AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಜೆಎನ್​​ಯುನಲ್ಲಿ ಸಂಘರ್ಷ; ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ ನಡುವೆ ಜಟಾಪಟಿ

Clashes In JNU ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ಗಳ ನಡುವಿನ ಘರ್ಷಣೆ ನಡೆದಿದ್ದು ಹಲವಾರು ವಿದ್ಯಾರ್ಥಿಗಳಿಗೆ ಗಾಯವಾಗಿದೆ.

Breaking ಜೆಎನ್​​ಯುನಲ್ಲಿ ಸಂಘರ್ಷ; ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ ನಡುವೆ ಜಟಾಪಟಿ
TV9 Web
| Edited By: |

Updated on:Aug 22, 2022 | 7:41 PM

Share

ದೆಹಲಿ:ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (Jawaharlal Nehru University) ವಿದ್ಯಾರ್ಥಿಗಳ ಗುಂಪು ಎರಡು ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಶಾಂತಿಯುತವಾಗಿ ಒತ್ತಾಯಿಸುತ್ತಿರುವಾಗ ಸಂಸ್ಥೆಯಲ್ಲಿ ನಿಯೋಜನೆಗೊಂಡ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಬಿವಿಪಿ (ABVP) ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ಗಳ ನಡುವಿನ ಘರ್ಷಣೆ ನಡೆದಿದ್ದು ಹಲವಾರು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.   ಬೆಳಗ್ಗೆ ಸುಮಾರು 11ಗಂಟೆ ವೇಳೆ ಐವರು ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಬಗ್ಗೆ ವಿಚಾರಿಸಲು ಸ್ಕಾಲರ್​​ ಶಿಪ್ ವಿಭಾಗಕ್ಕೆ ಹೋಗಿದ್ದಾರೆ. ಸ್ಕಾಲರ್​ಶಿಪ್ ಬಗ್ಗೆ ವಿಚಾರಿಸುವ ಸಮಯ ಅದಾಗಿತ್ತು ಎಂದು ಜೆಎನ್ ಯುವಿನ ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಜತೆ ಸೆಕ್ಯೂರಿಟಿ ಗಾರ್ಡ್ ಗಳು ಕೆಟ್ಟದಾಗಿ ವರ್ತಿಸಿ ನಿಂದಿಸಿದ್ದಾರೆ ಎಂದು  ರೋಹಿತ್ ಕುಮಾರ್ ಹೇಳಿದ್ದಾರೆ. ಈ ವಿಭಾಗದಲ್ಲಿ ನಾಲ್ವರು ಸಿಬ್ಬಂದಿಗಳಷ್ಟೇ ಉಳಿದಿದ್ದಾರೆ. ಈ ಹಿಂದೆ 17 ಸಿಬ್ಬಂದಿಗಳು ಅಲ್ಲಿದ್ದರು. ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಕಷ್ಟ ಅನುಭವಿಸುತ್ತಿದ್ದಾರೆ. ಅವರು ನಾನ್- ಎನ್ ಇಟಿ ಸ್ಕಾಲರ್ ಶಿಪ್, ಎಂಸಿಎಂ (Merit-cum-Means)  ಅಥವಾ ಜೆಆರ್ ಎಫ್ ಸ್ಕಾಲರ್ ಶಿಪ್ ಪಡೆದಿಲ್ಲ ಎಂದು  ರೋಹಿತ್ ಹೇಳಿದ್ದಾರೆ.

ಶೀಘ್ರದಲ್ಲೇ ನಾನು ದೆಹಲಿ ಪೊಲೀಸರಿಗೆ ದೂರು ನೀಡಲಿದ್ದೇವೆ ಎಂದು ಗಾಯಗೊಂಡ ವಿದ್ಯಾರ್ಥಿಗಳು ಹೇಳಿದ್ದಾರೆ.

ಘಟನಾಸ್ಥಳದಲ್ಲಿನ ವಿಡಿಯೊಗಳನ್ನು ನೋಡಿದರೆ ಅದರಲ್ಲಿ ಸಮವಸ್ತ್ರ ಧರಿಸಿದ ಭದ್ರತಾ ಸಿಬ್ಬಂದಿಗಳ ಗುಂಪೊಂದು ಆಡಳಿತ ಕಚೇರಿಯ ಮೆದೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಗುಂಪನ್ನು ತಳ್ಳುವ ಮತ್ತು ತಡೆಯಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಕೆಲವು ವಿಡಿಯೊಗಳಲ್ಲಿ ನೆಲದ ಮೇಲೆ ರಕ್ತದ ಕಲೆಗಳು, ಡಸ್ಟ್‌ಬಿನ್‌ಗಳಲ್ಲಿ ರಕ್ತಸಿಕ್ತ ಡ್ರೆಸ್ಸಿಂಗ್ ಮತ್ತು ನೆಲದ ಮೇಲೆ ಚದುರಿದ ಗಾಜುಗಳನ್ನು ಕಾಣಬಹುದು ಹಲವಾರು ವಿದ್ಯಾರ್ಥಿಗಳು, ತಮ್ಮ ಗಾಯಗಳನ್ನು  ತೋರಿಸುತ್ತಾ ನಮ್ಮ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ ಗಂಭೀರ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ಅಧಿಕಾರಕಾರಿಗಳು ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಾರೆ, ಸುಳ್ಳು ಹೇಳುತ್ತಾರೆ ಮತ್ತು ಸಮಯ ನೀಡಿದರೂ ತಮ್ಮ ದೂರುಗಳನ್ನು ಪರಿಹರಿಸುವುದಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಹಣ ಬಿಡುಗಡೆಯಾಗುವವರೆಗೂ ಕಚೇರಿಯಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದು ವಿಶ್ವವಿದ್ಯಾನಿಲಯ ಆಡಳಿತ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.

Published On - 6:20 pm, Mon, 22 August 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?