AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಗೆ ರಾಷ್ಟ್ರಧ್ವಜ ಹಾರಿಸಲು ಬಿಡದ ಗೋವಾ ದ್ವೀಪ ನಿವಾಸಿಗಳ ವಿರುದ್ಧ ಸಿಎಂ ಪ್ರಮೋದ್ ಸಾವಂತ್ ​ಕಿಡಿ; ಕಠಿಣ ಕ್ರಮದ ಎಚ್ಚರಿಕೆ

ಸಾವೋ ಜೆಸಿಂಟೋ ದ್ವೀಪದಲ್ಲಿ ಭಾರತೀಯ ನೌಕಾಪಡೆ ಧ್ವಜಾರೋಹಣ ನೆರವೇರಿಸಲು ನಿರ್ಧರಿಸಿತ್ತು. ಆದರೆ ನಂತರ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಿತ್ತು.

ನೌಕಾಪಡೆಗೆ ರಾಷ್ಟ್ರಧ್ವಜ ಹಾರಿಸಲು ಬಿಡದ ಗೋವಾ ದ್ವೀಪ ನಿವಾಸಿಗಳ ವಿರುದ್ಧ ಸಿಎಂ ಪ್ರಮೋದ್ ಸಾವಂತ್ ​ಕಿಡಿ; ಕಠಿಣ ಕ್ರಮದ ಎಚ್ಚರಿಕೆ
ಗೋವಾ ಸಿಎಂ ಪ್ರಮೋದ್ ಸಾವಂತ್
TV9 Web
| Edited By: |

Updated on:Aug 14, 2021 | 7:15 PM

Share

ದಕ್ಷಿಣ ಗೋವಾದ ಸಾವೋ ಜಸಿಂಟೋ ದ್ವೀಪದಲ್ಲಿ ನೌಕಾಪಡೆ ಧ್ವಜಾರೋಹಣ ಮಾಡುವುದನ್ನು ವಿರೋಧಿಸಿದ್ದ ಸ್ಥಳೀಯ ನಿವಾಸಿಗಳಿಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಇಂಥ ದೇಶ ವಿರೋಧಿ ನಡವಳಿಕೆಗಳನ್ನು ಎಂದಿಗೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಈ ದ್ವೀಪದಲ್ಲಿ ಭಾರತೀಯ ನೌಕಾಪಡೆ ಧ್ವಜಾರೋಹಣ ನೆರವೇರಿಸಲು ನಿರ್ಧರಿಸಿತ್ತು. ಆದರೆ ನಂತರ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಾವು ಧ್ವಜಾರೋಹಣ ಕಾರ್ಯಕ್ರಮ ರದ್ದು ಮಾಡಲು ನಿಶ್ಚಯಿಸಿದ್ದೇವೆ ಎಂದು ನೌಕಾಪಡೆ ತಿಳಿಸಿತ್ತು.

ಆದರೆ ಈಗ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್​ ಸಾವೋ ಜಸಿಂಟೋ ದ್ವೀಪದ ನಿವಾಸಿಗಳಿಗೆ ಖಡಕ್​ ಎಚ್ಚರಿಕೆ ಕೊಟ್ಟು, ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ದಾಬೋಲಿಮ್​​ ಸಮೀಪದ ಐಎನ್​ಎಸ್​ ಹಂಸಾ ನೌಕಾನೆಲೆಯಿಂದ ಮೂರು ಕಿಮೀ ದೂರದಲ್ಲಿ ಈ ಸಾವೋ ಜಸಿಂಟೋ ದ್ವೀಪವಿದೆ. ಭಾರತದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್​ 13-15ರವರೆಗೆ ದೇಶಾದ್ಯಂತ ಎಲ್ಲ ದ್ವೀಪ ಪ್ರದೇಶಗಳಲ್ಲೂ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂಬುದು ಕೇಂದ್ರ ರಕ್ಷಣಾ ಸಚಿವಾಲಯದ ಯೋಜನೆ. ಅಂತೆಯೇ ಈ ಸಾವೋ ಜಸಿಂಟೋ ದ್ವೀಪದಲ್ಲೂ ಧ್ವಜ ಹಾರಿಸಲು ಗೋವಾ ನೌಕಾಪಡೆ ಮುಂದಾಗಿದೆ. ಆದರೆ ಆ ದ್ವೀಪಕ್ಕೆ ಭೇಟಿ ಕೊಟ್ಟಾಗ ಅಲ್ಲಿನವರು ತೀವ್ರವಾಗಿ ವಿರೋಧಿಸಿದರು. ಹಾಗಾಗಿ ರದ್ದುಪಡಿಸಲಾಯಿತು ಎಂದು ನೇವಿಯ ಐಎನ್​ಎಸ್​ ಹಂಸಾದ ವಕ್ತಾರ ಪಿಟಿಐಗೆ ಹೇಳಿದ್ದರು.

ಈ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಕೆಂಡಾಮಂಡಲರಾಗಿದ್ದಾರೆ. ಟ್ವೀಟ್ ಮಾಡಿರುವ ಅವರು, ಹೀಗೆ ರಾಷ್ಟ್ರಧ್ವಜ ಹಾರಿಸಲೂ ವಿರೋಧ ವ್ಯಕ್ತಪಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಂಥ ವರ್ತನೆಯನ್ನು ನನ್ನ ಸರ್ಕಾರ ಸಹಿಸುವುದಿಲ್ಲ. ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಹಾಗೇ, ನೀವು ದ್ವೀಪ ಪ್ರದೇಶಕ್ಕೆ ಹೋಗಿ, ನಿಮ್ಮ ಯೋಜನೆಯಂತೆ ಅಲ್ಲಿ ಧ್ವಜಾರೋಹಣ ಮಾಡಿ ಎಂದು ನೌಕಾಪಡೆ ಸಿಬ್ಬಂದಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಮಾಡುತ್ತಿದ್ದಂತೆ ನಡೆಯಲಿದೆ ವಿಶೇಷ ಘಟನೆ; 2 ಹೆಲಿಕಾಪ್ಟರ್​ಗಳು ಸಿದ್ಧ

Published On - 7:14 pm, Sat, 14 August 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!