AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JNU ಜೆಎನ್​​ಯು ಕ್ಯಾಂಪಸ್​​ನಲ್ಲಿ ವೆಜ್, ನಾನ್ ವೆಜ್ ತರ್ಕ; ಎಡಪಂಥೀಯ ಮತ್ತು ಎಬಿವಿಪಿ ವಿದ್ಯಾರ್ಥಿಗಳ ನಡುವೆ ಸಂಘರ್ಷ

ವಿಶ್ವವಿದ್ಯಾಲಯದ ಒಳಗೆ ಎಡಪಂಥೀಯ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆ ನಡುವೆ  ಈ ಘರ್ಷಣೆ ನಡೆದಿದೆ. ತಾವು ಮಾಂಸಾಹಾರ ತಿನ್ನುವುದಕ್ಕೆ ಎಬಿವಿಪಿ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆ  ಆರೋಪಿಸಿದೆ.

JNU ಜೆಎನ್​​ಯು ಕ್ಯಾಂಪಸ್​​ನಲ್ಲಿ ವೆಜ್, ನಾನ್ ವೆಜ್ ತರ್ಕ; ಎಡಪಂಥೀಯ ಮತ್ತು ಎಬಿವಿಪಿ ವಿದ್ಯಾರ್ಥಿಗಳ ನಡುವೆ ಸಂಘರ್ಷ
ಜೆಎನ್​ಯು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 10, 2022 | 10:34 PM

Share

ದೆಹಲಿ:ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ಕ್ಯಾಂಟೀನ್‌ನಲ್ಲಿ ನವರಾತ್ರಿ ಪೂಜೆಯ ವೇಳೆ ಮಾಂಸಾಹಾರ ಸೇವಿಸುವ ಮತ್ತು ಬಡಿಸುವ ಬಗ್ಗೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ವಿಶ್ವವಿದ್ಯಾಲಯದ ಒಳಗೆ ಎಡಪಂಥೀಯ (Left wing) ಮತ್ತು ಎಬಿವಿಪಿ (ABVP) ವಿದ್ಯಾರ್ಥಿ ಸಂಘಟನೆ ನಡುವೆ  ಈ ಘರ್ಷಣೆ ನಡೆದಿದೆ. ತಾವು ಮಾಂಸಾಹಾರ ತಿನ್ನುವುದಕ್ಕೆ ಎಬಿವಿಪಿ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆ  ಆರೋಪಿಸಿದೆ. ಈ ಆರೋಪವನ್ನು  ಎಬಿವಿಪಿ ತಳ್ಳಿ ಹಾಕಿದ್ದು, ಎಡಪಂಥೀಯ ಸಂಘಟನೆಗಳು ರಾಮನವಮಿ ಪ್ರಯುಕ್ತ ಹಾಸ್ಟೆಲ್​​ ನಲ್ಲಿ ಪೂಜೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿವೆ ಎಂದಿವೆ. ಜೆಎನ್‌ಯು ಆಡಳಿತ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಲಾಗಿದೆ. ವಿಶ್ವವಿದ್ಯಾನಿಲಯ ಆಡಳಿತ ಈ ಬಗ್ಗೆ ತನಿಖೆ ಆರಂಭಿಸಿದೆ. ಎಬಿವಿಪಿ ದ್ವೇಷ ರಾಜಕಾರಣ ಮತ್ತು ವಿಭಜಿಸುವ ಅಜೆಂಡಾವನ್ನು ಪ್ರದರ್ಶಿಸುತ್ತಿದೆ ಎಂದು ಎಡಪಂಥೀಯ ವಿದ್ಯಾರ್ಥಿಗಳು ಆರೋಪಿಸಿ ಕಾವೇರಿ ಹಾಸ್ಟೆಲ್‌ನಲ್ಲಿ ಇಂದು ಹಿಂಸಾತ್ಮಕ ವಾತಾವರಣ ನಿರ್ಮಿಸಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಊಟದ ಮೆನುವನ್ನು ಬದಲಾಯಿಸಲು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸಾಮಾನ್ಯವಾದ ಮಾಂಸಾಹಾರವನ್ನು ಮಾಡದಂತೆ ಎಬಿವಿಪಿ ಮೆಸ್ ಸಮಿತಿಯನ್ನು ಒತ್ತಾಯಿಸಿದೆ ಎಂದು ಎಡಪಂಥೀಯ ಸಂಘಟನೆಗಳು ದೂರಿವೆ. ಮೆನುವು ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಹೊಂದಿದ್ದು ಮತ್ತು ವಿದ್ಯಾರ್ಥಿಗಳು ತಮ್ಮ ಇಚ್ಛೆಗೆ ಅನುಗುಣವಾಗಿ ಆಯ್ಕೆ ಮಾಡಲು ಅನುಮತಿಸಲಾಗಿದೆ.

ಜೆಎನ್‌ಯು ಮತ್ತು ಅದರ ಹಾಸ್ಟೆಲ್‌ಗಳು ಎಲ್ಲರನ್ನು ಒಳಗೊಳ್ಳುವ ಸ್ಥಳಗಳಾಗಿವೆ ಮತ್ತು ಯಾವುದೇ ನಿರ್ದಿಷ್ಟ ವಿಭಾಗಕ್ಕೆ ಸೇರಿದ್ದು ಅಲ್ಲ. ವಿಭಿನ್ನ ದೈಹಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವಿದ್ಯಾರ್ಥಿಗಳು ವಿವಿಧ ಆಹಾರ ಆದ್ಯತೆಗಳನ್ನು ಹೊಂದಿದ್ದಾರೆ ಮತ್ತು ಅದನ್ನು ಗೌರವಿಸಬೇಕು ಎಂದು ಎಡಪಂಥೀಯ ವಿದ್ಯಾರ್ಥಿಗಳು ಹೇಳಿದ್ದಾರೆ.ಏತನ್ಮಧ್ಯೆ, ರಾಮನವಮಿ ಪೂಜೆಯು ಮಧ್ಯಾಹ್ನ 3.30 ಕ್ಕೆ ಪ್ರಾರಂಭವಾಗಬೇಕಿತ್ತು, ಆದರೆ ಎಡಪಂಥೀಯರು ಸೃಷ್ಟಿಸಿದ ಗದ್ದಲದಿಂದಾಗಿ ಅದು ಸಂಜೆ 5 ಗಂಟೆಗೆ ಮಾತ್ರ ಪ್ರಾರಂಭವಾಗಲು ಸಾಧ್ಯವಾಯಿತು ಎಂದು ಎಬಿವಿಪಿ ಹೇಳಿದೆ. ವಿಶ್ವವಿದ್ಯಾನಿಲಯವು ಇಫ್ತಾರ್ ಮತ್ತು ರಾಮ ನವಮಿಯ ಶಾಂತಿಯುತ ಆಚರಣೆಯನ್ನು ಏಕಕಾಲಿಕವಾಗಿ ನಡೆಸುತ್ತದೆ. ಈ ಏಕಕಾಲಿಕ ಆಚರಣೆಯು ಮತ್ತೊಮ್ಮೆ ಜೆಎನ್​​ಯು ವಿಭಿನ್ನ ಗುರುತುಗಳು ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಭಾರತದ ಸೂಕ್ಷ್ಮರೂಪವನ್ನು ಪ್ರತಿನಿಧಿಸುತ್ತದೆ ಎಂಬ ಅಂಶವನ್ನು ಮತ್ತೊಮ್ಮೆ ಸ್ಥಾಪಿಸಿತು. ಆದರೆ, ಎಡಪಂಥೀಯರು ದೇಶದಲ್ಲಾಗಲಿ, ಕ್ಯಾಂಪಸ್‌ನಲ್ಲಾಗಲಿ ಈ ಸತ್ಯವನ್ನು ಅರಗಿಸಿಕೊಳ್ಳುತ್ತಿಲ್ಲ. ಅವರು ದೇಶವನ್ನು ಒಡೆಯಲು ಯೋಜಿಸುತ್ತಿರುವಂತೆ, ಇಲ್ಲಿಯೂ ಅವರು ‘ಮಾಂಸಾಹಾರಿ ಆಹಾರ’ ವಿಷಯವನ್ನು ತಂದು ವಿದ್ಯಾರ್ಥಿಗಳಲ್ಲಿ ಗಲಾಟೆ ಮಾಡಲು ಯೋಜಿಸಿದ್ದಾರೆ ಎಂದು ಎಬಿವಿಪಿ ಹೇಳಿರುವುದಾಗಿ  ನ್ಯೂಸ್ 18 ವರದಿ ಮಾಡಿದೆ.

ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದು ಹಲವು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಪಿಟಿಐಗೆ ತಿಳಿಸಿದ್ದಾರೆ.

“ಈಗ ಯಾವುದೇ ಹಿಂಸಾಚಾರ ನಡೆಯುತ್ತಿಲ್ಲ. ಪ್ರತಿಭಟನೆಯನ್ನು ನಡೆಸಲಾಯಿತು, ಅದು ಮುಗಿದಿದೆ. ನಾವೆಲ್ಲರೂ ನಮ್ಮ ತಂಡದೊಂದಿಗೆ ಇಲ್ಲಿ ಬಂದಿದ್ದೇವೆ. ವಿಶ್ವವಿದ್ಯಾನಿಲಯದ ಕೋರಿಕೆಯ ಮೇರೆಗೆ ನಾವು ಇಲ್ಲಿಗೆ ಬಂದಿದ್ದೇವೆ. ನಾವು ಶಾಂತಿಯನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದರು. ಘಟನೆಯ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಹೆಸರು ಹೇಳಲು ನಿರಾಕರಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಕೆಲ ವಿದ್ಯಾರ್ಥಿಗಳು ಜಗಳವಾಡಿ ಗಾಯಗೊಂಡಿದ್ದಾರೆ. ನಮ್ಮ ಸಿಬ್ಬಂದಿಯನ್ನು ಕಾಲೇಜಿನ ಹೊರಗೆ ನಿಯೋಜಿಸಲಾಗಿತ್ತು. ಅಧ್ಯಾಪಕರಿಂದಲೂ ಕರೆ ಬಂದಿತ್ತು. ಪೊಲೀಸ್ ಸಿಬ್ಬಂದಿ ಈಗ ಜೆಎನ್‌ಯುನಲ್ಲಿದ್ದಾರೆ. ಅಲ್ಲಿ ಹಿಂಸೆ ಇಲ್ಲ. ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:10ನೇ ತರಗತಿವರೆಗೆ ಹಿಂದಿ ಕಡ್ಡಾಯ ಎಂಬುದು ಹೇರಿಕೆ; ಕೇಂದ್ರದ ನಡೆಗೆ ಈಶಾನ್ಯ ರಾಜ್ಯಗಳ ಸಂಘಟನೆಗಳಿಂದ ವಿರೋಧ

Published On - 9:51 pm, Sun, 10 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ