AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate Change: ದೆಹಲಿಯಲ್ಲಿ ದಾಖಲೆ ಬಿಸಿಲು, ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆ ಮುನ್ಸೂಚನೆ

ಬಿಸಿಗಾಳಿಯಿಂದ ವಾರಾಂತ್ಯದಲ್ಲಿ ಮತ್ತಷ್ಟು ತಾಪಮಾನ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

Climate Change: ದೆಹಲಿಯಲ್ಲಿ ದಾಖಲೆ ಬಿಸಿಲು, ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆ ಮುನ್ಸೂಚನೆ
ದೆಹಲಿಯಲ್ಲಿ ಉಷ್ಣಾಂಶ ಹೆಚ್ಚಾಗಿದೆ
TV9 Web
| Edited By: |

Updated on:May 15, 2022 | 9:00 AM

Share

ದೆಹಲಿ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆಗಮನದಿಂದ ಭೂಮಿ ತುಸು ತಂಪಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿ (Delhi Weather) ಮಾತ್ರ ಬಿಸಿಲಿನಿಂದ ಬೆಂದುಹೋಗಿದೆ. ದೆಹಲಿಯಲ್ಲಿ 47.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿ, ದಾಖಲೆ ಬರೆದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಸಿಗಾಳಿಯಿಂದ ವಾರಾಂತ್ಯದಲ್ಲಿ ಮತ್ತಷ್ಟು ತಾಪಮಾನ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ದೆಹಲಿ ಪರಿಸ್ಥಿಯನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಹವಾಮಾನ ಕುರಿತು ಮತ್ತಷ್ಟು ಬರಹಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ
Image
ಮಾರ್ಚ್​ನಲ್ಲಿ ದೆಹಲಿ ಉಷ್ಣಾಂಶ 40.1 ಡಿಗ್ರಿ: ಇದು 76 ವರ್ಷಗಳಲ್ಲೇ ಅಧಿಕ

ಮಧ್ಯಾಹ್ನದ ಹೊತ್ತು ಜನರು ಮನೆಗಳಿಂದ ಹೊರಗೆ ಬರುತ್ತಲೇ ಇಲ್ಲ. ಬಂದರೂ ತಲೆಗಳ ದುಪ್ಪಟ್ಟಾ ಅಥವಾ ಟವೆಲ್ ಹೊದ್ದು ಬರುತ್ತಿದ್ದಾರೆ. ಪ್ರತಿವರ್ಷ ಸಾಮಾನ್ಯವಾಗಿ ಈ ದಿನಗಳಲ್ಲಿ ಇರುವ ಉಷ್ಣಾಂಶದ ಪ್ರಮಾಣಕ್ಕೆ ಹೋಲಿಸಿದರೆ ಈ ವರ್ಷ ಉಷ್ಣಾಂಶ ಪ್ರಮಾಣ 6 ಡಿಗ್ರಿಯಷ್ಟು ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಬಿಸಿಗಾಳಿಯಂಥ ಪರಿಸ್ಥಿತಿ ಎದುರಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಬಿಸಿಗಾಳಿಯ ಬಗ್ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಬಿಸಿಗಾಳಿಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮತ್ತು ಉಷ್ಣಾಂಶ ಏರಿಕೆಯಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮಾರ್ಚ್​ ತಿಂಗಳಲ್ಲಿ ಒಮ್ಮೆ, ಏಪ್ರಿಲ್​ನಲ್ಲಿ ಮೂರು ಬಾರಿ ಬಿಸಿಗಾಳಿಯ ಆತಂಕ ಎದುರಾಗಿತ್ತು. ಮೇ ತಿಂಗಳಲ್ಲಿ ಎರಡು ಬಾರಿ ಅಲರ್ಟ್ ಘೋಷಿಸಿದ್ದು ಸೇರಿದರೆ ಇದು ಈ ವರ್ಷದ 5ನೇ ಬಿಸಿಗಾಳಿ ಪರಿಸ್ಥಿತಿ ಎನಿಸಿದೆ. ಕುಂಠಿತ ಮಳೆ, ಕೃಷಿ ತ್ಯಾಜ್ಯ ಸುಡುವುದು, ಕಾಡ್ಗಿಚ್ಚು, ಜಾಗತಿಕ ಹವಾಮಾನ ವ್ಯತ್ಯಯದಿಂದ ದೆಹಲಿಯಲ್ಲಿ ಉಷ್ಣಾಂಶ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 1951ರ ನಂತರ ಇದು ದೆಹಲಿಯಲ್ಲಿ ಏಪ್ರಿಲ್ ತಿಂಗಳಲ್ಲಿ ದಾಖಲಾದ ಅತಿಹೆಚ್ಚಿನ ಪ್ರಮಾಣದ ಉಷ್ಣಾಂಶ ಎನಿಸಿದೆ.

ಏಪ್ರಿಲ್​ ತಿಂಗಳಲ್ಲಿ ಸಾಮಾನ್ಯವಾಗಿ 12.2 ಮಿಮೀ ಮಳೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 0.3 ಮಿಮೀ ಮಳೆಯಾಗಿದೆ. ಮಾರ್ಚ್ ತಿಂಗಳಲ್ಲಿ ವಾಡಿಕೆಯಂತೆ 15.9 ಮಿಮೀ ಮಳೆಯಾಗಬೇಕಿತ್ತು. ಆದರೆ ಒಂದು ಹನಿಯೂ ಮಳೆ ಬಿದ್ದಿಲ್ಲ. ಈ ತಿಂಗಳುದ್ದಕ್ಕೂ ಹವಾಮಾನ ಹೀಗೆಯೇ ಇರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

1995-2014ರ ಉಷ್ಣಾಂಶದ ಪ್ರಮಾಣಕ್ಕೆ ಹೋಲಿಸಿದರೆ 2080-2099ರ ಹೊತ್ತಿಗೆ ದೆಹಲಿ ಮತ್ತು ಮುಂಬೈಗಳ ಸರಾಸರಿ ಉಷ್ಣಾಂಶ 5 ಡಿಗ್ರಿಯಷ್ಟು ಹೆಚ್ಚಾಗಬಹುದು. ಕೆಲವು ವರ್ಷಗಳಲ್ಲಿ ಉಷ್ಣಾಂಶ ಪ್ರಮಾಣ 48.19 ಡಿಗ್ರಿ ಸೆಂಟಿಗ್ರೇಡ್ ಮುಟ್ಟಬಹುದು ಎಂದು ಗ್ರೀನ್​ಪೀಸ್​ ವರದಿಯು ವಿಶ್ಲೇಷಿಸಿದೆ. 2050ರ ಹೊತ್ತಿಗೆ ವಿಶ್ವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವಿಕೆ ಪ್ರಮಾಣ ದುಪ್ಪಟ್ಟಾಗುವ ಸಾಧ್ಯತೆಯಿದೆ ಎಂದು ವರದಿಯು ಎಚ್ಚರಿಸಿದೆ.

Published On - 9:00 am, Sun, 15 May 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್