ದೆಹಲಿ ಶಾಲೆಗಳಿಗೆ ಬಂದ 23 ಬಾಂಬ್ ಬೆದರಿಕೆ ಇ-ಮೇಲ್​ಗಳ ಹಿಂದಿದೆ ವಿದ್ಯಾರ್ಥಿಯ ಕೈವಾಡ

ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಕಳುಹಿಸಿದ್ದಕ್ಕಾಗಿ 12 ನೇ ತರಗತಿಯ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ವಿವಿಧ ಶಾಲೆಗಳಿಗೆ ಬಂದ ಕೊನೆಯ 23 ಬೆದರಿಕೆ ಇಮೇಲ್‌ಗಳನ್ನು 12 ನೇ ತರಗತಿಯ ವಿದ್ಯಾರ್ಥಿ ಕಳುಹಿಸಿದ್ದಾನೆ.ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ದೆಹಲಿ ಶಾಲೆಗಳಿಗೆ ಬಂದ 23 ಬಾಂಬ್ ಬೆದರಿಕೆ ಇ-ಮೇಲ್​ಗಳ ಹಿಂದಿದೆ ವಿದ್ಯಾರ್ಥಿಯ ಕೈವಾಡ
ಪೊಲೀಸ್Image Credit source: Deccan Herald
Follow us
ನಯನಾ ರಾಜೀವ್
|

Updated on: Jan 10, 2025 | 10:02 AM

ದೆಹಲಿಯ ವಿವಿಧ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆಯ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಕೈವಾಡವಿದೆ ಎಂಬುದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್, ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಬಾಂಬ್ ಬೆದರಿಕೆಗಳು ಶಾಲಾ ಅಧಿಕಾರಿಗಳಲ್ಲಿ ಭೀತಿಯನ್ನು ಉಂಟು ಮಾಡಿತ್ತು. ದೆಹಲಿ ಪೊಲೀಸರು ಈ ವಾರ ಇಂತಹ ಬಿಕ್ಕಟ್ಟುಗಳನ್ನು ಎದುರಿಸಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೊಲೀಸರು ವಿಚಾರ ಸಂಕಿರಣವನ್ನು ಆಯೋಜಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದರು. ಶಾಲೆಗಳಲ್ಲಿ ಬಾಂಬ್ ಬೆದರಿಕೆಯ ಸಂದರ್ಭದಲ್ಲಿ ಶಾಂತವಾಗಿರುವುದು, ಪ್ರತಿಕ್ರಿಯಿಸುವುದು ಮತ್ತು ಪೊಲೀಸರೊಂದಿಗೆ ಸಮನ್ವಯ ಸಾಧಿಸುವುದು ಹೇಗೆ ಎಂಬುದರ ಕುರಿತು ಈ ಸೆಮಿನಾರ್ ಇದೆ. ಬುಧವಾರ ಬೆಳಗ್ಗೆ ದೆಹಲಿಯ ಕನಿಷ್ಠ 16 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಪತ್ತೆ ದಳಗಳು ಶಾಲೆಗಳಲ್ಲಿ ಸಮೀಕ್ಷೆ ನಡೆಸಿದ್ದು, ಅನುಮಾನಾಸ್ಪದವಾಗಿ ಏನೂ ಸಿಗದ ಹಿನ್ನೆಲೆಯಲ್ಲಿ ಸುಳ್ಳು ಬೆದರಿಕೆ ಎಂದು ಹೇಳಿದ್ದಾರೆ.

ಮದರ್ಸ್ ಇಂಟರ್‌ನ್ಯಾಶನಲ್ ಸ್ಕೂಲ್, ಮಾಡರ್ನ್ ಸ್ಕೂಲ್, ಸ್ಪ್ರಿಂಗ್‌ಡೇಲ್ ಸ್ಕೂಲ್, ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್, ಸೇಂಟ್ ಕೊಲಂಬಾಸ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್, ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್, ಏರ್ ಫೋರ್ಸ್ ಬಾಲ್ ಭಾರತಿ, ವಸಂತ್ ವಿಹಾರ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಆರ್‌ಕೆ ಪುರಂಗೆ ಇಮೇಲ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ಈಸ್ಟ್ ಆಫ್ ಕೈಲಾಶ್‌ನಲ್ಲಿರುವ ಟಾಗೋರ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲರಾದ ಮಲ್ಲಿಕಾ ಪ್ರೇಮನ್, ಚಳಿಗಾಲದ ರಜೆಗಾಗಿ ಶಾಲೆಯನ್ನು ಮುಚ್ಚಲಾಗಿದೆ ಮತ್ತು ಯಾವುದೇ ವಿದ್ಯಾರ್ಥಿಗಳು ಆವರಣದಲ್ಲಿ ಇರಲಿಲ್ಲ ಎಂದು ಹೇಳಿದರು ಇದರ ಹಿಂದೆಯೂ ಇದೇ ವಿದ್ಯಾರ್ಥಿಗಳ ಕೈವಾಡವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ