AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ತಮ್ಮ ಪಾದ ನೆಕ್ಕಿಸಿಕೊಂಡ ಮೇಲ್ಜಾತಿ ಮಂದಿ; ಏಳು ಜನರ ಬಂಧನ

10ನೇ ತರಗತಿ ಹುಡುಗ ಯಾವ ಶಾಲೆಯಲ್ಲಿ ಓದುತ್ತಿದ್ದನೋ, ಅದೇ ಶಾಲೆಯಲ್ಲಿ ಕಲಿತವರು ಈ ಆರೋಪಿಗಳು. ಹುಡುಗನ ಬಳಿ ಹಣ ಕೊಡುವಂತೆ ಒತ್ತಾಯಿಸಿದ್ದಾರೆ, ಈತ ಇಲ್ಲ ಎಂದಿದ್ದಕ್ಕೆ ಎಲ್ಲಿಂದಾದರೂ ತಂದುಕೊಡು ಎಂದು ಬಲವಂತ ಮಾಡಿದ್ದಾರೆ.

10ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ತಮ್ಮ ಪಾದ ನೆಕ್ಕಿಸಿಕೊಂಡ ಮೇಲ್ಜಾತಿ ಮಂದಿ; ಏಳು ಜನರ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Apr 19, 2022 | 2:00 PM

10ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅವನ ಬಳಿ ತಮ್ಮ ಕಾಲು ನೆಕ್ಕಿಸಿಕೊಂಡ ಸುಮಾರು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ವಿದ್ಯಾರ್ಥಿ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಬಂಧಿತರು ಮೇಲ್ವರ್ಗದವರಾಗಿದ್ದಾರೆ. ಆತನಿಗೆ ಹೊಡೆದ ಮತ್ತು ಬಲವಂತವಾಗಿ ಪಾದವನ್ನು ನೆಕ್ಕಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ  ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.  ಈ ವಿಡಿಯೋ ನೋಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ವತಃ ಕ್ರಮ ಕೈಗೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ಐವರ ಪೊಲೀಸ್ ಸಿಬ್ಬಂದಿಯ ತಂಡವೊಂದನ್ನು ರಚಿಸಿದ್ದರು. ಸದ್ಯ ಎಲ್ಲರನ್ನೂ ಬಂಧಿಸಲಾಗಿದೆ.

ಘಟನೆ ನಡೆದದ್ದು ಉತ್ತರ ಪ್ರದೇಶದ ರಾಯ್​ಬರೇಲಿಯಲ್ಲಿ ಆಗಿದ್ದು, ಈ ಬಗ್ಗೆ ಅಲ್ಲಿನ ಎಸ್​ಪಿ ಶ್ಲೋಕ್​ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಪ್ರಮುಖ ಆರೋಪಿ ಅಪ್ರಾಪ್ತನಾಗಿದ್ದು, ಅವನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳಿಸಲಾಗಿದೆ. ಇನ್ನುಳಿದ ಆರುಮಂದಿಯ ಹೆಸರು ಅಭಿಷೇಕ್​, ವಿಕಾಸ್ ಪಾಸಿ, ಮಹೇಂದ್ರ ಕುಮಾರ್, ಹೃತಿಕ್​ ಸಿಂಗ್​, ಅಮನ್​ ಸಿಂಗ್, ಯಶ್​ ಪ್ರತಾಪ್​ ಎಂದಾಗಿದ್ದು, ಅವರೆಲ್ಲರೂ 18 ವರ್ಷ ಮೇಲ್ಪಟ್ಟವರು ಎಂದು ಹೇಳಿದ್ದಾರೆ.

10ನೇ ತರಗತಿ ಹುಡುಗ ಯಾವ ಶಾಲೆಯಲ್ಲಿ ಓದುತ್ತಿದ್ದನೋ, ಅದೇ ಶಾಲೆಯಲ್ಲಿ ಕಲಿತವರು ಈ ಆರೋಪಿಗಳು. ಹುಡುಗನ ಬಳಿ ಹಣ ಕೊಡುವಂತೆ ಒತ್ತಾಯಿಸಿದ್ದಾರೆ, ಈತ ಇಲ್ಲ ಎಂದಿದ್ದಕ್ಕೆ ಎಲ್ಲಿಂದಾದರೂ ತಂದುಕೊಡು ಎಂದು ಬಲವಂತ ಮಾಡಿದ್ದಾರೆ. ಆದರೆ ಆತ ಇವರ ಆದೇಶವನ್ನು ಪಾಲಿಸಲಿಲ್ಲ. ಅಷ್ಟಕ್ಕೇ ಸಿಟ್ಟಾದ ಹುಡುಗರು ತೀರ ಅಮಾನವೀಯವಾಗಿ ವಿದ್ಯಾರ್ಥಿಗೆ ಹಿಂಸೆ ಕೊಟ್ಟಿದ್ದಾರೆ.  ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಸಿಟ್ಟಿಗೆ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳು ನಿರಂತರ ಎಂಬಂತಾಗಿದೆ.  ಅವರನ್ನು ದೇಗುಲಗಳಿಗೇ ಸೇರಿಸದೆ ಇರುವುದು, ದಲಿತರ ಮದುವೆಗಳಲ್ಲಿ ಮೆರವಣಿಗೆಗೆ ಅವಕಾಶ ನೀಡದೆ ಇರುವುದು, ಸಣ್ಣತಪ್ಪಿಗೂ ಹಿಗ್ಗಾಮುಗ್ಗಾ ಥಳಿಸುವುದು, ಮರಕ್ಕೆ ಕಟ್ಟಿಹಾಕಿ ಹಿಂಸಿಸುವಂಥ ಘಟನೆಗಳು ದೇಶದಲ್ಲಿ ಅನೇಕ ಕಡೆಗಳಲ್ಲಿ ನಡೆಯುತ್ತಿರುತ್ತದೆ.

ಇದನ್ನೂ ಓದಿ: ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ; ನೇಣು ಬಿಗಿದುಕೊಂಡು ಮೆಡಿಕಲ್ ರೆಪ್ ಆತ್ಮಹತ್ಯೆ

Published On - 12:58 pm, Tue, 19 April 22

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್