ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಹರಾಜು ಪ್ರಕರಣ; ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದ ಸಿಎಂ ಗೆಹ್ಲೋಟ್

ಇದೊಂದು ಆಘಾತಕಾರಿ ಘಟನೆಯಾಗಿದ್ದು, ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸುವುದಾಗಿ ನಮ್ಮ ಸರ್ಕಾರ ಭರವಸೆ ನೀಡುತ್ತದೆ ಎಂದು ಸಿಎಂ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಹರಾಜು ಪ್ರಕರಣ; ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದ ಸಿಎಂ ಗೆಹ್ಲೋಟ್
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
Edited By:

Updated on: Oct 28, 2022 | 8:37 PM

ಜೈಪುರ: ರಾಜಸ್ಥಾನದ (Rajasthan) ಭಿಲ್ವಾರಾ ಜಿಲ್ಲೆಯಲ್ಲಿ ಸ್ಟಾಂಪ್ ಪೇಪರ್‌ಗಳಲ್ಲಿ ಸಹಿ ಹಾಕಿಸಿಕೊಂಡು ಹುಡುಗಿಯರನ್ನು ಮಾರಾಟ ಮಾಡಲಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಈ ಬಗ್ಗೆ ತನಿಖೆ ನಡೆಸಲು ತಂಡಗಳನ್ನು ನಿಯೋಜಿಸಲಾಗಿದೆ. ತಪ್ಪು ಮಾಡಿದವರು ಯಾರೇ ಆಗಲಿ ಅವರನ್ನು ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಇದೊಂದು ಆಘಾತಕಾರಿ ಘಟನೆಯಾಗಿದ್ದು, ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸುವುದಾಗಿ ನಮ್ಮ ಸರ್ಕಾರ ಭರವಸೆ ನೀಡುತ್ತದೆ ಎಂದು ಸಿಎಂ ಗೆಹ್ಲೋಟ್ ಹೇಳಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC), ರಾಷ್ಟ್ರೀಯ ಮಹಿಳಾ ಆಯೋಗ (NCW), ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮತ್ತು ರಾಜಸ್ಥಾನದ ಮಹಿಳಾ ಆಯೋಗ (RSCW) ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.


ಏನಿದು ಘಟನೆ?:

ರಾಜಸ್ಥಾನದಲ್ಲಿ ಸ್ಟಾಂಪ್ ಪೇಪರ್‌ಗಳ ಮೇಲೆ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು 8 ವರ್ಷದ ಹುಡುಗಿಯರನ್ನು ಮಾರಾಟ ಮಾಡಲಾಗಿತ್ತು. ನಂತರ ಈ ಪ್ರಕರಣದ ಬಗ್ಗೆ ಎದ್ದ ವಿವಾದಗಳನ್ನು ಇತ್ಯರ್ಥಗೊಳಿಸಲು ಗ್ರಾಮ ಜಾತಿ ಮಂಡಳಿಗಳ ಆದೇಶದ ಮೇರೆಗೆ ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಈ ಕೃತ್ಯ ತಡವಾಗಿ ಬೆಳಕಿಗೆ ಬಂದಿದ್ದು, ರಾಜಸ್ಥಾನದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಈ ಬಗ್ಗೆ ಬುಧವಾರ ವರದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನಿರಂತರ ಅತ್ಯಾಚಾರ, 5 ಬಾರಿ ಗರ್ಭಪಾತ: ಚಳ್ಳಕೆರೆ CPI ವಿರುದ್ಧ ರೇಪ್​ ಕೇಸ್​ ದಾಖಲಿಸಿ ಈಗ ಉಲ್ಟಾ ಹೊಡೆದ ಯುವತಿ

ಜಾತಿ ಮಂಡಳಿಯು ವ್ಯಕ್ತಿಯೊಬ್ಬನಿಗೆ ಮೊದಲು ತನ್ನ ಸಹೋದರಿಯನ್ನು ಮಾರಾಟ ಮಾಡಿ, ನಂತರ ಅವನ 12 ವರ್ಷದ ಮಗಳನ್ನು 15 ಲಕ್ಷ ರೂ. ಸಾಲಕ್ಕೆ ಬದಲಾಗಿ ಮಾರಾಟ ಮಾಡಬೇಕೆಂದು ಸೂಚಿಸಿತ್ತು. ಮತ್ತೊಬ್ಬ ಬಾಲಕಿಯನ್ನು 6 ಲಕ್ಷ ರೂ.ಗೆ ಮಾರಾಟ ಮಾಡಿ ಆಗ್ರಾಕ್ಕೆ ಕರೆದೊಯ್ಯಲಾಗಿತ್ತು. ಅವಳನ್ನು ಮತ್ತೆ 3 ಬಾರಿ ಮಾರಲಾಗಿತ್ತು. ಆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ 4 ಬಾರಿ ಗರ್ಭಿಣಿಯಾಗಿದ್ದಳು. ಆಕೆಯ ತಂದೆ ತನ್ನ ಹೆಂಡತಿಯ ಚಿಕಿತ್ಸೆಗಾಗಿ ತೆಗೆದುಕೊಂಡ 6 ಲಕ್ಷ ರೂ. ಹಣ ವಾಪಾಸ್ ನೀಡಲು ಮತ್ತೆ ಆ ಬಾಲಕಿಯನ್ನು ಮಾರಾಟ ಮಾಡಲಾಗಿತ್ತು. ಆಕೆಯ ಮೇಲಾದ ನಿರಂತರ ದೌರ್ಜನ್ಯದಿಂದ ಆಕೆ ಸಾವನ್ನಪ್ಪಿದ್ದಳು.

ಹಣಕಾಸಿನ ವಹಿವಾಟು ಮತ್ತು ಸಾಲದ ವಿವಾದಗಳ ಸಂದರ್ಭದಲ್ಲಿ ಹಣವನ್ನು ವಸೂಲಿ ಮಾಡಲು ಹುಡುಗಿಯರನ್ನು ಹರಾಜು ಮಾಡಲಾಗಿತ್ತು. ಆ ಬಾಲಕಿಯರನ್ನು ವಿದೇಶಕ್ಕೆ ಸಾಗಿಸಲಾಗುತ್ತಿತ್ತು. ಅಲ್ಲಿ ಅವರಿಗೆ ದೈಹಿಕ ಕಿರುಕುಳ, ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ ನೀಡಲಾಗುತ್ತಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us