AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ, ಸಣ್ಣಪುಟ್ಟ ಗಾಯ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್​​​ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ. ಇನ್ನು ಮಮತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 3:34 PM

Share

ದುರ್ಗಾಪುರ, ಏ.27: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು (ಏ.27)ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಎಎನ್​​ಐ ಎಕ್ಸ್​​ನಲ್ಲಿ ಹಂಚಿಕೊಂಡಿದೆ.

ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತ ಸಿಬ್ಬಂದಿಗಳು ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಮೇ ತಿಂಗಳಿನಲ್ಲಿ ಕೋಲ್ಕತ್ತಾದ ತನ್ನ ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹಣೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ​​​ ಮುಖದ ಕೆಳಗೆ ರಕ್ತ ಸುರಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾಗಿತ್ತು. ಅವರನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಜೂನ್ 2023ರಲ್ಲಿ, ಇಂತಹದೇ ಮತ್ತೊಂದು ಘಟನೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್​​​​ನ್ನು ಸಿಲಿಗುರಿಯ ಸಮೀಪವಿರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಸಮಯದಲ್ಲಿ ಅವರ ಕಾಲಿಗೆ ಗಾಯವಾಯಿತು. ಎಡ ಮೊಣಕಾಲು ಕೀಲು ಮತ್ತು ಸೊಂಟದ ಎಡ ಭಾಗಕ್ಕೆ ಗಾಯಗಳಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:24 pm, Sat, 27 April 24

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್