AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ
ಸಾಕ್ಷಿ ಮಹಾರಾಜ್​
TV9 Web
| Edited By: |

Updated on: Aug 04, 2021 | 11:35 AM

Share

ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ (Sakshi Maharaj)​ ಸದಾ ಒಂದಿಲ್ಲೊಂದು ವಿವಾದಗಳಿಗೇ ಸುದ್ದಿ ಮಾಡುತ್ತಿರುತ್ತಾರೆ. ಹಾಗೇ, ಈ ಸಲ ಸಮಾಜವಾದಿ ಪಾರ್ಟಿ(Samajwadi Party)ಯ ಅಖಿಲೇಶ್​ ಯಾದವ್(Akhilesh Yadav)​ಗೆ ಖಡಕ್​ ಎಚ್ಚರಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅದೂ ಕೂಡ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ತಂಟೆಗೆ ಬಂದರೆ ಸರಿ ಇರುವುದಿಲ್ಲ ನೋಡಿ..ಎಂದು ಎಚ್ಚರಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​ರಿಗೆ ಕಂಪ್ಯೂಟರ್​ ಕೂಡ ಆಪರೇಟ್ ಮಾಡಲು ಬರುವುದಿಲ್ಲ ಎಂದು ಅಖಿಲೇಶ್ ಯಾದವ್​ ಹೇಳಿದ್ದರು. ಅದರಿಂದ ಸಿಟ್ಟಾದ ಸಾಕ್ಷಿ ಮಹಾರಾಜ್​ ವಾರ್ನಿಂಗ್​ ನೀಡಿದ್ದಾರೆ.

ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದ ಸಾಕ್ಷಿ ಮಹಾರಾಜ್​, ಯೋಗಿ ಆದಿತ್ಯನಾಥ್​ ಅವರಿಗೆ ಕಂಪ್ಯೂಟರ್​ ಆಪರೇಟ್ ಮಾಡಲು ಬಾರದೆ ಇರಬಹುದು. ಆದರೆ ಜನರನ್ನು ಹೇಗೆ ಹೊಡೆದುರುಳಿಸಬೇಕು ಎಂಬುದು ಗೊತ್ತು. ಅಖಿಲೇಶ್​ ಯಾದವ್​ ಬಳಿ ಎಚ್ಚರಿಕೆಯಿಂದ ಇರಲು ಹೇಳಿ. ಮುಂದಿನ ಸರದಿ ಅವರದ್ದೇ ಆಗಿರಬಹುದು ಎಂದು ಹೇಳಿದ್ದಾರೆ. ಈ ಮಾತೀಗ ಸಿಕ್ಕಾಪಟೆ ವಿವಾದ ಸೃಷ್ಟಿಸಿದೆ. ಅಂದಹಾಗೆ ಈ ಕಾರ್ಯಕ್ರಮವನ್ನು ಬಿಜೆಪಿಯ ಸಾದರ್​ ಕ್ಷೇತ್ರದ ಶಾಸಕ ಪಂಕಜ್​ ಗುಪ್ತಾ ಆಯೋಜಿಸಿದ್ದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ. ನಮ್ಮ ರಾಜ್ಯಕ್ಕೆ ಇಷ್ಟು ಒಳ್ಳೆಯ ಮುಖ್ಯಮಂತ್ರಿ ಸಿಕ್ಕಿರಲಿಲ್ಲ ಮತ್ತು ದೇಶಕ್ಕೆ ಮೋದಿಯವರಷ್ಟು ಅದ್ಭುತ ವ್ಯಕ್ತಿ ಪ್ರಧಾನಿಯಾಗಿ ಸಿಕ್ಕಿರಲಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 2021ರಲ್ಲಿ ಹವಾಮಾನ ವೈಪರೀತ್ಯಗಳಿಂದ ತತ್ತರಿಸುತ್ತಿರುವ ಭಾರತ; ಕಾರಣವೇನು?

ಪ್ರಧಾನಿ ನಿವಾಸವನ್ನೇ ಬಾಡಿಗೆಗೆ ಇಟ್ಟ ಪಾಕಿಸ್ತಾನ ಸರ್ಕಾರ; ಬಂಗಲೆ ಬಿಟ್ಟ ಇಮ್ರಾನ್ ಖಾನ್​

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು