AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಯೋಗಿ ಜೀ ಬಗ್ಗೆ ಮಾತನಾಡುವ ಮುನ್ನ ಯೋಚಿಸಿ..; ಅಖಿಲೇಶ್​ ಯಾದವ್​ಗೆ ಎಚ್ಚರಿಕೆ ಕೊಟ್ಟು ವಿವಾದ ಸೃಷ್ಟಿಸಿದ ಬಿಜೆಪಿ ಎಂಪಿ
ಸಾಕ್ಷಿ ಮಹಾರಾಜ್​
TV9 Web
| Edited By: |

Updated on: Aug 04, 2021 | 11:35 AM

Share

ಉನ್ನಾವೋದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ (Sakshi Maharaj)​ ಸದಾ ಒಂದಿಲ್ಲೊಂದು ವಿವಾದಗಳಿಗೇ ಸುದ್ದಿ ಮಾಡುತ್ತಿರುತ್ತಾರೆ. ಹಾಗೇ, ಈ ಸಲ ಸಮಾಜವಾದಿ ಪಾರ್ಟಿ(Samajwadi Party)ಯ ಅಖಿಲೇಶ್​ ಯಾದವ್(Akhilesh Yadav)​ಗೆ ಖಡಕ್​ ಎಚ್ಚರಿಕೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅದೂ ಕೂಡ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ತಂಟೆಗೆ ಬಂದರೆ ಸರಿ ಇರುವುದಿಲ್ಲ ನೋಡಿ..ಎಂದು ಎಚ್ಚರಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​ರಿಗೆ ಕಂಪ್ಯೂಟರ್​ ಕೂಡ ಆಪರೇಟ್ ಮಾಡಲು ಬರುವುದಿಲ್ಲ ಎಂದು ಅಖಿಲೇಶ್ ಯಾದವ್​ ಹೇಳಿದ್ದರು. ಅದರಿಂದ ಸಿಟ್ಟಾದ ಸಾಕ್ಷಿ ಮಹಾರಾಜ್​ ವಾರ್ನಿಂಗ್​ ನೀಡಿದ್ದಾರೆ.

ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದ ಸಾಕ್ಷಿ ಮಹಾರಾಜ್​, ಯೋಗಿ ಆದಿತ್ಯನಾಥ್​ ಅವರಿಗೆ ಕಂಪ್ಯೂಟರ್​ ಆಪರೇಟ್ ಮಾಡಲು ಬಾರದೆ ಇರಬಹುದು. ಆದರೆ ಜನರನ್ನು ಹೇಗೆ ಹೊಡೆದುರುಳಿಸಬೇಕು ಎಂಬುದು ಗೊತ್ತು. ಅಖಿಲೇಶ್​ ಯಾದವ್​ ಬಳಿ ಎಚ್ಚರಿಕೆಯಿಂದ ಇರಲು ಹೇಳಿ. ಮುಂದಿನ ಸರದಿ ಅವರದ್ದೇ ಆಗಿರಬಹುದು ಎಂದು ಹೇಳಿದ್ದಾರೆ. ಈ ಮಾತೀಗ ಸಿಕ್ಕಾಪಟೆ ವಿವಾದ ಸೃಷ್ಟಿಸಿದೆ. ಅಂದಹಾಗೆ ಈ ಕಾರ್ಯಕ್ರಮವನ್ನು ಬಿಜೆಪಿಯ ಸಾದರ್​ ಕ್ಷೇತ್ರದ ಶಾಸಕ ಪಂಕಜ್​ ಗುಪ್ತಾ ಆಯೋಜಿಸಿದ್ದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾಕ್ಷಿ ಮಹಾರಾಜ್​, ಗೃಹ ಸಚಿವ ಅಮಿತ್ ಶಾ ಭಾನುವಾರ ಲಖನೌಗೆ ಆಗಮಿಸಿದ್ದರು. ಈ ವೇಳೆ  ಎರಡು ತಾಸುಗಳ ಕಾಲ ಯೋಗಿ ಜೀಯವರನ್ನು ಹೊಗಳಿದ್ದಾರೆ. ನಮ್ಮ ರಾಜ್ಯಕ್ಕೆ ಇಷ್ಟು ಒಳ್ಳೆಯ ಮುಖ್ಯಮಂತ್ರಿ ಸಿಕ್ಕಿರಲಿಲ್ಲ ಮತ್ತು ದೇಶಕ್ಕೆ ಮೋದಿಯವರಷ್ಟು ಅದ್ಭುತ ವ್ಯಕ್ತಿ ಪ್ರಧಾನಿಯಾಗಿ ಸಿಕ್ಕಿರಲಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 2021ರಲ್ಲಿ ಹವಾಮಾನ ವೈಪರೀತ್ಯಗಳಿಂದ ತತ್ತರಿಸುತ್ತಿರುವ ಭಾರತ; ಕಾರಣವೇನು?

ಪ್ರಧಾನಿ ನಿವಾಸವನ್ನೇ ಬಾಡಿಗೆಗೆ ಇಟ್ಟ ಪಾಕಿಸ್ತಾನ ಸರ್ಕಾರ; ಬಂಗಲೆ ಬಿಟ್ಟ ಇಮ್ರಾನ್ ಖಾನ್​

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?