ಕಲ್ಲಿದ್ದಲು ಬ್ಲಾಕ್‌ಗಳ ಹಂಚಿಕೆಯಲ್ಲಿ ರಾಜ್ಯಗಳಿಗೆ ತಾರತಮ್ಯ ಎಂಬ ಆರೋಪ ಶುದ್ಧ ಸುಳ್ಳು, ಅಂತಹ ಯಾವುದೇ ತಾರತಮ್ಯ ಮಾಡಿಲ್ಲ : ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಕಲ್ಲಿದ್ದಲು ಗಣಿ ಕಾಯಿದೆ, ಗಣಿ ಮತ್ತು ಖನಿಜ ಅಭಿವೃದ್ಧಿಯ ಕಾಯಿದೆಗಳು ಗಣಿ ಹಂಚಿಕೆಯ ಪಾರದರ್ಶಕ ಕಾರ್ಯವಿಧಾನವನ್ನು ಒದಗಿಸುತ್ತವೆ. 2020 ರ ಜೂನ್ 18 ರಂದು ವಾಣಿಜ್ಯ ಗಣಿಗಾರಿಕೆಯನ್ನು ಪ್ರಾರಂಭಿಸಿದ ನಂತರ ಅತ್ಯಂತ ಪಾರದರ್ಶಕ ಹರಾಜು ವಿಧಾನವನ್ನು ಅನುಸರಿಸಲಾಗುತ್ತಿದೆ - ಕೇಂದ್ರ ಕಲ್ಲಿದ್ದಲು ಸಚಿವ ಜೋಶಿ

ಕಲ್ಲಿದ್ದಲು ಬ್ಲಾಕ್‌ಗಳ ಹಂಚಿಕೆಯಲ್ಲಿ ರಾಜ್ಯಗಳಿಗೆ ತಾರತಮ್ಯ ಎಂಬ ಆರೋಪ ಶುದ್ಧ ಸುಳ್ಳು, ಅಂತಹ ಯಾವುದೇ ತಾರತಮ್ಯ ಮಾಡಿಲ್ಲ :  ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ
Follow us
| Updated By: ಸಾಧು ಶ್ರೀನಾಥ್​

Updated on: Dec 09, 2022 | 9:25 PM

ನವದೆಹಲಿ: ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆಯಲ್ಲಿ ಒಂದು ರಾಜ್ಯ ಸರ್ಕಾರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ ಎಂಬ ಆರೋಪಗಳು ಶುದ್ಧ ಸುಳ್ಳು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ (Clarification) ಹೊರಡಿಸಲಾಗಿದ್ದು, ಕಲ್ಲಿದ್ದಲು ಬ್ಲಾಕ್ಸ್ ಗಳ (Coal Blocks) ಹಂಚಿಕೆಯಲ್ಲಿ ಯಾವುದೇ ಒಂದು ರಾಜ್ಯಕ್ಕೆ ವಿಶೇಷ ಪ್ರಾಶಸ್ತ್ಯ ನೀಡಲು ಯಾವುದೇ ವಿಶೇಷ ನಿಯಮ ಅಥವಾ ವ್ಯಾಪ್ತಿ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.

2015 ರಲ್ಲಿ GMDC (ಗುಜರಾತ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್) ಗೆ ಎರಡು ಲಿಗ್ನೈಟ್ ಬ್ಲಾಕ್ಗಳನ್ನು ಹಂಚಲಾಯಿತು.‌ ಅದೇ ರೀತಿ, ಮೂರು ಕಲ್ಲಿದ್ದಲು ಬ್ಲಾಕ್‌ಗಳನ್ನು ತೆಲಂಗಾಣದ SCCL ಗೆ (Singareni Collieries Company Ltd) ಹಂಚಲಾಯಿತು.

ಒಡಿಶಾದ ನೈನಿ ಕಲ್ಲಿದ್ದಲು ಬ್ಲಾಕ್, ತೆಲಂಗಾಣದ ಪೆಂಗಡಪ್ಪ ಕಲ್ಲಿದ್ದಲು ಬ್ಲಾಕ್, ಒಡಿಶಾದ ಹೊಸ ಪತ್ರಪರ ಕಲ್ಲಿದ್ದಲು ಬ್ಲಾಕ್ ಗಳನ್ನ ಹಂಚಿಕೆ ಮಾಡಲಾಗಿದೆ. 2015 ರಲ್ಲಿ SCCL ಗೆ ಮಂಜೂರು ಮಾಡಲಾದ ನೈನಿ ಬ್ಲಾಕ್ ಗೆ ತೆಲಂಗಾಣ ಸರ್ಕಾರವು ಎಲ್ಲಾ ಅನುಮತಿಗಳನ್ನು ಪಡೆಯುವಲ್ಲಿ ಅನುಕೂಲ ಮಾಡಿಕೊಟ್ಟಿದ್ದರೂ ಸಹ ಇನ್ನೂ ಅದು ಕಾರ್ಯನಿರ್ವಹಿಸುತ್ತಿಲ್ಲ. ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯಿದೆ, 1957 ಮತ್ತು ಕಲ್ಲಿದ್ದಲು ಗಣಿಗಳ (ವಿಶೇಷ ನಿಬಂಧನೆಗಳು) ಕಾಯಿದೆ, 2015 ರ ಮೂಲಕ ಕಲ್ಲಿದ್ದಲು ಬ್ಲಾಕ್‌ಗಳ ಹರಾಜನ್ನು ನಡೆಸಲಾಗುತ್ತಿದೆ.

Also Read: ಪಾರದರ್ಶಕವಾಗಿ ಕಲ್ಲಿದ್ದಲು ಬ್ಲಾಕ್ಸ್ ಹರಾಜು ನಡೆದಿದೆ, ಹಗರಣ ನಡೆಸಿದವರಿಗೆ ಹರಾಜು ವಿರೋಧಿಸುವ ನೈತಿಕತೆಯಿಲ್ಲ -ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಲ್ಲಿದ್ದಲು ಗಣಿಗಳ (ವಿಶೇಷ ನಿಬಂಧನೆಗಳು) ಕಾಯಿದೆ, ಗಣಿ ಮತ್ತು ಖನಿಜ ಅಭಿವೃದ್ಧಿಯ ಕಾಯಿದೆಗಳು ಗಣಿ ಹಂಚಿಕೆಯ ಪಾರದರ್ಶಕ ಕಾರ್ಯವಿಧಾನವನ್ನು ಒದಗಿಸುತ್ತವೆ. 2020 ರ ಜೂನ್ 18 ರಂದು ವಾಣಿಜ್ಯ ಗಣಿಗಾರಿಕೆಯನ್ನು ಪ್ರಾರಂಭಿಸಿದ ನಂತರ ಅತ್ಯಂತ ಪಾರದರ್ಶಕ ಹರಾಜು ವಿಧಾನವನ್ನು ಅನುಸರಿಸಲಾಗುತ್ತಿದೆ.

ಇದನ್ನೂ ಓದಿ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ ಕಲ್ಲಿದ್ದಲು ಉತ್ಪಾದನೆ: ಸಚಿವ ಪ್ರಲ್ಹಾದ್ ಜೋಶಿ ಮುಕುಟಕ್ಕೆ ಮತ್ತೊಂದು ಗರಿ

ಅದರ ಅಡಿಯಲ್ಲಿ ಎಲ್ಲಾ ಕಲ್ಲಿದ್ದಲು/ಲಿಗ್ನೈಟ್ ಮಾರಾಟಕ್ಕೆ ಹರಾಜು ಮಾರ್ಗದ ಮೂಲಕ ಲಿಗ್ನೈಟ್ ಬ್ಲಾಕ್‌ಗಳನ್ನು ನೀಡಲಾಗಿದೆ. ಯಾವುದೇ ರಾಜ್ಯ ಅಥವಾ ಕೇಂದ್ರ ಪಿಎಸ್‌ಯುಗೆ ವಾಣಿಜ್ಯ ಗಣಿಗಾರಿಕೆಯನ್ನು ಪ್ರಾರಂಭಿಸಿದ ನಂತರ ಹಂಚಿಕೆ ಮಾರ್ಗದ ಮೂಲಕ ಯಾವುದೇ ಕಲ್ಲಿದ್ದಲು/ಲಿಗ್ನೈಟ್ ಬ್ಲಾಕ್‌ಗಳನ್ನು ನೀಡಲಾಗಿಲ್ಲ ಎಂದು ಕಲ್ಲಿದ್ದಲು ಸಚಿವಾಲಯ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸುವ ಇದರೊಂದಿಗೆ ಈ ಸಂಬಂಧ ಕೇಳಿಬಂದಿರುವ ಆರೋಪಗಳೆಲ್ಲ ಸುಳ್ಳು ಎಂದು ಮನವರಿಕೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ