AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರ ಸಂಧಾನ ಮಾತುಕತೆ ನಡೆಸಿತ್ತು. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಾಗಿ ಸಿಜೆಪಿ ಘೋಷಿಸಿದೆ. ಇಂದು ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಜೊತೆಗಿನ ಮೂರನೇ ಸುತ್ತಿನ ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಜೆಪಿ ಈ ವಿಷಯವನ್ನು ಘೋಷಿಸಿದೆ.

ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ
Cjp Leaders With Union MinistersImage Credit source: x
ಸುಷ್ಮಾ ಚಕ್ರೆ
|

Updated on:Jul 25, 2026 | 5:51 PM

Share

ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ತನ್ನ 50 ದಿನಗಳ ಸುದೀರ್ಘ ರಾಷ್ಟ್ರವ್ಯಾಪಿ ಚಳವಳಿಯನ್ನು ಹಿಂಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ.

Published On - 5:50 pm, Sat, 25 July 26

Follow Us