AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. ಅದರ ಬೆನ್ನಲ್ಲೇ ಇಂದು ಇಡೀ ಕ್ಲಾಕ್​ ಟವರ್​ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ.

ತ್ರಿವರ್ಣ ಧ್ವಜವಾಗಿ ಕಂಗೊಳಿಸುತ್ತಿದೆ ಶ್ರೀನಗರದ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​..​
ರಾಷ್ಟ್ರಧ್ವಜದಂತೆ ಪ್ರಕಾಶಿಸುತ್ತಿರುವ ಕ್ಲಾಕ್​ ಟವರ್​
TV9 Web
| Edited By: |

Updated on:Aug 07, 2021 | 10:04 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್​ಚೌಕ್​ನಲ್ಲಿರುವ ಕ್ಲಾಕ್​ ಟವರ್​ (ಘಂಟಾ ಘರ್​-ಗಡಿಯಾರ ಗೋಪುರ) ಇಂದು ಸಂಫೂರ್ಣವಾಗಿ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ. ಗಡಿಯಾರ ಗೋಪುರಕ್ಕೆ ಪೂರ್ತಿಯಾಗಿ ರಾಷ್ಟ್ರಧ್ವಜದಂತೆ ಲೈಟಿಂಗ್​ ಮಾಡಲಾಗಿದೆ. ಕೇಸರಿ-ಬಿಳಿ-ಹಸಿರು ಬಣ್ಣಗಳಿಂದ ಕಂಗೊಳಿಸುತ್ತಿರುವ ಕ್ಲಾಕ್​ ಟವರ್​ ನೋಡಿ ಸ್ಥಳೀಯರು ಫುಲ್​ ಖುಷಿಯಾಗಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ (ಆಗಸ್ಟ್​ 15) ಇದೆ. ಅದರ ನಿಮಿತ್ತ ಈ ಗಡಿಯಾರ ಗೋಪುರಕ್ಕೆ ರಾಷ್ಟ್ರಧ್ವಜದ ಮಾದರಿಯಲ್ಲಿ ಲೈಟಿಂಗ್​ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಗರ ಮೇಯರ್​ ಜುನೈಡ್​ ಮಟ್ಟು ಟ್ವೀಟ್​ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯೋತ್ಸವ ಸಿದ್ಧತೆ ಭರದಿಂದ ಸಾಗುತ್ತಿದೆ. ಸ್ವಾತಂತ್ರ್ಯ ದಿನದ ನಿಮಿತ್ತ, ಪ್ರಸಕ್ತ ವಾರವನ್ನು ಕ್ರೀಡಾವಾರವೆಂದು ಇಲ್ಲಿನ ಲೆಫ್ಟಿನಂಟ್ ಗವರ್ನರ್ ಮನೋಜ್​ ಸಿನ್ಹಾ ಘೋಷಿಸಿದ್ದು, ಆಗಸ್ಟ್​ 5ರಂದು ಉದ್ಘಾಟನಾ ಕಾರ್ಯಕ್ರಮ ಮಾಡಿದ್ದಾರೆ.

ಈ ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. 2019ರ ಆಗಸ್ಟ್​ 5ರಂದು ಇಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮೀರಕ್ಕೆಂದೇ ಇದ್ದ ಪ್ರತ್ಯೇಕ ಧ್ವಜ ನಿಷ್ಕ್ರಿಯವಾಗಿದೆ. ಈ ಕ್ಲಾಕ್​ ಟವರ್ ಇರುವ ಲಾಲ್​ ಚೌಕ್​ ತುಸು ಸೂಕ್ಷ್ಮ ಪ್ರದೇಶವಾಗಿದ್ದು, ಸ್ವಾತಂತ್ರ್ಯ ದಿನ ಹಿನ್ನೆಲೆಯಲ್ಲಿ ಇಲ್ಲಿ ಭದ್ರತೆಯನ್ನೂ ಹೆಚ್ಚಿಸಬೇಕಾಗುತ್ತದೆ.

ಇದನ್ನೂ ಓದಿ: ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

Clock Tower at Lal Chowk of Srinagar has been illuminated in Tricolour ahead of ahead of India’s Independence Day

Published On - 9:56 am, Sat, 7 August 21

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ