AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಾ ವಿವಾದ; ತಮಿಳುನಾಡಿನಲ್ಲಿ ಹಿಂದಿಯ ರೂಪಾಯಿ ಚಿಹ್ನೆಯ ಬದಲು ತಮಿಳು ಭಾಷೆಯ ರೂ. ಬಳಕೆಗೆ ನಿರ್ಧಾರ

ತಮಿಳುನಾಡು ಸರ್ಕಾರ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ನಿಲುವು ಹೊಂದಿದ್ದು, ಹಿಂದಿಯ ₹ ಚಿಹ್ನೆಯನ್ನು ಬಳಸದಿರಲು ತಮಿಳುನಾಡು ಸರ್ಕಾರ ನಿರ್ಧಾರ ಮಾಡಿದೆ. ಇದರ ಬದಲು ತಮಿಳಿನ ರೂ. ಅಕ್ಷರ ಬಳಸಲು ಸ್ಟಾಲಿನ್ ಸರ್ಕಾರ ನಿರ್ಧರಿಸಿದೆ. ಎಂ.ಕೆ. ಸ್ಟಾಲಿನ್ ಸರ್ಕಾರ ರಾಜ್ಯ ಬಜೆಟ್‌ನಲ್ಲಿ ಅಧಿಕೃತ ರೂಪಾಯಿ ಚಿಹ್ನೆಯನ್ನು '₹' ಸಂಕೇತದ ಬದಲಿಗೆ ತಮಿಳು ಅಕ್ಷರದೊಂದಿಗೆ ಬದಲಾಯಿಸಿದೆ. ಈ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಸ್ಟಾಲಿನ್ ತಮಿಳು ಭಾಷೆಯನ್ನು ರಕ್ಷಿಸುವ ಬಗ್ಗೆ ಧ್ವನಿ ಎತ್ತಿದ್ದಾರೆ.

ಭಾಷಾ ವಿವಾದ; ತಮಿಳುನಾಡಿನಲ್ಲಿ ಹಿಂದಿಯ ರೂಪಾಯಿ ಚಿಹ್ನೆಯ ಬದಲು ತಮಿಳು ಭಾಷೆಯ ರೂ. ಬಳಕೆಗೆ ನಿರ್ಧಾರ
Mk Stalin
ಸುಷ್ಮಾ ಚಕ್ರೆ
|

Updated on: Mar 13, 2025 | 3:36 PM

Share

ಚೆನ್ನೈ, (ಮಾರ್ಚ್ 13): ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ರಾಜ್ಯ ಬಜೆಟ್‌ನ ಅಧಿಕೃತ ಲೋಗೋದಲ್ಲಿ ಭಾರತೀಯ ರೂಪಾಯಿ ಚಿಹ್ನೆಯಾದ ₹ ಬದಲಿಗೆ ತಮಿಳು ಅಕ್ಷರವಾದ ರೂ. ಬಳಸಲು ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವಿನ ಭಾಷಾ ವಿವಾದದ ನಡುವೆ ಈ ಬೆಳವಣಿಗೆ ನಡೆದಿದೆ. ಹಿಂದಿ ಹೇರಿಕೆ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯ ಸುತ್ತ ನಡೆಯುತ್ತಿರುವ ಚರ್ಚೆಗಳ ನಡುವೆ ಈ ನಿರ್ಧಾರವನ್ನು ತಮಿಳು ಭಾಷೆಯ ಹೆಮ್ಮೆಯ ಪ್ರತಿಪಾದನೆಯಾಗಿ ನೋಡಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಎಂ.ಕೆ. ಸ್ಟಾಲಿನ್ ತಮಿಳು ಕೇವಲ ಭಾಷೆಯಲ್ಲ, ತಮಿಳುನಾಡಿನ ಜನರಿಗೆ ಸಂಸ್ಕೃತಿ, ಇತಿಹಾಸ ಮತ್ತು ಸ್ವಾಭಿಮಾನದ ಸಂಕೇತವಾಗಿದೆ ಎಂದು ವಿವರಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಕುರಿತು ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ವಿವಾದ ತೀವ್ರಗೊಂಡಿದೆ. ಏಕೆಂದರೆ, ತಮಿಳುನಾಡು ರಾಜ್ಯವು ಪ್ರಮುಖ ನಿಬಂಧನೆಗಳನ್ನು ಜಾರಿಗೆ ತರಲು ನಿರಾಕರಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿಧಿಯನ್ನು ನೀಡುವ ಪ್ರಮುಖ ಶಿಕ್ಷಣ ಯೋಜನೆಯಾದ ‘ಸಮಗ್ರ ಶಿಕ್ಷಾ ಅಭಿಯಾನ’ (SSA) ಅಡಿಯಲ್ಲಿ ಕೇಂದ್ರ ಸರ್ಕಾರವು 570 ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ತಡೆಹಿಡಿದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ತಮಿಳುನಾಡು ಸರ್ಕಾರದ ನಿಯೋಗ

SSA ಅಡಿಯಲ್ಲಿ, 60% ಹಣವನ್ನು ಕೇಂದ್ರವು ಒದಗಿಸುತ್ತದೆ. ಆದರೆ, ಈ ಹಣವನ್ನು ಪಡೆಯಲು ರಾಜ್ಯಗಳು NEP ಮಾರ್ಗಸೂಚಿಗಳನ್ನು ಅನುಸರಿಸುವ ನಿರೀಕ್ಷೆಯಿದೆ. ಸಿಎಂ ಸ್ಟಾಲಿನ್ ನೇತೃತ್ವದ ಸರ್ಕಾರವು ಹಿಂದಿಯೇತರ ಮಾತನಾಡುವ ಜನಸಂಖ್ಯೆಯ ಮೇಲೆ ಅದರಲ್ಲೂ ವಿಶೇಷವಾಗಿ ತಮಿಳರ ಮೇಲೆ ಹಿಂದಿ ಹೇರುವ ಪ್ರಯತ್ನವನ್ನು ಬಲವಾಗಿ ವಿರೋಧಿಸಿದೆ. ರಾಜ್ಯವು ಬಹಳ ಹಿಂದಿನಿಂದಲೂ ದ್ವಿಭಾಷಾ ನೀತಿಯನ್ನು ಅಂದರೆ ತಮಿಳು ಮತ್ತು ಇಂಗ್ಲಿಷ್ ಭಾಷಾ ನೀತಿಯನ್ನು ಉಳಿಸಿಕೊಂಡಿದೆ. ಇದು NEPಯ ತ್ರಿಭಾಷಾ ಸೂತ್ರವನ್ನು ಭಾಷಾ ಹಕ್ಕುಗಳ ಉಲ್ಲಂಘನೆ ಎಂದು ಪರಿಗಣಿಸಿದೆ.

ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಡಿಎಂಕೆ ಚುನಾವಣಾ ಲಾಭಕ್ಕಾಗಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!