AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಜೆಎನ್​​ಯುನಲ್ಲಿ ಸಂಘರ್ಷ; ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ ನಡುವೆ ಜಟಾಪಟಿ

Clashes In JNU ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ಗಳ ನಡುವಿನ ಘರ್ಷಣೆ ನಡೆದಿದ್ದು ಹಲವಾರು ವಿದ್ಯಾರ್ಥಿಗಳಿಗೆ ಗಾಯವಾಗಿದೆ.

Breaking ಜೆಎನ್​​ಯುನಲ್ಲಿ ಸಂಘರ್ಷ; ಎಬಿವಿಪಿ ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ ನಡುವೆ ಜಟಾಪಟಿ
TV9 Web
| Edited By: |

Updated on:Aug 22, 2022 | 7:41 PM

Share

ದೆಹಲಿ:ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (Jawaharlal Nehru University) ವಿದ್ಯಾರ್ಥಿಗಳ ಗುಂಪು ಎರಡು ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಶಾಂತಿಯುತವಾಗಿ ಒತ್ತಾಯಿಸುತ್ತಿರುವಾಗ ಸಂಸ್ಥೆಯಲ್ಲಿ ನಿಯೋಜನೆಗೊಂಡ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಬಿವಿಪಿ (ABVP) ಸದಸ್ಯರು ಮತ್ತು ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್‌ಗಳ ನಡುವಿನ ಘರ್ಷಣೆ ನಡೆದಿದ್ದು ಹಲವಾರು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.   ಬೆಳಗ್ಗೆ ಸುಮಾರು 11ಗಂಟೆ ವೇಳೆ ಐವರು ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಬಗ್ಗೆ ವಿಚಾರಿಸಲು ಸ್ಕಾಲರ್​​ ಶಿಪ್ ವಿಭಾಗಕ್ಕೆ ಹೋಗಿದ್ದಾರೆ. ಸ್ಕಾಲರ್​ಶಿಪ್ ಬಗ್ಗೆ ವಿಚಾರಿಸುವ ಸಮಯ ಅದಾಗಿತ್ತು ಎಂದು ಜೆಎನ್ ಯುವಿನ ಎಬಿವಿಪಿ ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಜತೆ ಸೆಕ್ಯೂರಿಟಿ ಗಾರ್ಡ್ ಗಳು ಕೆಟ್ಟದಾಗಿ ವರ್ತಿಸಿ ನಿಂದಿಸಿದ್ದಾರೆ ಎಂದು  ರೋಹಿತ್ ಕುಮಾರ್ ಹೇಳಿದ್ದಾರೆ. ಈ ವಿಭಾಗದಲ್ಲಿ ನಾಲ್ವರು ಸಿಬ್ಬಂದಿಗಳಷ್ಟೇ ಉಳಿದಿದ್ದಾರೆ. ಈ ಹಿಂದೆ 17 ಸಿಬ್ಬಂದಿಗಳು ಅಲ್ಲಿದ್ದರು. ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಕಷ್ಟ ಅನುಭವಿಸುತ್ತಿದ್ದಾರೆ. ಅವರು ನಾನ್- ಎನ್ ಇಟಿ ಸ್ಕಾಲರ್ ಶಿಪ್, ಎಂಸಿಎಂ (Merit-cum-Means)  ಅಥವಾ ಜೆಆರ್ ಎಫ್ ಸ್ಕಾಲರ್ ಶಿಪ್ ಪಡೆದಿಲ್ಲ ಎಂದು  ರೋಹಿತ್ ಹೇಳಿದ್ದಾರೆ.

ಶೀಘ್ರದಲ್ಲೇ ನಾನು ದೆಹಲಿ ಪೊಲೀಸರಿಗೆ ದೂರು ನೀಡಲಿದ್ದೇವೆ ಎಂದು ಗಾಯಗೊಂಡ ವಿದ್ಯಾರ್ಥಿಗಳು ಹೇಳಿದ್ದಾರೆ.

ಘಟನಾಸ್ಥಳದಲ್ಲಿನ ವಿಡಿಯೊಗಳನ್ನು ನೋಡಿದರೆ ಅದರಲ್ಲಿ ಸಮವಸ್ತ್ರ ಧರಿಸಿದ ಭದ್ರತಾ ಸಿಬ್ಬಂದಿಗಳ ಗುಂಪೊಂದು ಆಡಳಿತ ಕಚೇರಿಯ ಮೆದೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಗುಂಪನ್ನು ತಳ್ಳುವ ಮತ್ತು ತಡೆಯಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಕೆಲವು ವಿಡಿಯೊಗಳಲ್ಲಿ ನೆಲದ ಮೇಲೆ ರಕ್ತದ ಕಲೆಗಳು, ಡಸ್ಟ್‌ಬಿನ್‌ಗಳಲ್ಲಿ ರಕ್ತಸಿಕ್ತ ಡ್ರೆಸ್ಸಿಂಗ್ ಮತ್ತು ನೆಲದ ಮೇಲೆ ಚದುರಿದ ಗಾಜುಗಳನ್ನು ಕಾಣಬಹುದು ಹಲವಾರು ವಿದ್ಯಾರ್ಥಿಗಳು, ತಮ್ಮ ಗಾಯಗಳನ್ನು  ತೋರಿಸುತ್ತಾ ನಮ್ಮ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ ಗಂಭೀರ ಗಾಯಗಳಾಗಿವೆ ಎಂದು ಹೇಳಿದ್ದಾರೆ.

ಅಧಿಕಾರಕಾರಿಗಳು ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಾರೆ, ಸುಳ್ಳು ಹೇಳುತ್ತಾರೆ ಮತ್ತು ಸಮಯ ನೀಡಿದರೂ ತಮ್ಮ ದೂರುಗಳನ್ನು ಪರಿಹರಿಸುವುದಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಹಣ ಬಿಡುಗಡೆಯಾಗುವವರೆಗೂ ಕಚೇರಿಯಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದು ವಿಶ್ವವಿದ್ಯಾನಿಲಯ ಆಡಳಿತ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.

Published On - 6:20 pm, Mon, 22 August 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ