AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಮುಷ್ಕರ, ಪ್ರತಿಭಟನೆ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ

ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆ ನಡುವೆ ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ, ಪ್ರತಿಭಟನೆ, ಧರಣಿ ನಡೆಸದಂತೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ನಿಷೇಧ ಹೇರಿದೆ. ಈ ನಿಯಮವು ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಅನ್ವಯಿಸಲಿದೆ.

ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಮುಷ್ಕರ, ಪ್ರತಿಭಟನೆ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ
ಸಿಎಂ ಯೋಗಿ ಆದಿತ್ಯನಾಥ್
ಗಂಗಾಧರ​ ಬ. ಸಾಬೋಜಿ
|

Updated on:Feb 16, 2024 | 10:34 PM

Share

ಲಖನೌ, ಫೆಬ್ರವರಿ 16: ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಆಂದೋಲನದ ನಡುವೆ ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ, ಪ್ರತಿಭಟನೆ, ಧರಣಿ ನಡೆಸದಂತೆ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ನಿಷೇಧ ಹೇರಿದೆ. ಈ ನಿಯಮವು ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಅನ್ವಯಿಸಲಿದೆ. ಒಂದು ವೇಳೆ ಮುಷ್ಕರ ಅಥವಾ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದರೆ, ವಾರಂಟ್ ಇಲ್ಲದೆ ಬಂಧಿಸಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಿಬ್ಬಂದಿ ಡಾ.ದೇವೇಶ್ ಚತುರ್ವೇದ್​ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ.

ಆರು ತಿಂಗಳ ಕಾಲ ಮುಷ್ಕರಕ್ಕೆ ನಿಷೇಧ ಏಕೆ?

ಎಸ್ಮಾ ಕಾಯ್ದೆ ಜಾರಿಯಾದ ನಂತರ ಯಾವುದೇ ನೌಕರರು ಮುಷ್ಕರ ಅಥವಾ ಪ್ರತಿಭಟನೆ ಮಾಡುವ ಮೂಲಕ ಕಾಯ್ದೆ ಉಲ್ಲಂಘಿಸಿದಲ್ಲಿ ವಾರಂಟ್ ಇಲ್ಲದೇ ಬಂಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದಕ್ಕೂ ಮೊದಲು, ಯೋಗಿ ಸರ್ಕಾರವು 2023 ರಲ್ಲಿ ಆರು ತಿಂಗಳ ಕಾಲ ಮುಷ್ಕರವನ್ನು ನಿಷೇಧಿಸಿತ್ತು. ಆಗ ವಿದ್ಯುತ್ ಇಲಾಖೆ ನೌಕರರು ಮುಷ್ಕರ ನಡೆಸಿದ್ದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು.

ಇದನ್ನೂ ಓದಿ: Dilli Chalo: ದಿಲ್ಲಿ ಚಲೋ ಪ್ರತಿಭಟನೆ: ಶಂಭು ಗಡಿಯಲ್ಲಿ ಹೃದಯಾಘಾತದಿಂದ ರೈತ ಸಾವು

ನಾನಾ ಬೇಡಿಕೆಗಳನ್ನು ಮುಂದಿಟ್ಟು ರೈತರು ಬೀದಿಗಿಳಿದಿದ್ದಾರೆ. ಯುಪಿ-ದೆಹಲಿ ಗಡಿಭಾಗದ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.

ಎಸ್ಮಾ ಕಾಯ್ದೆ ಎಂದರೇನು ಮತ್ತು ಅದು ಯಾರಿಗೆ ಅನ್ವಯಿಸುತ್ತದೆ?

ಉತ್ತರ ಪ್ರದೇಶ ಸರ್ಕಾರವು ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ 1966 ರ ಅಡಿಯಲ್ಲಿ ಜಾರಿಗೊಳಿಸಿದ ಎಸ್ಮಾ ಕಾಯ್ದೆಯನ್ನು ರಾಜ್ಯಪಾಲರಿಂದ ಅನುಮೋದನೆ ಪಡೆದ ನಂತರ ಜಾರಿಗೆ ತರಲಾಯಿದೆ. ಪ್ರತಿಭಟನೆ ಮತ್ತು ಮುಷ್ಕರ ಮಾಡುವವರಿಗಾಗಿ AMSA ಕಾಯ್ದೆಯನ್ನು ಮಾಡಲಾಗಿದೆ. ಅದರ ಅನುಷ್ಠಾನದ ನಂತರ, ರಾಜ್ಯದಲ್ಲಿ ಪ್ರತಿಭಟನೆ, ಮುಷ್ಕರಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: Bharat bandh: ಈಗ ನಡೆಯುತ್ತಿರುವ ರೈತರ ಪ್ರತಿಭಟನೆ, ನಾಳೆಯ ಭಾರತ್ ಬಂದ್ ಭಿನ್ನ, ಹೇಗೆ?

ಈ ಕಾಯ್ದೆಯನ್ನು ಉತ್ತರ ಪ್ರದೇಶ ಸರ್ಕಾರವು ಕಳೆದ ವರ್ಷ ಜಾರಿಗೆ ತಂದಿತು. ಇದನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಆರು ತಿಂಗಳವರೆಗೆ ವಿಸ್ತರಿಸಲಾಗಿತ್ತು. ಎಸ್ಮಾ ಕಾಯ್ದೆ ಜಾರಿಯಾದ ನಂತರವು ಯಾವುದೇ ನೌಕರರು ಮುಷ್ಕರ ಅಥವಾ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಲ್ಲಿ, ಕಾಯಿದೆ ಉಲ್ಲಂಘಿಸಿದ ಆರೋಪದ ಮೇಲೆ ವಾರಂಟ್ ಇಲ್ಲದೆ ಮುಷ್ಕರ ನಿರತರನ್ನು ಬಂಧಿಸುವ ಮೂಲಕ ಸರ್ಕಾರದಿಂದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Fri, 16 February 24

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ