AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ, ಸಣ್ಣಪುಟ್ಟ ಗಾಯ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್​​​ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ. ಇನ್ನು ಮಮತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 3:34 PM

Share

ದುರ್ಗಾಪುರ, ಏ.27: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು (ಏ.27)ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಎಎನ್​​ಐ ಎಕ್ಸ್​​ನಲ್ಲಿ ಹಂಚಿಕೊಂಡಿದೆ.

ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತ ಸಿಬ್ಬಂದಿಗಳು ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಮೇ ತಿಂಗಳಿನಲ್ಲಿ ಕೋಲ್ಕತ್ತಾದ ತನ್ನ ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹಣೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ​​​ ಮುಖದ ಕೆಳಗೆ ರಕ್ತ ಸುರಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾಗಿತ್ತು. ಅವರನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಜೂನ್ 2023ರಲ್ಲಿ, ಇಂತಹದೇ ಮತ್ತೊಂದು ಘಟನೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್​​​​ನ್ನು ಸಿಲಿಗುರಿಯ ಸಮೀಪವಿರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಸಮಯದಲ್ಲಿ ಅವರ ಕಾಲಿಗೆ ಗಾಯವಾಯಿತು. ಎಡ ಮೊಣಕಾಲು ಕೀಲು ಮತ್ತು ಸೊಂಟದ ಎಡ ಭಾಗಕ್ಕೆ ಗಾಯಗಳಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:24 pm, Sat, 27 April 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ