AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನನಗೆ ಟೈಫಾಯ್ಡ್ ಆಗಿದೆ, ಆದರೆ ಪ್ರತಿಭಟನೆ ನಿಲ್ಲಲ್ಲ”: ವೀಡಿಯೋ ಸಂದೇಶದ ಮೂಲಕ CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ

CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ ದೃಢಪಟ್ಟಿದ್ದರೂ, ನೀಟ್ ಪರೀಕ್ಷಾ ಅಕ್ರಮದ ವಿರುದ್ಧದ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ. ತಮ್ಮ ಅನಾರೋಗ್ಯದ ನಡುವೆಯೂ, ದೇಶಾದ್ಯಂತ ನಡೆಯುತ್ತಿರುವ ಚಳವಳಿಗೆ ಅವರು ಬೆಂಬಲ ನೀಡುತ್ತಿದ್ದು, ಪ್ರತಿಭಟನಾಕಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ನನಗೆ ಟೈಫಾಯ್ಡ್ ಆಗಿದೆ, ಆದರೆ ಪ್ರತಿಭಟನೆ ನಿಲ್ಲಲ್ಲ: ವೀಡಿಯೋ ಸಂದೇಶದ ಮೂಲಕ CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ
ಅಭೀಜಿತ್ ದೀಪ್ಕೆ
TV9 Web
| Edited By: |

Updated on: Jul 25, 2026 | 11:22 AM

Share

ದೆಹಲಿ, ಜು.25: ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ (Typhoid)  ದೃಢಪಟ್ಟಿದೆ. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಎಕ್ಸ್​​​​​ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ (X)ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅಭೀಜಿತ್ ದೀಪ್ಕೆ, ತಮ್ಮ ಅನಾರೋಗ್ಯದ ಸ್ಥಿತಿ ಪ್ರಸ್ತುತ ನಡೆಯುತ್ತಿರುವ ಹೋರಾಟದ ಮೇಲೆ ಯಾವುದೇ ಪರಿಣಾಮ ಬೀರಲಾರದು ಎಂದು ತಿಳಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಯಶಸ್ವಿಯಾಗಿರುವುದಕ್ಕೆ ಬೆಂಬಲಿಗರು ಮತ್ತು ಪ್ರತಿಭಟನಾಕಾರರಿಗೆ ದೀಪ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

“ನನಗೆ ಟೈಫಾಯ್ಡ್ ಇರುವುದು ದೃಢಪಟ್ಟಿದೆ. ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ದೇಶಾದ್ಯಂತ ಅತ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ, ಈ ಚಳವಳಿಯನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಹಾಗೂ ಅಭಿನಂದನೆಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡೀಲ್ ಮಾಡಲು ಯಾರಾದರೂ 26 ದಿನ ಹಸಿವಿನಿಂದ ಇರುತ್ತಾರಾ?’: ಟೀಕಿಸಿದವರಿಗೆ ಖಡಕ್​​ ಉತ್ತರ ನೀಡಿದ ಸೋನಂ ವಾಂಗ್ಚುಕ್

ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ 26 ದಿನಗಳ ಸುದೀರ್ಘ ಉಪವಾಸ ಮುಷ್ಕರವನ್ನು ಹಿಂಪಡೆದಿರುವುದಕ್ಕೆ ಅಭೀಜಿತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ಸೋನಮ್ ವಾಂಗ್‌ಚುಕ್ ಸರ್ ತಮ್ಮ ಉಪವಾಸ ಹಿಂಪಡೆದಿರುವುದು ನಮಗೆ ತೀವ್ರ ಸಮಾಧಾನ ತಂದಿದೆ. ಆದರೆ, ಪರೀಕ್ಷಾ ಅಕ್ರಮಗಳ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸುವ ನಮ್ಮ ಬೇಡಿಕೆ ಜೀವಂತವಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಸಿಜೆಪಿ ಹೋರಾಟ ನಿಲ್ಲುವುದಿಲ್ಲ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us