾರ(Lakhimpur Kheri  violence)ದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಆಶೀಶ್​ ಮಿಶ್ರಾ(Ashish Mishra)ಗೆ ಕೋರ್ಟ್​ ಈ ಬಾರಿಯೂ ಜಾಮೀನು ನೀಡಲಿಲ್ಲ. ಅಲ್ಲಿಗೆ ಆಶೀಶ್​ ಮಿಶ್ರಾ ಜಾಮೀನು ಕೋರಿ ಎರಡನೇ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ (CJM Court) ವಜಾಗೊಳಿಸಿದೆ. ಅಕ್ಟೋಬರ್​ 3ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್​ ಮಿಶ್ರಾ ತೇನಿ ಪುತ್ರ ಆಶೀಶ್​ ಮಿಶ್ರಾ ಬೆಂಗಾವಲು ವಾಹನ ಹರಿದಿತ್ತು.  ಆ ವಾಹನದಲ್ಲಿ ಆಶೀಶ್​ ಮಿಶ್ರಾ ಇದ್ದಿದ್ದರು ಎಂಬುದನ್ನು ಪ್ರತ್ಯಕ್ಷದರ್ಶಿಗಳು ಹೇಳಿದ್ದರು. ಒಟ್ಟಾರೆ ಈ ಹಿಂಸಾಚಾರದಲ್ಲಿ 8 ಮಂದಿ ಸಾವನ್ನಪ್ಪಿದ್ದರು.

ಆಶೀಶ್​ ಮಿಶ್ರಾ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಈ ಹಿಂದೆಯೇ ಅವರು ಸಲ್ಲಿಸಿದದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಇದೀಗ ಎರಡನೇ ಬಾರಿಯೂ ಅರ್ಜಿ ವಜಾಗೊಂಡ ಬಗ್ಗೆ ಹಿರಿಯ ಪ್ರಾಸಿಕ್ಯೂಟರ್​ ಎಸ್​. ಪಿ.ಯಾದವ್​ ತಿಳಿಸಿದ್ದಾರೆ. ಜಾಮೀನು ಕೊಡಬೇಕೆಂದರೆ, ಪ್ರಸ್ತುತ ಪ್ರಕರಣದಲ್ಲಿ ಕೆಲವು ಮಾನ್ಯಮಾಡುವಂತ ವಿಷಯಗಳು ಇರಬೇಕಾಗುತ್ತವೆ. ಆದರೆ ಅಂಥವು ಯಾವುದೂ ಇಲ್ಲದ ಕಾರಣ ಅರ್ಜಿ ವಜಾಗೊಳಿಸಲಾಗುವುದು ಎಂದು ಕೋರ್ಟ್ ಹೇಳಿದ್ದಾಗಿ ಯಾದವ್ ತಿಳಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಆಶೀಶ್​ ಮಿಶ್ರಾ ಮತ್ತು ಇತರ 12 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್​ಐಟಿಯ ಮುಖ್ಯ ತನಿಖಾಧಿಕಾರಿ ವಿದ್ಯಾರಾಮ್​ ದಿವಾಕರ್​ ನೇತೃತ್ವದ ತಂಡ, ಲಖಿಂಪುರ ಖೇರಿಯಲ್ಲಿ ರೈತರನ್ನು ಕೊಲೆ ಮಾಡುವ ಉದ್ದೇಶವನ್ನಿಟ್ಟುಕೊಂಡೇ ವಾಹನ ಹರಿಸಲಾಗಿತ್ತು ಎಂದು ಕೋರ್ಟ್​ಗೆ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲನೆ ನಡೆಸಿದ ಬಳಿಕ ಕೋರ್ಟ್, ಆರೋಪಿಗಳ ವಿರುದ್ಧ ದಾಖಲಾದ ಐಪಿಸಿ ಸೆಕ್ಷನ್​​ಗಳನ್ನು ಬದಲಿಸಲು ಪೊಲೀಸರಿಗೆ ಅನುಮತಿ ನೀಡಿತ್ತು. ಕೊಲೆಯತ್ನ ಆರೋಪ ಹೊರಿಸಲು ಒಪ್ಪಿಗೆ ನೀಡಿತ್ತು.  ಆಶೀಶ್ ಮಿಶ್ರಾ ಬಂಧನದ ಬಳಿಕ ಅಕ್ಟೋಬರ್ 13ರಂದು ಸಿಜೆಎಂ ನ್ಯಾಯಾಲಯದಲ್ಲಿ ಮೊದಲ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೇ ಆ ನ್ಯಾಯಾಲಯ ಅದೇ ದಿನ ಅರ್ಜಿಯನ್ನು ತಿರಸ್ಕಾರ ಮಾಡಿತು. ಬಳಿಕ ಆ ಅರ್ಜಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯಕ್ಕೆ ಅಕ್ಟೋಬರ್​ 21ರಂದು ಸಲ್ಲಿಕೆಯಾಯಿತು. ನವೆಂಬರ್ 15ರಂದು ಜಿಲ್ಲಾ ನ್ಯಾಯಾಲಯ ಕೂಡ ಜಾಮೀನು ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: Manasa Varanasi: 2021ರ ವಿಶ್ವ ಸುಂದರಿ ಪಟ್ಟವೇರಲು ಸಿದ್ಧವಾದ ಭಾರತದ ಸ್ಪರ್ಧಿ ಮಾನಸ ವಾರಾಣಸಿ ಹೇಗಿದ್ದಾರೆ ಗೊತ್ತಾ?

Published On - 11:09 am, Sat, 18 December 21

ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು