AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ
ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
TV9 Web
| Edited By: sandhya thejappa|

Updated on:Apr 07, 2022 | 9:15 AM

Share

ದೆಹಲಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ (BJP) ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಮೈಸೂರಿಗೆ ತೆರಳಲಿರುವ ಬೊಮ್ಮಾಯಿ: ಮೈಸೂರಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸುತ್ತಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿರುವ ಬೊಮ್ಮಾಯಿ, ಸಂಜೆ 4 ಗಂಟೆಗೆ ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೊಮ್ಮಾಯಿ ಭೇಟಿ ನೀಡುತ್ತಾರೆ. ನಂತರ ಮಠದಲ್ಲಿ ಸುತ್ತೂರುಶ್ರೀಗಳ ಆಶೀರ್ವಾದ ಪಡೆದು ಸಂಜೆ 6.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಾರೆ.

ಇದನ್ನೂ ಓದಿ

JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ

Published On - 9:10 am, Thu, 7 April 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!