AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಟಿಆರ್​ಎಸ್​ ಶಾಸಕ

ಶಾಸಕ ಕೆ.ಚಂದ್ರಶೇಖರ್​ ರಾವ್​ ಭಾಷಣದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಅವರನ್ನು ನೆಟ್ಟಿಗರು ವಿಪರೀತ ಟ್ರೋಲ್​ ಮಾಡಿದ್ದಾರೆ. ಮುಖ್ಯಮಂತ್ರಿ ಕೆಸಿಆರ್​ ಮಹಿಳೆಯರ ಪಾಲಿಗೆ ಕೇವಲ ಪಾಲಕರು ಮಾತ್ರವಲ್ಲ, ಗಂಡನೂ ಹೌದು ಎಂದು ವ್ಯಂಗ್ಯವಾಗಿ ಅನೇಕರು ಕಾಮೆಂಟ್​ ಮಾಡಿದ್ದಾರೆ.

‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಟಿಆರ್​ಎಸ್​ ಶಾಸಕ
ವಿವಾದ ಸೃಷ್ಟಿಸಿದ ಶಾಸಕ ರಾಜಯ್ಯ
TV9 Web
| Edited By: |

Updated on:Oct 04, 2021 | 11:59 AM

Share

ತೆಲಂಗಾಣದಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಅನುಕೂಲಕ್ಕಾಗಿ ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ (Telangana Chief Minister K Chandrasekhar Rao) ಅವರು ಕೆಸಿಆರ್​ ಕಿಟ್​ ಮತ್ತು ಅಮ್ಮಾ ವೋಡಿ ಎಂಬ ಎರಡು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಗರ್ಭಿಣಿಯರಿಗೆ ನೀಡಲಾಗುವ ಈ ಕೆಸಿಆರ್​ ಕಿಟ್​​ನಲ್ಲಿ, ಅವರಿಗೆ ಹೆರಿಗೆಯ ನಂತರ ಬೇಕಾಗುವ ಅತ್ಯಗತ್ಯವಾದ 16 ವಸ್ತುಗಳನ್ನು ಇಡಲಾಗುತ್ತದೆ. ಇದೀಗ ಈ ಯೋಜನೆಯನ್ನು, ಅದನ್ನು ಜಾರಿಗೊಳಿಸಿದ ಕೆಸಿಆರ್​​​ರನ್ನು ಹೊಗಳುವ ಭರದಲ್ಲಿ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ, ಸ್ಟೇಶನ್​ ಘನಪುರ್​​ ಕ್ಷೇತ್ರದ ಶಾಸಕ ತಟಿಕೊಂಡ ರಾಜಯ್ಯ ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ನಂತರ ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾರೆ.  

ಅಕ್ಟೋಬರ್​ 6ರಿಂದ ಪ್ರಾರಂಭವಾಗಲಿರುವ ಬಥುಕಮ್ಮ ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಬಡ ಮಹಿಳೆಯರಿಗೆ ಬಥುಕಮ್ಮ ಸೀರೆ ವಿತರಣೆ ಕಾರ್ಯಕ್ರಮ ಎಲ್ಲೆಡೆ ನಡೆಯುತ್ತಿದೆ. ಹಾಗೇ, ಲಿಂಗಾಲ ಘನಪುರ ಮಂಡಲದಲ್ಲೂ ಸೀರೆ ವಿತರಣೆ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ  ಟಿಆರ್​ಎಸ್​ ಶಾಸಕ ರಾಜಯ್ಯ, ‘ನಮ್ಮ ರಾಜ್ಯದ ಮುಖ್ಯಮಂತ್ರಿ ಕೆಸಿಆರ್​ ಮಹಿಳಾ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರು, ನವಜಾತ ಶಿಶುಗಳಿಗಾಗಿ ಕೆಸಿಆರ್​​ ಕಿಟ್​​ನಂತಹ ಯೋಜನೆಗಳನ್ನು ರೂಪಿಸಿದ್ದಾರೆ. ಈ ಕಿಟ್​​ನಲ್ಲಿ ಸೀರೆ, ಮಗುವಿಗೆ ಬೇಕಾದ ಸೋಪ್​, ಡೈಪರ್​, ಎರಡು ಜತೆ ಬಟ್ಟೆ, ಎಣ್ಣೆ, ಸೊಳ್ಳೆ ಪರದೆ ಸೇರಿ ಹಲವು ಅಗತ್ಯ ವಸ್ತುಗಳು ಇರಲಿದೆ. ಒಬ್ಬ ಗರ್ಭಿಣಿಗೆ ಆಕೆಯ ಪತಿ ಮಾಡಿಕೊಡಬೇಕಾದ ವ್ಯವಸ್ಥೆಯನ್ನು ಕೆಸಿಆರ್​ ಮಾಡಿಕೊಡುತ್ತಿದ್ದಾರೆ. ಗರ್ಭಿಣಿಯರಿಗೆ ಆಕೆಯ ಪತಿ, ತಂದೆ-ತಾಯಿ, ಅತ್ತೆ-ಮಾವ ನೀಡುವುದಕ್ಕಿಂತಲೂ ಹೆಚ್ಚಿನ ಸೌಲಭ್ಯ ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೆ, ‘ರಾಜ್ಯದಲ್ಲಿ ಗರ್ಭಿಣಿಯರ ಪಾಲಿಗೆ ಪತಿಯ ಪಾತ್ರ ವಹಿಸಿ, ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿದ್ದಾರೆ’ ಎಂದೂ ಹೇಳಿದ್ದಾರೆ.

ಸಿಕ್ಕಾಪಟೆ ಟ್ರೋಲ್​ ಆದ ಶಾಸಕ ಶಾಸಕ ಕೆ.ಚಂದ್ರಶೇಖರ್​ ರಾವ್​ ಭಾಷಣದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಅವರನ್ನು ನೆಟ್ಟಿಗರು ವಿಪರೀತ ಟ್ರೋಲ್​ ಮಾಡಿದ್ದಾರೆ. ಕೆಲವರಂತೂ ಬೈದಿದ್ದಾರೆ. ಮುಖ್ಯಮಂತ್ರಿ ಕೆಸಿಆರ್​ ಮಹಿಳೆಯರ ಪಾಲಿಗೆ ಕೇವಲ ಪಾಲಕರು ಮಾತ್ರವಲ್ಲ, ಗಂಡನೂ ಹೌದು ಎಂದು ವ್ಯಂಗ್ಯವಾಗಿ ಅನೇಕರು ಕಾಮೆಂಟ್​ ಮಾಡಿದ್ದಾರೆ. ಹೀಗೆ ತನ್ನ ಮಾತಿನಿಂದ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಯಾಗುತ್ತಿದೆ. ತಾವಾಡಿದ ಮಾತು ಬೇರೆಯದೇ ಅರ್ಥ ಪಡೆದುಕೊಂಡಿದೆ ಎಂದು ಗೊತ್ತಾಗುತ್ತಿದ್ದಂತೆ ಶಾಸಕ ರಾಜಯ್ಯ ಕ್ಷಮೆ ಕೇಳಿದ್ದಾರೆ. ಮಹಿಳೆಯರ ಭಾವನೆಗೆ ಧಕ್ಕೆ ತರುವ ಉದ್ದೇಶ ನನ್ನದಾಗಿರಲಿಲ್ಲ. ಕ್ಷಮೆ ಇರಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: 7th Pay Commission: ಕೇಂದ್ರ ಸರ್ಕಾರಿ ನೌಕರರ ಎಕ್ಸ್​ಗ್ರೇಷಿಯಾ ಇಡಿಗಂಟು ಪಾವತಿಯಲ್ಲಿ ಭಾರೀ ಬದಲಾವಣೆ

ತುಮಕೂರಿನ ಕಡಬದಿಂದ ಬಸ್ ಸಂಚಾರ ಆರಂಭ; ಬಸ್ ಚಾಲನೆ ಮಾಡಿ ಹಸಿರು ನಿಶಾನೆ ತೋರಿದ ಶಾಸಕ ಎಸ್.ಆರ್.ಶ್ರೀನಿವಾಸ್

Published On - 11:37 am, Mon, 4 October 21

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ