AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ, ಸಣ್ಣಪುಟ್ಟ ಗಾಯ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್​​​ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ. ಇನ್ನು ಮಮತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 3:34 PM

Share

ದುರ್ಗಾಪುರ, ಏ.27: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು (ಏ.27)ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಎಎನ್​​ಐ ಎಕ್ಸ್​​ನಲ್ಲಿ ಹಂಚಿಕೊಂಡಿದೆ.

ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತ ಸಿಬ್ಬಂದಿಗಳು ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಮೇ ತಿಂಗಳಿನಲ್ಲಿ ಕೋಲ್ಕತ್ತಾದ ತನ್ನ ಮನೆಯ ಸಮೀಪದಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹಣೆ ದೊಡ್ಡ ಬ್ಯಾಂಡೇಜ್ ಹಾಕಲಾಗಿತ್ತು. ​​​ ಮುಖದ ಕೆಳಗೆ ರಕ್ತ ಸುರಿಯುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾಗಿತ್ತು. ಅವರನ್ನು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಜೂನ್ 2023ರಲ್ಲಿ, ಇಂತಹದೇ ಮತ್ತೊಂದು ಘಟನೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ತಮ್ಮ ಹೆಲಿಕಾಪ್ಟರ್​​​​ನ್ನು ಸಿಲಿಗುರಿಯ ಸಮೀಪವಿರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರು. ಈ ಸಮಯದಲ್ಲಿ ಅವರ ಕಾಲಿಗೆ ಗಾಯವಾಯಿತು. ಎಡ ಮೊಣಕಾಲು ಕೀಲು ಮತ್ತು ಸೊಂಟದ ಎಡ ಭಾಗಕ್ಕೆ ಗಾಯಗಳಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:24 pm, Sat, 27 April 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ