AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಲ್ಲಿ 12 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಎರಡು ವಾರಗಳಲ್ಲಿ ಇದು 5ನೇ ಪ್ರಕರಣ

ಎರಡು ವಾರಗಳಲ್ಲಿ ಇದು ಐದನೇ ಪ್ರಕರಣ ಮತ್ತು ಕೇವಲ 24 ಗಂಟೆಗಳಲ್ಲಿ ಎರಡನೇ ಪ್ರಕರಣವಾಗಿದೆ. ಶಿವಗಂಗಾ ಜಿಲ್ಲೆಯಲ್ಲಿ  ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರ ಕಲಿಯಲು ಕಷ್ಟವಾಗುತ್ತಿದೆ.

ತಮಿಳುನಾಡಲ್ಲಿ 12 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಎರಡು ವಾರಗಳಲ್ಲಿ ಇದು 5ನೇ ಪ್ರಕರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 27, 2022 | 7:54 PM

Share

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಇಂದು 12 ನೇ ತರಗತಿಯ ಬಾಲಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿದ್ದು, ಶಾಲಾ ಮಕ್ಕಳ ಸಾವಿನ ಪ್ರಕರಣಗಳು ರಾಜ್ಯದಲ್ಲಿ ಆತಂಕ ಮತ್ತು ಪ್ರತಿಭಟನೆಯನ್ನು ಉಂಟುಮಾಡಿದೆ. ಎರಡು ವಾರಗಳಲ್ಲಿ ಇದು ಐದನೇ ಪ್ರಕರಣ ಮತ್ತು ಕೇವಲ 24 ಗಂಟೆಗಳಲ್ಲಿ ಎರಡನೇ ಪ್ರಕರಣವಾಗಿದೆ. ಶಿವಗಂಗಾ ಜಿಲ್ಲೆಯಲ್ಲಿ  ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರ ಕಲಿಯಲು ಕಷ್ಟವಾಗುತ್ತಿದೆ ಎಂದು ಬಾಲಕ ಆತ್ಮಹತ್ಯೆ ಪತ್ರವನ್ನು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ನಾಲ್ವರು ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಲ್ಲಿ ಮೂವರು 12 ನೇ ತರಗತಿಯಲ್ಲಿ ಓದುತ್ತಿದ್ದವರು. ಇಂದು ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಬಾಲಕಿ ದೀರ್ಘಕಾಲದ, ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯ ಸಾವಿಗೆ ಕೆಲವೇ ಗಂಟೆಗಳ ಮೊದಲು ಕಡಲೂರು ಜಿಲ್ಲೆಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾನೆ. ಪೊಲೀಸ್ ಅಧಿಕಾರಿ ಕಾರ್ತಿಕ್ ಪ್ರಕಾರ, ನಾಲ್ಕು ಪುಟಗಳ ಆತ್ಮಹತ್ಯಾ ಟಿಪ್ಪಣಿಯಲ್ಲಿ, ವಿದ್ಯಾರ್ಥಿನಿಯು ತನ್ನ “ಐಎಎಸ್ ಆಕಾಂಕ್ಷೆಗಳನ್ನು ಪೂರೈಸಲು ಸಾಧ್ಯವಾಗದೇ ಇರುವ ಬಗ್ಗೆ ಬರೆದಿದ್ದಾಳೆ.

ಸೋಮವಾರ  ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಜುಲೈ 13ರಂದು ಕಲ್ಲಾಕುರುಚ್ಚಿ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬಳ ಶವ ಖಾಸಗಿ ವಸತಿ ಶಾಲೆಯಲ್ಲಿ ಪತ್ತೆಯಾಗಿತ್ತು. ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣದಲ್ಲಿ ಇದು ಮೊದಲನೆಯದು. ಆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಯಲ್ಲಿ ಹಲವರಿಗೆ ಗಾಯಗಳಾಗಿತ್ತು.

ಓದಿನಲ್ಲಿ ಹಿಂದುಳಿದಿದ್ದಕ್ಕೆ ಇಬ್ಬರು ಶಿಕ್ಷಕರು ಆಕೆಯನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಮೇರೆಗೆ ಶಾಲೆಯ ಪ್ರಿನ್ಸಿಪಾಲ್, ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ