AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಮೇಘಸ್ಫೋಟ; ಹಲವೆಡೆ ಭಾರೀ ಮಳೆ; ಬೆಂಗಳೂರಿಗೆ ಬಂದ 3 ವಿಮಾನಗಳು

Cloudburst in Chennai: ಚೆನ್ನೈನ ಬಹುತೇಕ ಕಡೆ ಶನಿವಾರ ರಾತ್ರಿ ತೀವ್ರ ಮಳೆಯಾಗಿದೆ. ಆರು ಸ್ಥಳಗಳಲ್ಲಿ ಮೇಘ ಸ್ಫೋಟವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಿರ್ದಿಷ್ಟ ಪ್ರದೇಶದಲ್ಲಿ ಒಂದು ಗಂಟೆಯಲ್ಲಿ 10 ಸೆಂ.ಮಿ. ಮಳೆಯಾದರೆ ಅದು ಮೇಘಸ್ಫೋಟ ಎನಿಸುತ್ತದೆ. ನಿನ್ನೆ ರಾತ್​ರಿ ಚೆನ್ನೈಗೆ ಬಂದ ಮೂರು ವಿಮಾನಗಳಿಗೆ ಇಳಿಯಲು ಸಾಧ್ಯವಾಗದ ಕಾರಣ ಬೆಂಗಳೂರಿಗೆ ಹೋಗಬೇಕಾಯಿತು.

ಚೆನ್ನೈನಲ್ಲಿ ಮೇಘಸ್ಫೋಟ; ಹಲವೆಡೆ ಭಾರೀ ಮಳೆ; ಬೆಂಗಳೂರಿಗೆ ಬಂದ 3 ವಿಮಾನಗಳು
ಚೆನ್ನೈನಲ್ಲಿ ಮಳೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2025 | 3:43 PM

Share

ಚೆನ್ನೈ, ಆಗಸ್ಟ್ 31: ತಮಿಳುನಾಡು ರಾಜಧಾನಿ ನಗರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಚೆನ್ನೈನ ಕೆಲವೆಡೆ ಮೇಘಸ್ಫೋಟ (cloud burst) ಸಂಭವಿಸಿ ತೀವ್ರ ಮಟ್ಟದ ಮಳೆಯಾಗಿದೆ. ಹಲವೆಡೆ 200 ಎಂಎಂಗಿಂತಲೂ ಹೆಚ್ಚು ಮಟ್ಟದ ಮಳೆ (heavy rainfall) ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮಾಹಿತಿ ನೀಡಿದೆ. ಮನಾಲಿಯಲ್ಲಿ 270 ಎಂಎಂ, ನ್ಯೂ ಮನಾಲಿ ಟೌನ್​ನಲ್ಲಿ 260 ಎಂಎಂ, ವಿಮ್ಕೋ ನಗರ್​ನಲ್ಲಿ 230 ಎಂಎಂ ಮಳೆಯಾಗಿದೆ ಎಂದು ಹೇಳಲಾಗಿದೆ. ಒಟ್ಟು ಆರು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಐಎಂಡಿ ಹೇಳಿದೆ.

ಈ ಮೇಲಿನ ಸ್ಥಳಗಳಲ್ಲಿ ಮೇಘಸ್ಫೋಟದಿಂದ ಇಷ್ಟು ತೀವ್ರ ಮಳೆಯಾಗಿದೆ. ಇವಲ್ಲದೇ ಚೆನ್ನೈ ಇನ್ನೂ ಹಲವು ಸ್ಥಳಗಳಲ್ಲೂ ಭಾರೀ ಮಳೆಯಾಗಿದೆ. ಇಂದು ಭಾನುವಾರಕ್ಕೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ಕೊಟ್ಟಿಲ್ಲ.

ಇದನ್ನೂ ಓದಿ: Modi Mann Ki Baat: ನೈಸರ್ಗಿಕ ವಿಕೋಪಗಳು ದೇಶವನ್ನು ಪರೀಕ್ಷಿಸುತ್ತಿವೆ: ಪ್ರಧಾನಿ ಮೋದಿ

ಮೇಘ ಸ್ಫೋಟ ಎಂದರೇನು?

ಕ್ಲೌಡ್​ಬರ್ಸ್ಟ್ ಅಥವಾ ಮೇಘಸ್ಫೋಟ ಎಂಬುದು ತೀವ್ರ ಮಳೆಗೆ ಉಪಯೋಗಿಸುವ ಪದ. 2030 ಚದರ ಕಿಮೀ ಪ್ರದೇಶದಲ್ಲಿ ಒಂದು ಗಂಟೆಯಲ್ಲಿ 100 ಎಂಎಂ ಮಳೆಯಾದಾಗ ಮೇಘಸ್ಫೋಟ ಎಂದು ಕರೆಯಲಾಗುತ್ತದೆ. ಇದು ವಿಶ್ವ ಹವಾಮಾನ ಸಂಸ್ಥೆ ಹಾಗೂ ಭಾರತೀಯ ಹವಾಮಾನ ಇಲಾಖೆ ಮೇಘಸ್ಫೋಟವೆಂದು ವರ್ಗೀಕರಿಸಲು ನಿಗದಿ ಮಾಡಿರುವ ಮಾನದಂಡ.

ನಿನ್ನೆ ಶನಿವಾರ ರಾತ್ರಿ ಆರು ಸ್ಥಳಗಳಲ್ಲಿ ಗಂಟೆಗೆ 10 ಸೆಂಟಿ ಮೀಟರ್​ನಷ್ಟು ಮಳೆಯಾಗಿದೆ. ಇದು ಮೇಘ ಸ್ಫೋಟವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮನಾಲಿ, ವಿಮ್ಕೋ ನಗರ್, ಕೊರಟ್ಟೂರು, ನ್ಯೂ ಮಲಾನಿ ಟೌನ್, ಎಣ್ಣೋರ್ ಮೊದಲಾದ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಅಯಪಕ್ಕಂ, ಪ್ಯಾರಿಸ್, ಅಂಬತ್ತೂರು, ನೇರಕುಂಡ್ರಂ, ಕೊಳತ್ತೂರು, ಕಾಸಿಮೆಡು, ರೆಡ್ ಹಿಲ್ಸ್ ಸೇರಿದಂತೆ ಚೆನ್ನೈ ಬಹುತೇಕ ಸ್ಥಳಗಳಲ್ಲಿ ಜೋರು ಮಳೆಯಾಗಿದೆ.

ಇದನ್ನೂ ಓದಿ: ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ

ವಿಮಾನಗಳ ಮಾರ್ಗಬದಲಾವಣೆ

ಚೆನ್ನೈನಲ್ಲಿ ಭಾರೀಯ ಮಳೆಯಾಗುತ್ತಿದ್ದುದರಿಂದ, ಅಲ್ಲಿಗೆ ಹೊರಟಿದ್ದ ಮೂರು ಫ್ಲೈಟ್​ಗಗಳನ್ನು ಬೆಂಗಳೂರಿಗೆ ಮಾರ್ಗಬದಲಾವಣೆ ಮಾಡಿ ಕಳುಹಿಸಲಾಗಿದೆ. ಫ್ರಾಂಕ್​ಫುರ್ಟ್, ಮಂಗಳೂರು ಮತ್ತು ನವದೆಹಲಿಯಿಂದ ಚೆನ್ನೈಗೆ ಹೋಗಿದ್ದ ವಿಮಾನಗಳಿಗೆ, ಚೆನ್ನೈನಲ್ಲಿ ಇಳಿಯಲು ಸಾಧ್ಯವಾಗದ ಕಾರಣ ಬೆಂಗಳೂರು ಏರ್​ಪೋರ್ಟ್​ಗೆ ಬರಬೇಕಾಯಿತು ಎಂದು ವರದಿಗಳು ಹೇಳಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ