AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಮಾಜಿ ಡಿಸಿಎಂ ಸುಖ್​ಬೀರ್​ ಬಾದಲ್​ಗೆ ಶೌಚಾಲಯ ಹಾಗೂ ಪಾತ್ರೆ ತೊಳೆಯುವ ಶಿಕ್ಷೆ

ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅಕಾಲಿ ಸರ್ಕಾರದ ಅವಧಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ ಕ್ಷಮಾದಾನ ನೀಡುವಲ್ಲಿ ತಮ್ಮ ಪಾತ್ರವಿತ್ತು ಎಂದು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಸುಖ್​ಬೀರ್ ಬಾದಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಸಿಂಗ್ ಸಾಹಿಬಾನ್‌ಗಳ ಸಭೆಯು ಅಕಾಲ್ ತಖ್ತ್‌ನಲ್ಲಿ ನಡೆಯಿತು. ಎರಡು ತಿಂಗಳ ಹಿಂದೆ ಅಕಾಲ್ ತಖ್ತ್ ಅವರು ಸುಖಬೀರ್ ಸಿಂಗ್ ಬಾದಲ್ ಅವರನ್ನು ತಂಖೈಯಾ (ಧಾರ್ಮಿಕ  ಅಪರಾಧಿ) ಎಂದು ಘೋಷಿಸಿದ್ದರು.

ಪಂಜಾಬ್​ನ ಮಾಜಿ ಡಿಸಿಎಂ ಸುಖ್​ಬೀರ್​ ಬಾದಲ್​ಗೆ ಶೌಚಾಲಯ ಹಾಗೂ ಪಾತ್ರೆ ತೊಳೆಯುವ ಶಿಕ್ಷೆ
ಸುಖ್​ಬೀರ್Image Credit source: Republicworld.com
ನಯನಾ ರಾಜೀವ್
|

Updated on: Dec 03, 2024 | 12:39 PM

Share

ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅಕಾಲಿ ಸರ್ಕಾರದ ಅವಧಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ ಕ್ಷಮಾದಾನ ನೀಡುವಲ್ಲಿ ತಮ್ಮ ಪಾತ್ರವಿತ್ತು ಎಂದು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಸುಖ್​ಬೀರ್ ಬಾದಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಸಿಂಗ್ ಸಾಹಿಬಾನ್‌ಗಳ ಸಭೆಯು ಅಕಾಲ್ ತಖ್ತ್‌ನಲ್ಲಿ ನಡೆಯಿತು. ಎರಡು ತಿಂಗಳ ಹಿಂದೆ ಅಕಾಲ್ ತಖ್ತ್ ಅವರು ಸುಖಬೀರ್ ಸಿಂಗ್ ಬಾದಲ್ ಅವರನ್ನು ತಂಖೈಯಾ (ಧಾರ್ಮಿಕ  ಅಪರಾಧಿ) ಎಂದು ಘೋಷಿಸಿದ್ದರು.

ಸುಖ್​ಬೀರ್ ಬಾದಲ್ ಹಾಗೂ 2015ರ ಅಕಾಲಿ ಸರ್ಕಾರದ ಇತರೆ ಕ್ಯಾಬಿನೆಟ್ ಸದಸ್ಯರಿಗೆ ಗೋಲ್ಡನ್ ಟೆಂಪಲ್​ನಲ್ಲಿ ಶೌಚಾಲಯ ಹಾಗೂ ಪಾತ್ರೆ ತೊಳೆಯುವ ಶಿಕ್ಷೆ ವಿಧಿಸಲಾಗಿದೆ. ಅಕಾಲ್ ತಖ್ತ್ ಜಥೇದಾರ್ ಗಿಯಾನಿ ರಘುಬೀರ್ ಸಿಂಗ್ ಅವರು ಶಿರೋಮಣಿ ಅಕಾಲಿದಳದ ಕಾರ್ಯಕಾರಿ ಸಮಿತಿಗೆ ಮೂರು ದಿನಗಳಲ್ಲಿ ಸುಖ್ಬೀರ್ ಬಾದಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿ ಅಕಲ್ ತಖ್ತ್ ಸಾಹಿಬ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಶಿರೋಮಣಿ ಅಕಾಲಿದಳದ ಕಾರ್ಯಕಾರಿ ಸಮಿತಿ ಸದಸ್ಯತ್ವ ಅಭಿಯಾನವನ್ನು ಆರಂಭಿಸಿ ಆರು ತಿಂಗಳೊಳಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ಅಕಾಲ್ ತಖ್ತ್ ಸೂಚಿಸಿದ್ದಾರೆ.

ಮತ್ತಷ್ಟು ಓದಿ: Gurmeet Ram Rahim: ಗುರ್ಮೀತ್ ರಾಮ್​ ರಹೀಮ್​ ಪೆರೋಲ್ ಮೇಲೆ ಬಿಡುಗಡೆ

ನಮ್ಮ ಸರ್ಕಾರದ ಅವಧಿಯಲ್ಲಿ ಹತ್ಯಾಕಾಂಡದ ಘಟನೆಗಳು ನಡೆದಿವೆ. ನಾವು ತಪ್ಪಿತಸ್ಥರನ್ನು ಶಿಕ್ಷಿಸುವಲ್ಲಿ ವಿಫಲರಾಗಿದ್ದೇವೆ, ಗುಂಡಿನ ದಾಳಿ ನಡೆದಿದೆ. ಡಿಸೆಂಬರ್ 3, 2024 ರಿಂದ ಪ್ರತಿದಿನ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಗೋಲ್ಡನ್ ಟೆಂಪಲ್‌ನಲ್ಲಿರುವ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ. ಇದಾದ ನಂತರ ಸ್ನಾನ ಮಾಡಿ ಲಂಗರ್ ಹಾಲ್‌ಗೆ ಹೋಗಿ 1 ಗಂಟೆ ಪಾತ್ರೆ ತೊಳೆಯುತ್ತಾರೆ. ಇದಾದ ನಂತರ 1 ಗಂಟೆ ಶಾಬಾದ್ ಕೀರ್ತನೆ ನಡೆಯಲಿದೆ.

ದರ್ಬಾರ್‌ನಲ್ಲಿ 2 ದಿನ ಸೇವೆ ಸಲ್ಲಿಸಿದ ನಂತರ ಮುಂದಿನ 2 ದಿನಗಳ ಕಾಲ ಕೇಸ್‌ಗಢ ಸಾಹಿಬ್, ದಮದಮಾ ಸಾಹಿಬ್, ಮುಕ್ತ್‌ಸರ್ ಸಾಹಿಬ್, ಫತೇಘರ್ ಸಾಹಿಬ್‌ನಲ್ಲಿ ಸೇವೆ ಸಲ್ಲಿಸುವ ಮೂಲಕ ಶಿಕ್ಷೆಯನ್ನು ಪೂರ್ಣಗೊಳಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?