AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು ಇಲ್ಲದಿದ್ದರೆ ಆಹಾರವೂ ಇಲ್ಲ: ರೈತರ ಪ್ರತಿಭಟನೆಗೆ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಾಂಗುಜಾಮ್ ಬೆಂಬಲ

18 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ 9ರ ಹರೆಯದ ಹವಾಮಾನ ಹೋರಾಟಗಾರ್ತಿ ಮಣಿಪುರದ ಲಿಸಿಪ್ರಿಯಾ ಕಾಂಗುಜಾಮ್ ಬೆಂಬಲ ಸೂಚಿಸಿದ್ದಾರೆ.

ರೈತರು ಇಲ್ಲದಿದ್ದರೆ ಆಹಾರವೂ ಇಲ್ಲ: ರೈತರ ಪ್ರತಿಭಟನೆಗೆ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಾಂಗುಜಾಮ್ ಬೆಂಬಲ
ಲಿಸಿಪ್ರಿಯಾ ಕಾಂಗುಜಾಮ್
ರಶ್ಮಿ ಕಲ್ಲಕಟ್ಟ
| Edited By: |

Updated on:Dec 14, 2020 | 11:22 AM

Share

ನವದೆಹಲಿ: ಕೇಂದ್ರದ ಕೃಷಿ ಕಾನೂನು ವಿರುದ್ಧ ಕಳೆದ 18 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ 9ರ ಹರೆಯದ ಹವಾಮಾನ ಹೋರಾಟಗಾರ್ತಿ ಮಣಿಪುರದ ಲಿಸಿಪ್ರಿಯಾ ಕಾಂಗುಜಾಮ್ ಬೆಂಬಲ ಸೂಚಿಸಿದ್ದಾರೆ.

ವಿಶ್ವದ ಎಲ್ಲ ಹವಾಮಾನ ಹೋರಾಟಗಾರರು ನಿಮ್ಮೊಂದಿಗೆ ಇದ್ದಾರೆ ಎಂದು ಲಿಸಿಪ್ರಿಯಾ ರೈತರ ಹೋರಾಟಕ್ಕೆ ದನಿಗೂಡಿದ್ದಾರೆ. ಸಿಂಘು ಗಡಿಭಾಗದಲ್ಲಿ ಪ್ರತಿಭಟನಾನಿರತ ರೈತರೊಂದಿಗಿರುವ ಫೋಟೊ ಮತ್ತು ವಿಡಿಯೊ ಟ್ವೀಟಿಸಿದ ಲಿಸಿಪ್ರಿಯಾ, ನನ್ನ ದನಿ ಇಡೀ ಜಗತ್ತಿಗೆ ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ. ರೈತರು ಇಲ್ಲದೇ ಇದ್ದರೆ ಆಹಾರವೂ ಇಲ್ಲ. ನ್ಯಾಯವೂ ಇಲ್ಲ, ವಿಶ್ರಾಂತಿಯೂ ಇಲ್ಲ ಎಂದಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಅಜ್ಜಂದಿರೊಂದಿಗೆ, ಅಪ್ಪ, ಸಹೋದರರ ಜತೆ ಬಂದಿರುವ ಮಕ್ಕಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರತಿಭಟನೆ ನಡೆಸುತ್ತಿರುವ ರೈತರು ಕಟ್ಟಿಗೆ ಉರಿಸುವುದನ್ನು ನಿಲ್ಲಿಸಬೇಕು. ಇದು ವಾಯುಮಾಲಿನ್ಯವನ್ನು ಹೆಚ್ಚಿಸುತ್ತದೆ . ನಮ್ಮ ರೈತರು ಹಮಾಮಾನ ಬದಲಾವಣೆಯ ಸಂತ್ರಸ್ತರು. ನೆರೆ, ಬರ ಮತ್ತು ಚಂಡಮಾರುತ, ಕೀಟಗಳ ದಾಳಿಯಿಂದ ಬೆಳೆ ಹಾಳಾಗುತ್ತಿದೆ ಎಂದಿದ್ದಾರೆ ಲಿಸಿಪ್ರಿಯಾ.

ಪ್ರತಿವರ್ಷ ಸಾವಿರಾರು ರೈತರು ಸಾವಿಗೀಡಾಗುತ್ತಿದ್ದಾರೆ. ನಮ್ಮ ನಾಯಕರು ರೈತರ ದನಿಯನ್ನು ಆಲಿಸಬೇಕು. ನಮ್ಮ ರೈತರಿಗೆ ಆದಷ್ಟು ಬೇಗ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Delhi Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

Published On - 4:53 pm, Sun, 13 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?