AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ; ದೆಹಲಿ ವಿವಿಯ 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್

BBC documentary on PM Modi ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಜಮಾಯಿಸಿ ಸ್ಕ್ರೀನಿಂಗ್ ಅನ್ನು ನಿಲ್ಲಿಸಲು ಪ್ರದೇಶದಲ್ಲಿ 144 ಸೆಕ್ಷನ್ ಹೇರಿರುವುದನ್ನು ವಿರೋಧಿಸಿದರು. ಸಂಜೆಯ ವೇಳೆಗೆ ವಿದ್ಯಾರ್ಥಿಗಳ ಗುಂಪು ಪೊಲೀಸರು ಮತ್ತು ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿಯೊಂದಿಗೆ ಜಟಾಪಟಿ ನಡೆಸಿದೆ

ಮೋದಿ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ; ದೆಹಲಿ ವಿವಿಯ 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್
ದೆಹಲಿ ವಿವಿಯಲ್ಲಿ ಪ್ರತಿಭಟನೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 27, 2023 | 7:40 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿವಾದಾತ್ಮಕ ಬಿಬಿಸಿ ಸರಣಿಯನ್ನು(BBC documentary ) ಪ್ರದರ್ಶಿಸದಂತೆ ತಡೆಯಲು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು (JNU) ಕ್ಯಾಂಪಸ್​​ನಲ್ಲಿ ವಿದ್ಯುತ್ ಕಡಿತ ಮಾಡಿದ ಎರಡು ದಿನಗಳ ಬಳಿಕ ದೆಹಲಿಯ ಇತರ ಎರಡು ಉನ್ನತ ವಿಶ್ವವಿದ್ಯಾಲಯಗಳಾದ ದೆಹಲಿ ವಿಶ್ವವಿದ್ಯಾಲಯ (Delhi University)ಮತ್ತು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ವಿಶ್ವವಿದ್ಯಾನಿಲಯ ಆಡಳಿತ ಮತ್ತು ಪೊಲೀಸರು ವಿದ್ಯಾರ್ಥಿಗಳೊಂದಿಗೆ ಇದೇ ರೀತಿ ಬಲಪ್ರಯೋಗ ಮಾಡಿದ್ದಾರೆ. ದೆಹಲಿ ವಿವಿಯ ಕಲಾ ವಿಭಾಗದ ಹೊರಗೆ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ, ಅಲ್ಲಿ ಸ್ಕ್ರೀನಿಂಗ್ ಯೋಜಿಸಲಾಗಿತ್ತು.ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ತಡೆಯುವುದಕ್ಕಾಗಿ ಆಡಳಿತ ವಿದ್ಯುತ್ ಸರಬರಾಜು ಕಡಿತ ಮಾಡಿದೆ. ವಿದ್ಯಾರ್ಥಿಗಳ ಗುಂಪು ಎರಡೂ ವಿಶ್ವವಿದ್ಯಾಲಯಗಳಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದು ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಜಮಾಯಿಸಿ ಸ್ಕ್ರೀನಿಂಗ್ ಅನ್ನು ನಿಲ್ಲಿಸಲು ಪ್ರದೇಶದಲ್ಲಿ 144 ಸೆಕ್ಷನ್ ಹೇರಿರುವುದನ್ನು ವಿರೋಧಿಸಿದರು. ಸಂಜೆಯ ವೇಳೆಗೆ ವಿದ್ಯಾರ್ಥಿಗಳ ಗುಂಪು ಪೊಲೀಸರು ಮತ್ತು ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿಯೊಂದಿಗೆ ಜಟಾಪಟಿ ನಡೆಸಿದೆ. “ದಿಲ್ಲಿ ಪೋಲೀಸ್ ಹಿಂತಿರುಗಿ” ಎಂಬ ಘೋಷಣೆಗಳನ್ನು ಅವರು ಕೂಗಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಡಿಯುನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಪ್ರಯತ್ನಿಸಿದ್ದಕ್ಕಾಗಿ 24 ವಿದ್ಯಾರ್ಥಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

JNU ನಲ್ಲಿರುವಂತೆ, ಇಲ್ಲಿಯ ವಿದ್ಯಾರ್ಥಿಗಳು ತಮ್ಮ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಕ್ಯೂಆರ್ ಕೋಡ್ ಹಂಚಿಕೊಂಡಿದ್ದರು. ಇದರ ಜತೆಗೆ ಹೆಚ್ಚಿನ ವಿದ್ಯಾರ್ಥಿಗಳು ಜಮಾಯಿಸಿ ಸಾರ್ವಜನಿಕ ಪ್ರದರ್ಶನವನ್ನು ನಡೆಸುತ್ತೇವೆ ಎಂದು ಹೇಳಿದ್ದರು. ಕ್ಯಾಂಪಸ್‌ನಲ್ಲಿ ಸಾಮೂಹಿಕ ಸ್ಕ್ರೀನಿಂಗ್ ಅನುಮತಿಸಲಾಗುವುದಿಲ್ಲ ಎಂದು ದೆಹಲಿ ವಿಶ್ವವಿದ್ಯಾಲಯದ ಆಡಳಿತದ ಮೂಲಗಳು ತಿಳಿಸಿವೆ. ಆದಾಗ್ಯೂ, ವಿದ್ಯಾರ್ಥಿಗಳು ತಮ್ಮ ಫೋನ್‌ಗಳಲ್ಲಿ ವೀಕ್ಷಿಸಲು ಬಯಸಿದರೆ, ಅದು ಅವರಿಗೆ ಬಿಟ್ಟಿದ್ದು ಎಂದು ಹೇಳಿವೆ.

ಅಂತಹ ಸ್ಕ್ರೀನಿಂಗ್‌ಗೆ ವಿಶ್ವವಿದ್ಯಾಲಯಗಳು ಅನುಮತಿ ನೀಡಿಲ್ಲ. ದೆಹಲಿ ಪೊಲೀಸರನ್ನೂ ಸಂಪರ್ಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಕ್ರೀನಿಂಗ್‌ಗೆ ಮಾಡುವ ನಿರ್ಧಾರವನ್ನು ತಾವಾಗಿಯೇ ಹಿಂಪಡೆಯುವಂತೆ ವಿದ್ಯಾರ್ಥಿಗಳ ಮನವೊಲಿಸಲು ಈ ಹಿಂದೆ ಮಾತುಕತೆ ನಡೆಸಲಾಗಿತ್ತು, ಭದ್ರತಾ ಕಾರಣಗಳಿಗಾಗಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದ್ದು ವಿದ್ಯಾರ್ಥಿಗಳು ಸ್ಕ್ರೀನಿಂಗ್‌ಗೆ ಜಮಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 84ನೇ ವಯಸ್ಸಲ್ಲಿ ಒಲಿದು ಬಂತು ಪದ್ಮಶ್ರೀ; ಮೋದಿ ಭರವಸೆ ನೀಡಿದ್ದರೂ ಬೈಗಾ ಕಲೆಯ ಈ ಅಮ್ಮನಿಗೆ ಸಿಕ್ಕಿಲ್ಲ ಮನೆ

ದೆಹಲಿ ವಿಶ್ವವಿದ್ಯಾಲಯದ ಪ್ರೊಕ್ಟರ್ ರಜನಿ ಅಬ್ಬಿ ಅವರು ಈ ವಿಷಯದ ಬಗ್ಗೆ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದು, ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

“ಆಡಳಿತದಿಂದ ಯಾವುದೇ ಅನುಮತಿಯನ್ನು ಪಡೆಯದ ಕಾರಣ ನಾವು ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಅನುಮತಿಸಲಾಗುವುದಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಇಂದು (ಶುಕ್ರವಾರ) ಸಂಜೆ 4 ಗಂಟೆ ಸುಮಾರಿಗೆ  ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಸುಮಾರು 20 ಜನರು ಕಲಾ ವಿಭಾಗದ ಗೇಟ್‌ನ ಹೊರಗೆ ಬಂದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಅಲ್ಲಿಂದ ಚದುರುವಂತೆ ಸೂಚಿಸಲಾಗಿತ್ತು. ಅವರು ಇದಕ್ಕೆ ಒಪ್ಪದೇ ಇದ್ದಾಗ ಅವರನ್ನು ಶಾಂತಿಯುತವಾಗಿ ಬಂಧಿಸಲಾಯಿತು, ”ಎಂದು ಡಿಸಿಪಿ ಉತ್ತರ ವಲಯದ ಡಿಸಿಪಿ ಹೇಳಿದ್ದಾರೆ. ಈಗ ಪರಿಸ್ಥಿತಿ ಶಾಂತವಾಗಿದೆ. ಒಟ್ಟು 24 ಜನರನ್ನು ಕ್ಯಾಂಪಸ್‌ನಿಂದ ಬಂಧಿಸಲಾಗಿದೆ ಎಂದಿದ್ದಾರೆ ಅವರು,

ಬಂಧಿತರು ಡಿಯು ವಿದ್ಯಾರ್ಥಿಗಳೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಬಂಧಿಸಿರುವವರ ಗುರುತಿನ ಚೀಟಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ.. ಅವರು ಹೊರಗಿನವರಾಗಿದ್ದರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಮತ್ತು ಅವರು ಡಿಯುನಿಂದ ಬಂದಿದ್ದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವ ವಿದ್ಯಾಲಯದ ಆಡಳಿತ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 27 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!