AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ-ರೈತರ ಒಕ್ಕೂಟದ ಮಾತುಕತೆ ವಿಫಲವಾಗಿದ್ದಕ್ಕೆ ಭಗವಂತ್ ಮಾನ್ ಕಾರಣ: ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್

ಭಗವಂತ್ ಮಾನ್ ರೈತರ ಪರವಾಗಿರುವ ಎಲ್ಲಾ ಜನರೊಂದಿಗಿನ ಈ ಮಾತುಕತೆಗಳು ವಿಫಲಗೊಳ್ಳಲು ಉದ್ದೇಶಿಸಿದ್ದರು. ಏಕೆಂದರೆ ಈ ಮಾತುಕತೆ ವಿಫಲವಾದರೆ ಸಿಎಂ ಮಾನ್ ಅವರು ಎಲ್ಲವನ್ನೂ ಪಡೆಯುತ್ತಾರೆ.ಹೀಗೆ ಮಾಡಿದಾಗ ಅವರಿಗೆ (ಮಾನ್ ) ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ತೋರಿಸಲು ಸಾಧ್ಯವಾಗುತ್ತದೆ. ಈ ಮೂಲಕ ಆರಂಭದಲ್ಲಿ ಚಂಡೀಗಢಕ್ಕೆ ಮೆರವಣಿಗೆ ಮಾಡಲು ಬಯಸಿದ್ದ ರೈತರನ್ನು ದೆಹಲಿಗೆ ಮರುನಿರ್ದೇಶಿಸಬಹುದು ಎಂದು ಸುನೀಲ್ ಜಾಖರ್ ದೂಷಿಸಿದ್ದಾರೆ.

ಕೇಂದ್ರ-ರೈತರ ಒಕ್ಕೂಟದ ಮಾತುಕತೆ ವಿಫಲವಾಗಿದ್ದಕ್ಕೆ ಭಗವಂತ್ ಮಾನ್ ಕಾರಣ: ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್
ಸುನೀಲ್ ಜಾಖರ್
ರಶ್ಮಿ ಕಲ್ಲಕಟ್ಟ
|

Updated on: Feb 21, 2024 | 1:48 PM

Share

ಚಂಡೀಗಢ, ಫೆಬ್ರವರಿ 21 : ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆ ವಿಫಲವಾಗಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಕಾರಣ ಎಂದು ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್ (Sunil Jakhar) ಮಂಗಳವಾರ ಹೇಳಿದ್ದಾರೆ. “ಭಗವಂತ್ ಮಾನ್  ರೈತರ ಪರವಾಗಿರುವ ಎಲ್ಲಾ ಜನರೊಂದಿಗಿನ ಈ ಮಾತುಕತೆಗಳು ವಿಫಲಗೊಳ್ಳಲು ಉದ್ದೇಶಿಸಿದ್ದರು. ಏಕೆಂದರೆ ಈ ಮಾತುಕತೆ ವಿಫಲವಾದರೆ ಸಿಎಂ ಮಾನ್ ಅವರು ಎಲ್ಲವನ್ನೂ ಪಡೆಯುತ್ತಾರೆ” ಎಂದು ಜಾಖರ್ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಬರೆದಿದ್ದಾರೆ.

ಹೀಗೆ ಮಾಡಿದಾಗ ಅವರಿಗೆ (ಮಾನ್ ) ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ತೋರಿಸಲು ಸಾಧ್ಯವಾಗುತ್ತದೆ. ಈ ಮೂಲಕ ಆರಂಭದಲ್ಲಿ ಚಂಡೀಗಢಕ್ಕೆ ಮೆರವಣಿಗೆ ಮಾಡಲು ಬಯಸಿದ್ದ ರೈತರನ್ನು ದೆಹಲಿಗೆ ಮರುನಿರ್ದೇಶಿಸಬಹುದು. ಪರಿಹಾರ ಕಂಡುಹಿಡಿಯಲು ರೈತರು ಮತ್ತು ಕೇಂದ್ರ ಸಚಿವರ ತಂಡದ ಪ್ರಾಮಾಣಿಕ ಪ್ರಯತ್ನಗಳಿಗೆ ಧಕ್ಕೆ ತರುವ ಮೂಲಕ ಮಾನ್ ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಾಖರ್ ದೂಷಿಸಿದ್ದಾರೆ.

ಜಾಖರ್ ಟ್ವೀಟ್

“ಅಂತಹ ವ್ಯಕ್ತಿಗೆ ರೈತರನ್ನು ಪ್ರತಿನಿಧಿಸಲು ಅಧಿಕಾರ ನೀಡಿದವರು ಯಾರು ಎಂದು ಪಂಜಾಬ್​​ನವರು ಚಿಂತಿಸುತ್ತಿದ್ದಾರೆ. ಅವರು ತಮ್ಮ ಸರ್ಕಾರ ರಚನೆಯಾದ ಐದು ನಿಮಿಷಗಳಲ್ಲಿ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ನೀಡುವ ಭರವಸೆಯಿಂದ ಹಿಂದೆ ಸರಿದು ಮೋಸ ಮಾಡಿದರು. ಅದೇ ರೀತಿ ಪ್ರವಾಹದಿಂದಾದ ಹಾನಿಗೆ ಪರಿಹಾರ ನೀಡದೆ ಪಂಜಾಬ್ ರೈತರನ್ನು ವಂಚಿಸಿದರು ಎಂದು ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು ಈ ಬಗ್ಗೆ ಎಕ್ಸ್ ನಲ್ಲಿ ಬರೆದಿದ್ದಾರೆ. ರೈತರಿಗೆ ಸಂಬಂಧಿಸಿದ ಸಮಸ್ಯೆಗಳು ಸೇರಿದಂತೆ ಪಂಜಾಬ್‌ಗೆ ಸಂಬಂಧಿಸಿದ ವ್ಯಾಪಕ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವರವಾಗಿ ಚರ್ಚೆ ಮಾಡಿರುವುದಾಗಿ ಕ್ಯಾಪ್ಟನ್ ಅಮರಿಂದರ್ ಹೇಳಿದ್ದು, ಎಲ್ಲರ ಮನಸೂರೆಗೊಳ್ಳುವಂತೆ ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕ್ಯಾಪ್ಟನ್ ಅಮರಿಂದರ್ ಅವರು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿರುವ ತಮ್ಮ ಪುತ್ರಿ ಜೈ ಇಂದರ್ ಕೌರ್ ಜೊತೆಗಿದ್ದರು.

ಇದನ್ನೂ ಓದಿ: Delhi Chalo March: ಎಂಎಸ್‌ಪಿ ಗ್ಯಾರಂಟಿ ಕುರಿತು ಕಾನೂನನ್ನು ಘೋಷಿಸುವಂತೆ ಪ್ರಧಾನಿ ಮೋದಿಗೆ ರೈತರ ಒತ್ತಾಯ

ಒಂದು ದಿನ ಮುಂಚಿತವಾಗಿ, ಹತ್ತಿ ಮತ್ತು ಮೆಕ್ಕೆಜೋಳವನ್ನು ಹೊರತುಪಡಿಸಿ ಮೂರು ಬೇಳೆಕಾಳುಗಳನ್ನು ಎಂಎಸ್‌ಪಿಯಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಸಂಘಗಳು ತಿರಸ್ಕರಿಸಿದವು. ಕೇಂದ್ರ ಸರ್ಕಾರ ಜತೆಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ‘ದಿಲ್ಲಿ ಚಲೋ’ ಮೆರವಣಿಗೆ ಪುನಾರಂಭವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ