AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೇಶ್ ಫೋಗಟ್​​ಗೆ ರಾಜ್ಯಸಭಾ ಸ್ಥಾನ ನೀಡಲು ಒತ್ತಾಯ; ನಿಯಮಗಳು ಏನು ಹೇಳುತ್ತವೆ?

ಖಾಲಿ ಇರುವ ಸೀಟುಗಳಲ್ಲಿ ಒಂದು ವಿನೇಶ್ ಅವರ ತವರು ರಾಜ್ಯವಾದ ಹರ್ಯಾಣದಿಂದ ಬಂದಿದೆ. ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರ ದೀಪೇಂದರ್ ಹೂಡಾ ಅವರು ಜೂನ್‌ನಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಫೋಗಾಟ್‌ಗೆ ಒಲಂಪಿಕ್ಸ್‌ನ ನಿರಾಸೆಯ ನಂತರ ರಾಜ್ಯಸಭಾ ನಾಮನಿರ್ದೇಶನವನ್ನು ಕೋರಿದ ರಾಜಕಾರಣಿಗಳಲ್ಲಿ ಹೂಡಾ ಕೂಡ ಸೇರಿದ್ದಾರೆ.

ವಿನೇಶ್ ಫೋಗಟ್​​ಗೆ ರಾಜ್ಯಸಭಾ ಸ್ಥಾನ ನೀಡಲು ಒತ್ತಾಯ; ನಿಯಮಗಳು ಏನು ಹೇಳುತ್ತವೆ?
ವಿನೇಶ್ ಫೋಗಟ್
ರಶ್ಮಿ ಕಲ್ಲಕಟ್ಟ
|

Updated on: Aug 09, 2024 | 8:55 PM

Share

ದೆಹಲಿ ಆಗಸ್ಟ್ 09: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪಂದ್ಯಕ್ಕೆ ಮುನ್ನ ನಿಗದಿತ ತೂಕಕ್ಕಿಂತ ಜಾಸ್ತಿ ಇದೆ ಎಂದು ಹೇಳಿ ಪಂದ್ಯದಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅನರ್ಹಗೊಂಡಿದ್ದರು. ಐಒಸಿ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ವಿನೇಶ್ ನಂತರ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದರು. ಕ್ರೀಡಾ ಕಣದಲ್ಲಿ ಒಂದು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದರೆ ಇತ್ತ ರಾಜಕೀಯ ವಲಯದಲ್ಲಿ ವಿನೇಶ್ ಫೋಗಟ್‌ಗೆ ರಾಜ್ಯಸಭಾ (Rajya Sabha) ಸ್ಥಾನ ನೀಡಬೇಕು ಎಂಬ ಬೇಡಿಕೆ, ಒತ್ತಾಯಗಳು ಕೇಳಿಬಂದಿದೆ.

ರಾಜ್ಯಸಭೆ, ಸಂಸತ್ತಿನ ಮೇಲ್ಮನೆ ಮತ್ತು ‘ಹಿರಿಯರ ಮನೆ’ಯ ಸದಸ್ಯರಾಗಲು ಕನಿಷ್ಠ ವಯಸ್ಸು 30. ಆದರೆ ಫೋಗಟ್ ವಯಸ್ಸು 29. ಆಗಸ್ಟ್ 25 ರಂದು ಅವರಿಗೆ ಮೂವತ್ತು ತುಂಬುತ್ತದೆ. ಪ್ರಸ್ತುತ, ರಾಜ್ಯಸಭೆಯಲ್ಲಿ 12 ಸ್ಥಾನಗಳು ಖಾಲಿ ಇವೆ. ಈ ಖಾಲಿ ಹುದ್ದೆಗಳ ಭರ್ತಿಗೆ ಚುನಾವಣೆ ಸೆಪ್ಟೆಂಬರ್ 3 ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. ಹಾಗಾಗಿ ನಾಮಪತ್ರ ಸಲ್ಲಿಸುವ ಹೊತ್ತಿಗೆ ವಿನೇಶ್​​​ಗೆ 30 ವರ್ಷ ಆಗುವುದಿಲ್ಲ. ಆದ್ದರಿಂದ ಆಕೆಗೆ ನಾಮಪತ್ರ ಸಲ್ಲಿಸುವ ಅರ್ಹತೆ ಇರುವುದಿಲ್ಲ.

ಖಾಲಿ ಇರುವ ಸೀಟುಗಳಲ್ಲಿ ಒಂದು ವಿನೇಶ್ ಅವರ ತವರು ರಾಜ್ಯವಾದ ಹರ್ಯಾಣದಿಂದ ಬಂದಿದೆ. ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರ ದೀಪೇಂದರ್ ಹೂಡಾ ಅವರು ಜೂನ್‌ನಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಫೋಗಾಟ್‌ಗೆ ಒಲಂಪಿಕ್ಸ್‌ನ ನಿರಾಸೆಯ ನಂತರ ರಾಜ್ಯಸಭಾ ನಾಮನಿರ್ದೇಶನವನ್ನು ಕೋರಿದ ರಾಜಕಾರಣಿಗಳಲ್ಲಿ ಹೂಡಾ ಕೂಡ ಸೇರಿದ್ದಾರೆ. ಆದರೆ ಆಕೆಯ ಕುಟುಂಬವು ಈ ಕರೆಯನ್ನು ತಿರಸ್ಕರಿಸಿತು.

35 ನೇ ವಯಸ್ಸಿನಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ ಅವರು ಹಿರಿಯರ ಸದನದ ಅತ್ಯಂತ ಕಿರಿಯ ಪ್ರಸ್ತುತ ಸದಸ್ಯರಾಗಿದ್ದಾರೆ. ಅವರು ನವೆಂಬರ್ 11 ರಂದು 36 ನೇ ವರ್ಷಕ್ಕೆ ಕಾಲಿಡುತ್ತಾರೆ. ಚಡ್ಡಾ ಅವರು ಮೇ 2, 2022 ರಂದು, 33ನೇ ವಯಸ್ಸಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಟೀ ಮೀಟಿಂಗ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಭಾಗಿ

ಕ್ರೀಡಾಪಟುಗಳು ಸೇರಿದಂತೆ ರಾಜಕೀಯೇತರರು ರಾಜ್ಯಸಭಾ ಸದಸ್ಯರಾಗಿದ್ದಾರೆ. ಕೆಲವರು ರಾಜಕೀಯ ಪಕ್ಷಗಳ ಸದಸ್ಯರು ಅಥವಾ ನಾಮನಿರ್ದೇಶಿತರಾಗಿ ಸೇರಿದರೆ, ಹೆಚ್ಚಿನವರು ಭಾರತದ ರಾಷ್ಟ್ರಪತಿಗಳಿಂದ ನಾಮನಿರ್ದೇಶಿತರಾಗುತ್ತಾರೆ. ಲೆಜೆಂಡರಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ವಿಶ್ವ ಚಾಂಪಿಯನ್ ಬಾಕ್ಸರ್ ಎಂಸಿ ಮೇರಿ ಕೋಮ್ ರಾಜ್ಯಸಭೆಯಲ್ಲಿದ್ದರು. ನಿವೃತ್ತ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪ್ರಸ್ತುತ ಸದಸ್ಯರಾಗಿದ್ದಾರೆ, ಅವರು ಎಎಪಿಯ ನಾಮನಿರ್ದೇಶಿತರಾಗಿ ಆಯ್ಕೆಯಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!