AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CMRL-Exalogic ಪ್ರಕರಣದಲ್ಲಿ ಪಿಣರಾಯಿ ವಿಜಯನ್, ವೀಣಾ ವಿಜಯನ್​​ಗೆ ಕೇರಳ ಹೈಕೋರ್ಟ್ ನೋಟಿಸ್

ಈ ಹಿಂದೆ, ಕಾಂಗ್ರೆಸ್ ನಾಯಕ ಮ್ಯಾಥ್ಯೂ ಕುಳಲ್​​ನಾಡನ್ ಸಲ್ಲಿಸಿದ್ದ ಅರ್ಜಿಯನ್ನು ವಿಜಿಲೆನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು, ಅಲ್ಲಿ ನ್ಯಾಯಾಲಯವು ಅರ್ಜಿಯಲ್ಲಿ ಮಾನ್ಯವಾದ ಸಾಕ್ಷ್ಯವಿಲ್ಲ ಮತ್ತು ಅದು ಕೇವಲ ಆರೋಪಗಳನ್ನು ಹೊಂದಿದೆ. ಈ ಪ್ರಕರಣವು ಭ್ರಷ್ಟಾಚಾರ ತಡೆ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತ್ತು.

CMRL-Exalogic ಪ್ರಕರಣದಲ್ಲಿ ಪಿಣರಾಯಿ ವಿಜಯನ್, ವೀಣಾ ವಿಜಯನ್​​ಗೆ ಕೇರಳ ಹೈಕೋರ್ಟ್ ನೋಟಿಸ್
ಪಿಣರಾಯಿ ವಿಜಯನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 18, 2024 | 4:45 PM

Share

ಎರ್ನಾಕುಳಂ: ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್)-ಎಕ್ಸಾಲಾಜಿಕ್ ಹಣಕಾಸು ವಹಿವಾಟುಗಳ (CMRL-Exalogic case)ಕುರಿತು ವಿಸ್ತೃತ ತನಿಖೆ ನಡೆಸುವಂತೆ ಕೋರಿ ಮ್ಯಾಥ್ಯೂ ಕುಳಲ್​​ನಾಡನ್ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ (Kerala high court) ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಮತ್ತು ಅವರ ಪುತ್ರಿ ವೀಣಾ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಎಕ್ಸಾಲಾಜಿಕ್ ಎಂಬುದು ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಒಡೆತನದ ಸಾಫ್ಟ್‌ವೇರ್ ಸಂಸ್ಥೆಯಾಗಿದೆ.

ಈ ಹಿಂದೆ, ಕಾಂಗ್ರೆಸ್ ನಾಯಕ ಮ್ಯಾಥ್ಯೂ ಕುಳಲ್​​ನಾಡನ್ ಸಲ್ಲಿಸಿದ್ದ ಅರ್ಜಿಯನ್ನು ವಿಜಿಲೆನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು, ಅಲ್ಲಿ ನ್ಯಾಯಾಲಯವು ಅರ್ಜಿಯಲ್ಲಿ ಮಾನ್ಯವಾದ ಸಾಕ್ಷ್ಯವಿಲ್ಲ ಮತ್ತು ಅದು ಕೇವಲ ಆರೋಪಗಳನ್ನು ಹೊಂದಿದೆ. ಈ ಪ್ರಕರಣವು ಭ್ರಷ್ಟಾಚಾರ ತಡೆ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತ್ತು.

ವಿಜಿಲೆನ್ಸ್ ನ್ಯಾಯಾಲಯವು ಕುಳಲ್​​ನಾಡನ್ ಅವರ ಅರ್ಜಿಯನ್ನು ಟೀಕಿಸಿದ್ದು,ಈ ಆರೋಪವು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿತ್ತು. ವಿಜಿಲೆನ್ಸ್ ನ್ಯಾಯಾಲಯದ ಈ ಅವಲೋಕನವನ್ನು ಮರುಪರಿಶೀಲಿಸುವಂತೆ ನಿರ್ದೇಶನವನ್ನು ನೀಡುವಂತೆ ಕೋರಿಕೆಯೊಂದಿಗೆ ಕುಳಲ್​​ನಾಡನ್ ಹೈಕೋರ್ಟ್ ಮೆಟ್ಟಿಲೇರಿದ್ದರು.. ಮಾಸಿಕ ಪಾವತಿ ವಿವಾದದ ಕುರಿತು ಗಂಭೀರ ವಂಚನೆ ತನಿಖಾ ಕಚೇರಿ, ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಜುಲೈ 2ರಂದು ನ್ಯಾಯಾಲಯ ವಿಚಾರಣೆ ನಡೆಸಲಿದ್ದು, ಇದೇ ವೇಳೆ ಪ್ರಕರಣದ ವಿಚಾರಣೆ ವೇಳೆ ಮೃತಪಟ್ಟ ಕಳಮಶ್ಶೇರಿಯ ಗಿರೀಶ್ ಬಾಬು ಎಂಬುವರು ಇದೇ ವಿಚಾರವಾಗಿ ಸಲ್ಲಿಸಿರುವ ಅರ್ಜಿಯನ್ನು ಜುಲೈ 3ರಂದು ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

ಸಾಫ್ಟ್‌ವೇರ್ ಸೇವೆಗಳನ್ನು ಒದಗಿಸುವ ನೆಪದಲ್ಲಿ ಸಿಎಂಆರ್‌ಎಲ್ ಎಕ್ಸಾಲಾಜಿಕ್ ಸೊಲ್ಯೂಷನ್‌ಗೆ 1.72 ಕೋಟಿ ರೂಪಾಯಿ ಪಾವತಿಸಿರುವುದು ಬೆಳಕಿಗೆ ಬಂದಿರುವ ಆದಾಯ ತೆರಿಗೆ ತನಿಖೆಯ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಮತ್ತೊಂದು ರಾಷ್ಟ್ರೀಯ ಸಂಸ್ಥೆ- ಗಂಭೀರ ವಂಚನೆಗಳ ತನಿಖಾ ಕಚೇರಿ (SFIO)ಯ 2019 ರಲ್ಲಿ CMRL ವಿರುದ್ಧ ನಡೆಸಿದ ಆದಾಯ ತೆರಿಗೆ ತನಿಖೆಯಲ್ಲಿ ಬಹಿರಂಗಗೊಂಡ ರಾಜಕೀಯ ಮುಖಂಡರು ಮತ್ತು ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ವ್ಯಕ್ತಿಗಳಿಗೆ 95 ಕೋಟಿ ರೂ ಪಾವತಿ ಮಾಡಿದ್ದರ ಬಗ್ಗೆ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಈದ್‌ ಮಿಲಾದ್​ ದಿನವೇ ಶ್ರೀನಗರದಲ್ಲಿ ಪರಿಶೀಲನಾ ಸಭೆ; ಕೇಂದ್ರ ಸರ್ಕಾರದ ವಿರುದ್ಧ ಒಮರ್ ಅಬ್ದುಲ್ಲಾ ಟೀಕೆ 

2016 ರಲ್ಲಿ ಮಾರ್ಕೆಟಿಂಗ್ ಕನ್ಸಲ್ಟೆನ್ಸಿ ಸೇವೆಗಳನ್ನು ಪಡೆಯಲು ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಅವರೊಂದಿಗೆ CMRL ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ತಿಳಿದುಬಂದಿದೆ. ಸೇವೆಗಾಗಿ ವೀಣಾಗೆ ತಿಂಗಳಿಗೆ ತಲಾ ಐದು ಲಕ್ಷ ರೂ ನೀಡಲಾಗಿತ್ತು. 2017 ರಲ್ಲಿ ಕಂಪನಿಗೆ ಸಾಫ್ಟ್‌ವೇರ್ ಬೆಂಬಲವನ್ನು ಒದಗಿಸಲು CMRL ನಿಂದ Exalogic ನೊಂದಿಗೆ ಮತ್ತೊಂದು ಒಪ್ಪಂದಕ್ಕೆ ಸಹಿ ಹಾಕಲಾಯಿತು. Exalogic ಸೇವೆಗಾಗಿ ಪ್ರತಿ ತಿಂಗಳು 3 ಲಕ್ಷ ರೂಪಾಯಿಗಳನ್ನು ಪಡೆಯುತ್ತದೆ ಎಂದು ಒಪ್ಪಂದವನ್ನು ಮಾಡಲಾಗಿತ್ತು. ಆದರೆ, ಆದಾಯ ತೆರಿಗೆ ತನಿಖೆಯ ವೇಳೆ ಸಿಎಂಆರ್‌ಎಲ್‌ನ ಉನ್ನತ ಅಧಿಕಾರಿಗಳು ವೀಣಾ ಮತ್ತು ಎಕ್ಸಾಲಾಜಿಕ್‌ನಿಂದ ಯಾವುದೇ ಸೇವೆಯನ್ನು ಪಡೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್