AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. ಅದರ ಬೆನ್ನಲ್ಲೇ ಇಂದು ಇಡೀ ಕ್ಲಾಕ್​ ಟವರ್​ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​
ರಾಷ್ಟ್ರಧ್ವಜದಂತೆ ಪ್ರಕಾಶಿಸುತ್ತಿರುವ ಕ್ಲಾಕ್​ ಟವರ್​
TV9 Web
| Edited By: |

Updated on:Aug 07, 2021 | 10:04 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​ (ಘಂಟಾ ಘರ್​-ಗಡಿಯಾರ ಗೋಪುರ) ಇಂದು ಸಂಫೂರ್ಣವಾಗಿ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ. ಗಡಿಯಾರ ಗೋಪುರಕ್ಕೆ ಪೂರ್ತಿಯಾಗಿ ರಾಷ್ಟ್ರಧ್ವಜದಂತೆ ಲೈಟಿಂಗ್​ ಮಾಡಲಾಗಿದೆ. ಕೇಸರಿ-ಬಿಳಿ-ಹಸಿರು ಬಣ್ಣಗಳಿಂದ ಕಂಗೊಳಿಸುತ್ತಿರುವ ಕ್ಲಾಕ್​ ಟವರ್​ ನೋಡಿ ಸ್ಥಳೀಯರು ಫುಲ್​ ಖುಷಿಯಾಗಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ (ಆಗಸ್ಟ್​ 15) ಇದೆ. ಅದರ ನಿಮಿತ್ತ ಈ ಗಡಿಯಾರ ಗೋಪುರಕ್ಕೆ ರಾಷ್ಟ್ರಧ್ವಜದ ಮಾದರಿಯಲ್ಲಿ ಲೈಟಿಂಗ್​ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಗರ ಮೇಯರ್​ ಜುನೈಡ್​ ಮಟ್ಟು ಟ್ವೀಟ್​ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯೋತ್ಸವ ಸಿದ್ಧತೆ ಭರದಿಂದ ಸಾಗುತ್ತಿದೆ. ಸ್ವಾತಂತ್ರ್ಯ ದಿನದ ನಿಮಿತ್ತ, ಪ್ರಸಕ್ತ ವಾರವನ್ನು ಕ್ರೀಡಾವಾರವೆಂದು ಇಲ್ಲಿನ ಲೆಫ್ಟಿನಂಟ್ ಗವರ್ನರ್ ಮನೋಜ್​ ಸಿನ್ಹಾ ಘೋಷಿಸಿದ್ದು, ಆಗಸ್ಟ್​ 5ರಂದು ಉದ್ಘಾಟನಾ ಕಾರ್ಯಕ್ರಮ ಮಾಡಿದ್ದಾರೆ.

ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. 2019ರ ಆಗಸ್ಟ್​ 5ರಂದು ಇಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮೀರಕ್ಕೆಂದೇ ಇದ್ದ ಪ್ರತ್ಯೇಕ ಧ್ವಜ ನಿಷ್ಕ್ರಿಯವಾಗಿದೆ. ಈ ಕ್ಲಾಕ್​ ಟವರ್ ಇರುವ ಲಾಲ್​ ಚೌಕ್​ ತುಸು ಸೂಕ್ಷ್ಮ ಪ್ರದೇಶವಾಗಿದ್ದು, ಸ್ವಾತಂತ್ರ್ಯ ದಿನ ಹಿನ್ನೆಲೆಯಲ್ಲಿ ಇಲ್ಲಿ ಭದ್ರತೆಯನ್ನೂ ಹೆಚ್ಚಿಸಬೇಕಾಗುತ್ತದೆ.

ಇದನ್ನೂ ಓದಿ: ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

Clock Tower at Lal Chowk of Srinagar has been illuminated in Tricolour ahead of ahead of India’s Independence Day

Published On - 9:56 am, Sat, 7 August 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’