AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಬಳಕೆ ಹೆಚ್ಚಾಗಿದೆ ಆದ್ರೆ ಕೊರತೆ ಆಗಲ್ಲ, ಸ್ಥಗಿತಗೊಂಡಿದ್ದ 20 ಗಣಿಗಳಿಗೆ ಮರು ಚಾಲನೆ

ಸ್ಥಗಿತಗೊಂಡಿದ್ದ 20 ಗಣಿಗಳಿಗೆ ಮರು ಚಾಲನೆ ನೀಡಲಾಗಿದೆ. ಇದರಿಂದ 40 ಮಿಲಿಯನ್ ಟನ್‌ಗೂ ಹೆಚ್ಚು ಕಲ್ಲಿದ್ದಲು ಸಿಗಲಿದೆ. ಭವಿಷ್ಯದ 2-3 ವರ್ಷಗಳಲ್ಲಿ ಕಲ್ಲಿದ್ದಲು ಕೊರತೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಕಲ್ಲಿದ್ದಲು ಬಳಕೆ ಹೆಚ್ಚಾಗಿದೆ ಆದ್ರೆ ಕೊರತೆ ಆಗಲ್ಲ, ಸ್ಥಗಿತಗೊಂಡಿದ್ದ 20 ಗಣಿಗಳಿಗೆ ಮರು ಚಾಲನೆ
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್‌ ಜೋಶಿ
TV9 Web
| Edited By: |

Updated on: May 06, 2022 | 3:27 PM

Share

ಮುಂಬೈ: ಕಲ್ಲಿದ್ದಲು ಬಳಕೆ ಹೆಚ್ಚಾಗಿದೆ ಆದ್ರೆ ಕಲ್ಲಿದ್ದಲು (Coal) ಕೊರತೆ ಆಗಲ್ಲ. ಇಂದು ಜವಾಬ್ದಾರಿಯುವ ಕಲ್ಲಿದ್ದಲು ಗಣಿ ನಡೆಸುತ್ತಿದ್ದೇವೆ. ನಮ್ಮ ಅವಧಿಯಲ್ಲಿ ಕಲ್ಲಿದ್ದಲು ಹಂಚಿಕೆ ವಿಚಾರದಲ್ಲಿ ಭ್ರಷ್ಟಚಾರಕ್ಕೆ ಅವಕಾಶ ನೀಡಿಲ್ಲ. ಪಾರದರ್ಶಕವಾಗಿ ಕಲ್ಲಿದ್ದಲು ಗಣಿ ಹಂಚಿಕೆ ನಡೆದಿದೆ ಎಂದು ಮುಂಬೈನಲ್ಲಿ ಗಣಿಗಳ ಮರು ಚಾಲನೆ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆ ನೀಡಿದ್ದಾರೆ. ಕಲ್ಲಿದ್ದಲು ಗಣಿಗಾರಿಕೆ, ಸಾಗಾಟಕ್ಕೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ. ಸ್ಥಗಿತಗೊಂಡಿದ್ದ 20 ಗಣಿಗಳಿಗೆ ಮರು ಚಾಲನೆ ನೀಡಲಾಗಿದೆ. ಇದರಿಂದ 40 ಮಿಲಿಯನ್ ಟನ್‌ಗೂ ಹೆಚ್ಚು ಕಲ್ಲಿದ್ದಲು ಸಿಗಲಿದೆ. ಭವಿಷ್ಯದ 2-3 ವರ್ಷಗಳಲ್ಲಿ ಕಲ್ಲಿದ್ದಲು ಕೊರತೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಕಲ್ಲಿದ್ದಲು ಸಾಗಣೆಗಾಗಿ 1100 ಪ್ಯಾಸೆಂಜರ್ ರೈಲುಗಳು ರದ್ದು

ದೇಶದ ವಿವಿಧೆಡೆ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ಎದುರಾಗಬಹುದಾದ ಸಂಭಾವ್ಯ ಅಪಾಯಗಳನ್ನು ಮನಗಂಡಿರುವ ಭಾರತ ಸರ್ಕಾರವು ಕಲ್ಲಿದ್ದಲು ತುರ್ತು ಸಾಗಣೆಗೆ ಒತ್ತು ನೀಡುತ್ತಿದೆ. ಈ ಪ್ರಯತ್ನದ ಭಾಗವಾಗಿ ಭಾರತೀಯ ರೈಲ್ವೆ ಮತ್ತಷ್ಟು ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಿದ್ದು, ಹಳಿ ಮತ್ತು ಇತರ ರೈಲ್ವೆ ಸೌಕರ್ಯಗಳನ್ನು ಕಲ್ಲಿದ್ದಲು ಸಾಗಣೆಗೆ ಮೀಸಲಿಡಲು ಮುಂದಾಗಿದೆ. ಮೇ 24ರವರೆಗೆ ಒಟ್ಟು 1,100 ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಿರುವುದಾಗಿ ಭಾರತೀಯ ರೈಲ್ವೆ ಹೇಳಿದೆ. ಎಕ್ಸ್​ಪ್ರೆಸ್​ ರೈಲುಗಳ 500, ಪ್ಯಾಸೆಂಜರ್ ರೈಲುಗಳ 580 ಟ್ರಿಪ್​ಗಳನ್ನು ರದ್ದುಪಡಿಸಲಾಗಿದೆ. ಕಳೆದ ಏಪ್ರಿಲ್ 29ರಂದು 240 ರೈಲುಗಳನ್ನು ರದ್ದುಪಡಿಸಿ ರೈಲ್ವೆ ಇಲಾಖೆಯು ಆದೇಶ ಹೊರಡಿಸಿತ್ತು. ಪ್ರಸ್ತುತ ಕಲ್ಲಿದ್ದಲು ಸಾಗಣೆಗೆ ಮೀಸಲಿರುವ ಸುಮಾರು 400 ಕಲ್ಲಿದ್ದಲು ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ.

ಈ ತಿಂಗಳ ಮಧ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಹೀಗಾಗಿಯೇ ವಿವಿಧ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಣೆ ಪ್ರಮಾಣ ಹೆಚ್ಚಿಸಲು ಒತ್ತು ನೀಡುತ್ತಿದೆ. ದೇಶೀಯ ಕಲ್ಲಿದ್ದಲು ಘಟಕಗಳಲ್ಲಿ ಕಾರ್ಮಿಕರು ಮುಷ್ಕರ ನಡೆಸಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ಮುಖ್ಯ ಕಾರಣವಾಯಿತು.

ದೆಹಲಿ, ರಾಜಸ್ತಾನ, ಪಂಜಾಬ್, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ವಿದ್ಯುತ್ ಕೊರತೆ ಸಮಸ್ಯೆ ತೀವ್ರವಾಗಿದೆ. ಮುಂದಿನ ದಿನಗಳಲ್ಲಿ ಇದೇ ರಾಜ್ಯಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ದೇಶದಲ್ಲಿರುವ ಒಟ್ಟು 173 ಶಾಖೋತ್ಪನ್ನ ಘಟಕಗಳ ಪೈಕಿ, 108 ಘಟಕಗಳಲ್ಲಿ ಕಲ್ಲಿದ್ದಲಿನ ತೀವ್ರ ಕೊರತೆ ಎದುರಾಗಿದೆ. ಮುಂದಿನ ಕೆಲವೇ ದಿನಗಳ ಬೇಡಿಕೆ ಪೂರೈಸುವ ಸಾಮರ್ಥ್ಯ ಈ ಘಟಕಗಳಿಗೆ ಇವೆ.

ಇನ್ನಷ್ಟು ರಾಷ್ಟೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು