AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2 ರಂದು ಅರಬ್ಬಿ ಸಮುದ್ರಕ್ಕೆ ಬಿದ್ದ ALH ಪೈಲಟ್‌ನ ಮೃತದೇಹ ಪತ್ತೆ

“ಪೋರಬಂದರ್ ಕರಾವಳಿಯಿಂದ ಸುಮಾರು 55 ಕಿಮೀ ದೂರದಲ್ಲಿ ಪಾರ್ಥಿವ ಶರೀರವನ್ನು ಪಡೆಯಲಾಗಿದೆ. ಹೆಲಿಕಾಪ್ಟರ್‌ನ ಪೈಲಟ್-ಇನ್-ಕಮಾಂಡ್ ಆಗಿದ್ದ ಕಮಾಂಡೆಂಟ್, ಎಂಟಿ ಹರಿ ಲೀಲಾದಿಂದ ಗಂಭೀರವಾಗಿ ಗಾಯಗೊಂಡ ಸಿಬ್ಬಂದಿಯನ್ನು ಸ್ಥಳಾಂತರಿಸಲು ಒಬ್ಬ ಪೈಲಟ್ ಮತ್ತು ಇಬ್ಬರು ವಾಯು ಸಿಬ್ಬಂದಿ ಡೈವರ್‌ಗಳೊಂದಿಗೆ ವೈದ್ಯಕೀಯ ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿದ್ದರು”ಎಂದು ಹೇಳಿಕೆ ತಿಳಿಸಿದೆ.

ಸೆಪ್ಟೆಂಬರ್ 2 ರಂದು ಅರಬ್ಬಿ ಸಮುದ್ರಕ್ಕೆ ಬಿದ್ದ ALH ಪೈಲಟ್‌ನ ಮೃತದೇಹ ಪತ್ತೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Oct 11, 2024 | 10:13 PM

Share

ದೆಹಲಿ ಅಕ್ಟೋಬರ್ 11: ಸೆಪ್ಟೆಂಬರ್ 2 ರಂದು ಪೋರಬಂದರ್ ಬಳಿ ಅರಬ್ಬಿ ಸಮುದ್ರಕ್ಕೆ ಧ್ರುವ್ ಸುಧಾರಿತ ಲಘು ಹೆಲಿಕಾಪ್ಟರ್ (ALH Mk-III) ಪತನಗೊಂಡ ನಂತರ ನಾಪತ್ತೆಯಾಗಿದ್ದ ಪೈಲಟ್‌ನ ಮೃತದೇಹವನ್ನು ಕರಾವಳಿ ಕಾವಲು ಪಡೆ ವಶಪಡಿಸಿಕೊಂಡಿದೆ ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ ಮೃತದೇಹ ಪತ್ತೆಯಾಗಿದೆ.

ಕಮಾಂಡೆಂಟ್ ರಾಕೇಶ್ ರಾಣಾ, 38, ಕೋಸ್ಟ್ ಗಾರ್ಡ್‌ನ ಪೋರಬಂದರ್ ಮೂಲದ 835 ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಆಗಿದ್ದು, ALH ಸೇರಿದ ಅವರು 1,900 ಕ್ಕೂ ಹೆಚ್ಚು ಗಂಟೆಗಳ ಹಾರಾಟ ಅನುಭವ ಹೊಂದಿದವರು. ಹಲವಾರು ಹಡಗುಗಳು, ವಿಮಾನಗಳು ಮತ್ತು ತಜ್ಞ ಡೈವರ್‌ಗಳು ವಾರಗಳ ಕಾಲ ಸುಮಾರು 60 ಮೀಟರ್ ಆಳ ಸಮುದ್ರದಲ್ಲಿ   ಹುಡುಕಾಟ ನಡೆಸಿದ್ದರು.

“ಪೋರಬಂದರ್ ಕರಾವಳಿಯಿಂದ ಸುಮಾರು 55 ಕಿಮೀ ದೂರದಲ್ಲಿ ಪಾರ್ಥಿವ ಶರೀರವನ್ನು ಪಡೆಯಲಾಗಿದೆ. ಹೆಲಿಕಾಪ್ಟರ್‌ನ ಪೈಲಟ್-ಇನ್-ಕಮಾಂಡ್ ಆಗಿದ್ದ ಕಮಾಂಡೆಂಟ್, ಎಂಟಿ ಹರಿ ಲೀಲಾದಿಂದ ಗಂಭೀರವಾಗಿ ಗಾಯಗೊಂಡ ಸಿಬ್ಬಂದಿಯನ್ನು ಸ್ಥಳಾಂತರಿಸಲು ಒಬ್ಬ ಪೈಲಟ್ ಮತ್ತು ಇಬ್ಬರು ವಾಯು ಸಿಬ್ಬಂದಿ ಡೈವರ್‌ಗಳೊಂದಿಗೆ ವೈದ್ಯಕೀಯ ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿದ್ದರು”ಎಂದು ಹೇಳಿಕೆ ತಿಳಿಸಿದೆ.

ಎಎಲ್‌ಹೆಚ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಇಬ್ಬರು ಫ್ಲೈಟ್ ಡೈವರ್‌ಗಳು ಸೇರಿದಂತೆ ನಾಲ್ವರು ಸಿಬ್ಬಂದಿ ಇದ್ದರು. ಸೆಪ್ಟೆಂಬರ್ 3 ರಂದು ಕೋಸ್ಟ್ ಗಾರ್ಡ್ ಸಹ ಪೈಲಟ್, ಡೆಪ್ಯುಟಿ ಕಮಾಂಡೆಂಟ್ ವಿಪಿನ್ ಬಾಬು ಮತ್ತು ಡೈವರ್ ಕರಣ್ ಸಿಂಗ್ ಅವರ ಮೃತದೇಹಗಳನ್ನು ಹೊರತೆಗೆದಿದ್ದು ಇತರ ಫ್ಲೈಟ್ ಡೈವರ್ ಅನ್ನು ರಕ್ಷಿಸಿದರು.

ಇದನ್ನೂ ಓದಿ: ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 2 ಬೋಗಿಗಳಿಗೆ ಬೆಂಕಿ

ಡೂಮ್ಡ್ ಹೆಲಿಕಾಪ್ಟರ್, ಟೈಲ್ ನಂ. CG 863, ವ್ಯಾಪಾರಿ ಟ್ಯಾಂಕರ್‌ನಲ್ಲಿ ತುರ್ತು ಪರಿಸ್ಥಿತಿಯ ನಂತರ ವೈದ್ಯಕೀಯ ಸ್ಥಳಾಂತರಿಸುವ ಕಾರ್ಯಾಚರಣೆಗಾಗಿ ಸೆಪ್ಟೆಂಬರ್ 2 ರ ರಾತ್ರಿ ಪ್ರಾರಂಭಿಸಲಾಯಿತು. ಇದೇ ಹೆಲಿಕಾಪ್ಟರ್ ಇತ್ತೀಚೆಗೆ ಪ್ರವಾಹದಿಂದ ತತ್ತರಿಸಿರುವ ಗುಜರಾತ್‌ನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ನಡೆಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು