AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಧ್ವಜ ಬಳಸಿ ಚಿಕನ್ ಕ್ಲೀನ್ ಮಾಡುತ್ತಿರುವ ವಿಡಿಯೊ ವೈರಲ್; ಸಿಲ್ವಾಸ್ಸಾದ ವ್ಯಕ್ತಿಯ ಬಂಧನ

ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಕೋಳಿ ಅಂಗಡಿಯಲ್ಲಿ ಕೋಳಿಯನ್ನು ಸ್ವಚ್ಛಗೊಳಿಸಲು ಬಟ್ಟೆಯ ತುಂಡು ಬದಲು ರಾಷ್ಟ್ರಧ್ವಜವನ್ನು ಬಳಸಿ ಅಪಮಾನ ಮಾಡುತ್ತಿರುವುದು ಕಂಡುಬಂದಿದೆ.

ರಾಷ್ಟ್ರಧ್ವಜ ಬಳಸಿ ಚಿಕನ್ ಕ್ಲೀನ್ ಮಾಡುತ್ತಿರುವ ವಿಡಿಯೊ ವೈರಲ್; ಸಿಲ್ವಾಸ್ಸಾದ ವ್ಯಕ್ತಿಯ ಬಂಧನ
ರಾಷ್ಟ್ರಧ್ವಜದಲ್ಲಿ ಚಿಕನ್ ಕ್ಲೀನ್ ಮಾಡಿದ ವ್ಯಕ್ತಿ
ರಶ್ಮಿ ಕಲ್ಲಕಟ್ಟ
|

Updated on: Apr 22, 2023 | 8:47 PM

Share

ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿ: ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ್ ಹವೇಲಿಯ (Dadra and Nagar Haveli) ಸಿಲ್ವಾಸ್ಸಾದ ವ್ಯಕ್ತಿಯೊಬ್ಬರು ತ್ರಿವರ್ಣ ಧ್ವಜದಿಂದ (National Flag) ಕೋಳಿಯನ್ನು ಶುಚಿಗೊಳಿಸುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral video) ಆದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಿಲ್ವಾಸ್ಸಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಕೋಳಿ ಅಂಗಡಿಯಲ್ಲಿ ಕೋಳಿಯನ್ನು ಸ್ವಚ್ಛಗೊಳಿಸಲು ಬಟ್ಟೆಯ ತುಂಡು ಬದಲು ರಾಷ್ಟ್ರಧ್ವಜವನ್ನು ಬಳಸಿ ಅಪಮಾನ ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು. ದೂರಿನ ಆಧಾರದ ಮೇಲೆ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು ರಾಷ್ಟ್ರದ ಗೌರವಕ್ಕೆ ಅವಮಾನ ತಡೆ ಕಾಯಿದೆ, 1971 ರ ಸೆಕ್ಷನ್ 2 ರ ಅಡಿಯಲ್ಲಿ ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದ್ದು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಅಥವಾ ಯಾವುದೇ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಸುಡುವುದು, ವಿರೂಪಗೊಳಿಸುವುದು, ಅಪವಿತ್ರಗೊಳಿಸುವುದು, ನಾಶಪಡಿಸುವುದು ಅಥವಾ ತುಳಿಯುವುದು ಮೊದಲಾದ ಕೃತ್ಯದ ಆರೋಪದಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆಯ ಸೆಕ್ಷನ್ 2 ರ ಅಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ತಪ್ಪಿತಸ್ಥರೆಂದು ಸಾಬೀತಾದರೆ, ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!