AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

225 ಮೀಟರ್ ಆಳದ ಕಲ್ಲಿದ್ದಲು ಗಣಿ ಪ್ರವೇಶಿಸಿ ಪರಿಶೀಲನೆ ನಡೆಸಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಈ ವೇಳೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿಯವರು, ಈಸ್ಟರ್ನ್‌ಕೋಲ್‌ನ ಝಂಜ್ರಾ ಭೂಗತ ಗಣಿಯೊಳಗೆ 225 ಮೀಟರ್ ಆಳಕ್ಕೆ ತೆರಳಿ ಅಂಡರ್ ಗ್ರೌಂಡ್ ನಲ್ಲಿ ಒಂದುವರೆ ಕಿ.ಮೀ ಪ್ರಯಾಣಿಸಿದ್ದು ಹೊಸ ಅನುಭವ ನೀಡಿದೆ ಎಂದರು.

225 ಮೀಟರ್ ಆಳದ ಕಲ್ಲಿದ್ದಲು ಗಣಿ ಪ್ರವೇಶಿಸಿ ಪರಿಶೀಲನೆ ನಡೆಸಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
225 ಮೀಟರ್ ಆಳದ ಕಲ್ಲಿದ್ದಲು ಗಣಿ ಪ್ರವೇಶಿಸಿ ಪರಿಶೀಲನೆ ನಡೆಸಿದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Nov 24, 2022 | 10:20 PM

Share

ಪಶ್ಚಿಮ ಬಂಗಾಳ: ದೇಶದಲ್ಲೇ ಅತಿ ಹೆಚ್ಚು ಕಲ್ಲಿದ್ದಲು ಉತ್ಪಾದಿಸುವ, ಭೂ ಮೇಲ್ಮೈಯಿಂದ 225 ಮೀಟರ್ ಆಳದಲ್ಲಿರುವ ಪಶ್ಚಿಮ ಬಂಗಾಳ ರಾಜ್ಯದ (West Bengal) ಪಶ್ಚಿಮ್ ಬರ್ದಮಾನ್ ಜಿಲ್ಲೆಯ ದುರ್ಗಾಪುರ್ ಸಬ್ ಡಿವಿಷನ್ ನಲ್ಲಿರುವ ಝಾಂಜ್ರಾ ಕಲ್ಲಿದ್ದಲು ಗಣಿಗೆ (Jhanjra underground Coal Mine) ಇಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Coal Minister Pralhad Joshi) ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗಣಿ ಒಳಗೆ 225 ಮೀಟರ್ ಆಳಕ್ಕೆ ತೆರಳಿ ಕಲ್ಲಿದ್ದಲು ಉತ್ಪಾದನೆ ಪರಿಶೀಲನೆ ನಡೆಸಿದ ಜೋಶಿಯವರು, ಅಂಡರ್ ಗ್ರೌಂಡ್ ನಲ್ಲಿ 1.5 ಕಿ.ಮೀ ಪ್ರಯಾಣಿಸಿದರು.

ಈ ವೇಳೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿಯವರು, ಈಸ್ಟರ್ನ್‌ಕೋಲ್‌ನ ಝಂಜ್ರಾ ಭೂಗತ ಗಣಿಯೊಳಗೆ 225 ಮೀಟರ್ ಆಳಕ್ಕೆ ತೆರಳಿ ಅಂಡರ್ ಗ್ರೌಂಡ್ ನಲ್ಲಿ ಒಂದುವರೆ ಕಿ.ಮೀ ಪ್ರಯಾಣಿಸಿದ್ದು ಹೊಸ ಅನುಭವ ನೀಡಿದೆ ಎಂದರು. ವರ್ಷಕ್ಕೆ 3.5 ಮಿಲಿಯನ್ ಟನ್ ಸಾಮರ್ಥ್ಯ ಹೊಂದಿರುವ ಝಂಜ್ರಾ ಕಲ್ಲಿದ್ದಲು ಗಣಿ, ಭಾರತದ ಅತಿ ಹೆಚ್ಚು ಕಲ್ಲಿದ್ದಲು ಉತ್ಪಾದಿಸುವ ಯಾಂತ್ರಿಕೃತ ಭೂಗತ ಗಣಿಯಾಗಿದೆ.

ಇಷ್ಟೊಂದು ಆಳಕ್ಕೆ ಹೋಗಿ ಪ್ರತಿ ನಿತ್ಯ ಕಷ್ಟಕರ ಪರಿಸ್ಥಿತಿಗಳನ್ನ ಎದುರಿಸಿ ಕಲ್ಲಿದ್ದಲು ಉತ್ಪಾದನೆಗೆ ಶ್ರಮಿಸುತ್ತಿರುವ ಕಾರ್ಮಿಕರಿಗೆ ಪ್ರಲ್ಹಾದ್ ಜೋಶಿಯವರು ಇದೇ ವೇಳೆ ಅಭಿನಂದನೆ ಸಲ್ಲಿಸಿದರು. ಇಲ್ಲಿನ ಕಾರ್ಮಿಕರು ಯೋಧರ ರೀತಿಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವರು ಇದೇ ವೇಳೆ ಶ್ಲಾಘನೆ ವ್ಯಕ್ತಪಡಿಸಿದರು.

ದೇಶದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವ ಗುರಿಯೊಂದಿಗೆ ಕಲ್ಲಿದ್ದಲು ಗಣಿ ಪ್ರದೇಶಗಳಿಗೆ ಭೇಟಿ ನೀಡ್ತಿರುವ ಪ್ರಲ್ಹಾದ್ ಜೋಶಿಯವರು, ಹಲವು ಯೋಜನೆಗಳನ್ನ ಹಾಕಿಕೊಂಡಿದ್ದಾರೆ. ಕಲ್ಲಿದ್ದಲು ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು ಉತ್ಪಾದನಾ ಸಾಮರ್ಥ್ಯವನ್ನು ವರ್ಷಕ್ಕೆ 2MT ಗಿಂತ ಅಧಿಕ ಪ್ರಮಾಣಕ್ಕೆ ಹೆಚ್ಚಿಸಲಾಗಿದೆ.

ಕಡಿಮೆ ಎತ್ತರದ 2 ನಿರಂತರ ಗಣಿಗಳನ್ನ ಪರಿಚಯಿಸುವ ಜೊತೆಗೆ 5 MTY ಸಾಮರ್ಥ್ಯದ ಕಲ್ಲಿದ್ದಲು ನಿರ್ವಹಣೆ ಸ್ಥಾವರ ಹಾಗೂ ರೈಲ್ವೇ ಕಾರಿಡಾರ್ ನಿರ್ಮಾಣ ಹಂತದಲ್ಲಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಇದೇ ವೇಳೆ ತಿಳಿಸಿದ್ದಾರೆ. ಪ್ರಗತಿ ಪಥದಲ್ಲಿ ಸಾಗುತ್ತಿರುವ ಕೇಂದ್ರ ಸಚಿವ ಈ ನಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Also Read:  ನ. 27 ರಂದು ಪ್ರಲ್ಹಾದ ಜೋಶಿ ಜನ್ಮದಿನ -ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್, ಸಂಭ್ರಮಾಚರಣೆ ಬೇಡ ಎಂದು ಜೋಶಿ ಮನವಿ

Also Read:  ವಿದ್ಯುತ್ ಬೇಡಿಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತಮ ಅವಕಾಶ : ಪ್ರಲ್ಹಾದ್ ಜೋಶಿ

Published On - 7:14 pm, Thu, 24 November 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು