AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. ಅದರ ಬೆನ್ನಲ್ಲೇ ಇಂದು ಇಡೀ ಕ್ಲಾಕ್​ ಟವರ್​ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​
ರಾಷ್ಟ್ರಧ್ವಜದಂತೆ ಪ್ರಕಾಶಿಸುತ್ತಿರುವ ಕ್ಲಾಕ್​ ಟವರ್​
TV9 Web
| Edited By: |

Updated on:Aug 07, 2021 | 10:04 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​ (ಘಂಟಾ ಘರ್​-ಗಡಿಯಾರ ಗೋಪುರ) ಇಂದು ಸಂಫೂರ್ಣವಾಗಿ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ. ಗಡಿಯಾರ ಗೋಪುರಕ್ಕೆ ಪೂರ್ತಿಯಾಗಿ ರಾಷ್ಟ್ರಧ್ವಜದಂತೆ ಲೈಟಿಂಗ್​ ಮಾಡಲಾಗಿದೆ. ಕೇಸರಿ-ಬಿಳಿ-ಹಸಿರು ಬಣ್ಣಗಳಿಂದ ಕಂಗೊಳಿಸುತ್ತಿರುವ ಕ್ಲಾಕ್​ ಟವರ್​ ನೋಡಿ ಸ್ಥಳೀಯರು ಫುಲ್​ ಖುಷಿಯಾಗಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ (ಆಗಸ್ಟ್​ 15) ಇದೆ. ಅದರ ನಿಮಿತ್ತ ಈ ಗಡಿಯಾರ ಗೋಪುರಕ್ಕೆ ರಾಷ್ಟ್ರಧ್ವಜದ ಮಾದರಿಯಲ್ಲಿ ಲೈಟಿಂಗ್​ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಗರ ಮೇಯರ್​ ಜುನೈಡ್​ ಮಟ್ಟು ಟ್ವೀಟ್​ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯೋತ್ಸವ ಸಿದ್ಧತೆ ಭರದಿಂದ ಸಾಗುತ್ತಿದೆ. ಸ್ವಾತಂತ್ರ್ಯ ದಿನದ ನಿಮಿತ್ತ, ಪ್ರಸಕ್ತ ವಾರವನ್ನು ಕ್ರೀಡಾವಾರವೆಂದು ಇಲ್ಲಿನ ಲೆಫ್ಟಿನಂಟ್ ಗವರ್ನರ್ ಮನೋಜ್​ ಸಿನ್ಹಾ ಘೋಷಿಸಿದ್ದು, ಆಗಸ್ಟ್​ 5ರಂದು ಉದ್ಘಾಟನಾ ಕಾರ್ಯಕ್ರಮ ಮಾಡಿದ್ದಾರೆ.

ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. 2019ರ ಆಗಸ್ಟ್​ 5ರಂದು ಇಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮೀರಕ್ಕೆಂದೇ ಇದ್ದ ಪ್ರತ್ಯೇಕ ಧ್ವಜ ನಿಷ್ಕ್ರಿಯವಾಗಿದೆ. ಈ ಕ್ಲಾಕ್​ ಟವರ್ ಇರುವ ಲಾಲ್​ ಚೌಕ್​ ತುಸು ಸೂಕ್ಷ್ಮ ಪ್ರದೇಶವಾಗಿದ್ದು, ಸ್ವಾತಂತ್ರ್ಯ ದಿನ ಹಿನ್ನೆಲೆಯಲ್ಲಿ ಇಲ್ಲಿ ಭದ್ರತೆಯನ್ನೂ ಹೆಚ್ಚಿಸಬೇಕಾಗುತ್ತದೆ.

ಇದನ್ನೂ ಓದಿ: ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

Clock Tower at Lal Chowk of Srinagar has been illuminated in Tricolour ahead of ahead of India’s Independence Day

Published On - 9:56 am, Sat, 7 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ