AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಏರ್​ಪೋರ್ಟ್​​ನಲ್ಲಿ ಇಳಿಯುವಾಗ ರನ್​​ವೇನಲ್ಲಿ ಸ್ಕಿಡ್​​ ಆದ ಏರ್ ಇಂಡಿಯಾ ವಿಮಾನ

ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ತೊಂದರೆಯನ್ನು ಎದುರಿಸಿದೆ. ಮುಂಬೈ ಏರ್​ಪೋರ್ಟ್​​ನಲ್ಲಿ ಇಳಿಯುವಾಗ ಸ್ಕಿಡ್ ಆಗಿದೆ. ವಿಮಾನಯಾನ ಸಂಸ್ಥೆಯ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ತೀವ್ರ ಮಳೆಯಿಂದಾಗಿ ಜಾರುವ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಈ ಘಟನೆ ಸಂಭವಿಸಿದೆ.

ಮುಂಬೈ ಏರ್​ಪೋರ್ಟ್​​ನಲ್ಲಿ ಇಳಿಯುವಾಗ ರನ್​​ವೇನಲ್ಲಿ ಸ್ಕಿಡ್​​ ಆದ ಏರ್ ಇಂಡಿಯಾ ವಿಮಾನ
ವಿಮಾನ
ನಯನಾ ರಾಜೀವ್
|

Updated on: Jul 21, 2025 | 2:07 PM

Share

ಮುಂಬೈ, ಜುಲೈ 21: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್​ ಇಂಡಿಯಾ(Air India) ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ತೊಂದರೆಯನ್ನು ಎದುರಿಸಿದೆ. ಮುಂಬೈ ಏರ್​ಪೋರ್ಟ್​​ನಲ್ಲಿ ಇಳಿಯುವಾಗ ಸ್ಕಿಡ್ ಆಗಿದೆ. ವಿಮಾನಯಾನ ಸಂಸ್ಥೆಯ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ತೀವ್ರ ಮಳೆಯಿಂದಾಗಿ ಜಾರುವ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಈ ಘಟನೆ ಸಂಭವಿಸಿದೆ.

ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.ವಿಮಾನವನ್ನು ಹೆಚ್ಚಿನ ಬಳಕೆಗೆ ಅನುಮತಿಸುವ ಮೊದಲು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಕೊಚ್ಚಿಯಿಂದ ಆಗಮಿಸುತ್ತಿರುವ ವಿಮಾನವು ಜುಲೈ 21 ರಂದು ಬೆಳಗ್ಗೆ 9.27 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ಇಳಿಯಿತು.

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ವಿಮಾನ ನಿಲ್ದಾಣದ ಪ್ರಾಥಮಿಕ ರನ್‌ವೇಗೆ ಸಣ್ಣಪುಟ್ಟ ಹಾನಿಗಳು ವರದಿಯಾಗಿವೆ.ಮುಂದಿನ ಎರಡು ದಿನಗಳಲ್ಲಿ ಮುಂಬೈ ನಿವಾಸಿಗಳು ಮತ್ತಷ್ಟು ಮಳೆ ಎದುರಿಸಲು ಸಿದ್ಧರಾಗಬೇಕು. ಮುಂದಿನ 48 ಗಂಟೆಗಳಲ್ಲಿ ಮಳೆ ಇನ್ನಷ್ಟು ತೀವ್ರವಾಗುವ ನಿರೀಕ್ಷೆಯಿದೆ ಮತ್ತು ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಮತ್ತಷ್ಟು ಓದಿ: ಅದನ್ನು ಯಾಕೆ ಕಡಿತಗೊಳಿಸಿದಿರಿ? ಏರ್ ಇಂಡಿಯಾ ಪೈಲಟ್​ಗಳ ಕೊನೆಯ ಸಂಭಾಷಣೆಯಲ್ಲಿತ್ತು ಪತನದ ರಹಸ್ಯ

ನಿರಂತರ ಮಳೆಯಿಂದಾಗಿ, ನಗರದ ಅನೇಕ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಈ ವಾರದ ಆರಂಭದಲ್ಲಿ, ಅಂಧೇರಿ ಸಬ್‌ವೇ ಕೂಡ ಪ್ರವಾಹಕ್ಕೆ ಸಿಲುಕಿ ಜನರನ್ನು ಸುರಕ್ಷಿತವಾಗಿಡಲು ಸ್ವಲ್ಪ ಸಮಯದವರೆಗೆ ಮುಚ್ಚಬೇಕಾಯಿತು.

ಜುಲೈ 21: ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಜುಲೈ 22: ಅಂದು ಕೂಡ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ,  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 23: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜೂನ್ 12ರಂದು ಅಹಮದಾಬಾದ್​​ನಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿ ಸ್ವಲ್ಪ ಸೆಕೆಂಡುಗಳಲ್ಲೇ ಪತನಗೊಂಡಿತ್ತು. ಪರಿಣಾಮ 270 ಮಂದಿ ಪ್ರಾಣ ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!