AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ನಲ್ಲಿ ಮೇಘಸ್ಫೋಟ; ರಸ್ತೆ, ಮನೆಗಳಿಗೆ ಅಪಾರ ಹಾನಿ

2013ರ ಜೂನ್​ನಲ್ಲಿ ಉತ್ತರಾಖಂಡ್​ನಲ್ಲಿ ಕೆಲವುದಿನಗಳು ನಿರಂತರವಾಗಿ ಮೇಘಸ್ಫೋಟಗೊಂಡು ದೊಡ್ಡಮಟ್ಟದ ಪ್ರವಾಹ ಉಂಟಾಗಿತ್ತು. ಆಗ ಏನಿಲ್ಲವೆಂದರೆ 5700 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಅಂದಾಜಿಸಿತ್ತು.

ಉತ್ತರಾಖಂಡ್​​ನಲ್ಲಿ ಮೇಘಸ್ಫೋಟ; ರಸ್ತೆ, ಮನೆಗಳಿಗೆ ಅಪಾರ ಹಾನಿ
ಉತ್ತರಾಖಂಡ್​ನಲ್ಲಿ ಮೇಘಸ್ಫೋಟ
Follow us
Lakshmi Hegde
|

Updated on:May 03, 2021 | 9:21 PM

ಡೆಹ್ರಾಡೂನ್: ಉತ್ತರಾಖಂಡ್​​ನ ಉತ್ತರಕಾಶಿ, ರುದ್ರಪ್ರಯಾಗ ಮತ್ತು ತೆಹ್ರಿ ಜಿಲ್ಲೆಗಳಲ್ಲಿ ಇಂದು ಮೇಘಸ್ಫೋಟವಾದ ಪರಿಣಾಮ ಅಪಾರ ಹಾನಿಯಾಗಿದೆ. ಅದೃಷ್ಟಕ್ಕೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮೇಘಸ್ಫೋಟದಿಂದ ಸುರಿದ ಮಳೆಗೆ ಹಲವು ರಸ್ತೆಗಳು, ಮನೆಗಳಿಗೆ ತುಂಬ ಹಾನಿಯಾಗಿದ್ದು, ಸ್ಥಳದಲ್ಲಿ ಪೊಲೀಸರು, ರಕ್ಷಣಾ ತಂಡಗಳು, ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅಂದರೆ ಏಪ್ರಿಲ್​ 23ರಂದು ಚಮೋಲಿ ಘರ್​ವಾಲ್ ಜಿಲ್ಲೆಯ ಸುಮ್ನಾ ಗ್ರಾಮದಲ್ಲಿ ಹಿಮನದಿ ಕುಸಿತವಾಗಿತ್ತು. ಇದರಲ್ಲಿ ಸುಮಾರು 25ಮಂದಿ ಮೃತಪಟ್ಟಿದ್ದರು. ಅದಕ್ಕೂ ಹಿಂದೆ ಕೂಡ ಒಮ್ಮೆ ಇದೇ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡು ನೂರಾರು ಮಂದಿ ಸಾವನ್ನಪ್ಪಿದ್ದರು.

2013ರ ಜೂನ್​ನಲ್ಲಿ ಉತ್ತರಾಖಂಡ್​ನಲ್ಲಿ ಕೆಲವುದಿನಗಳು ನಿರಂತರವಾಗಿ ಮೇಘಸ್ಫೋಟಗೊಂಡು ದೊಡ್ಡಮಟ್ಟದ ಪ್ರವಾಹ ಉಂಟಾಗಿತ್ತು. ಆಗ ಏನಿಲ್ಲವೆಂದರೆ 5700 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಅಂದಾಜಿಸಿತ್ತು. ಅದೊಂದು ಭೀಕರ ವಿನಾಶ ಎಂದೇ ಹೇಳಲಾಗಿತ್ತು.

ಇದನ್ನೂ ಓದಿ: ಮನೆಯಲ್ಲೇ ಐಸಿಯು ಈಗ ದೇಶವ್ಯಾಪಿ ಕಂಡು ಬರುತ್ತಿರುವ ಹೊಸ ಟ್ರೆಂಡ್: ಇದು ಕೊರೊನಾ 2ನೇ ಅಲೆ ಹೊಡೆತದ ಪರಿಣಾಮ

Covid-19 Karnataka Update: ಕರ್ನಾಟಕದಲ್ಲಿ 44,438 ಮಂದಿಗೆ ಕೊರೊನಾ ಸೋಂಕು, 239 ಸಾವು

Published On - 9:20 pm, Mon, 3 May 21

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ