AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 10, 2024 | 8:33 PM

Share

ದೆಹಲಿ ಅಕ್ಟೋಬರ್ 10: ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಕೇನ್ ಸಾಗಿಸಲು ಬಳಸಿದ ಕಾರಿನಲ್ಲಿ ಜಿಪಿಎಸ್ ಅಳವಡಿಸಿದ್ದರಿಂದ ಡ್ರಗ್ ಸಿಂಡಿಕೇಟ್ ದಂಧೆ ನಡೆದಿದೆ. ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೈಗೊಳ್ಳಲು ಜಿಪಿಎಸ್ ಸ್ಥಳವನ್ನು ಟ್ರ್ಯಾಕ್ ಮಾಡಿ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅವರು ಹೇಳಿದರು.

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ತುಷಾರ್ ಗೋಯಲ್ (40), ಹಿಮಾಂಶು ಕುಮಾರ್ (27) ಮತ್ತು ಔರಂಗಜೇಬ್ ಸಿದ್ದಿಕಿ (23) ಮತ್ತು ಭರತ್ ಕುಮಾರ್ ಜೈನ್ (48) ಎಂದು ಗುರುತಿಸಲಾದ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಇಬ್ಬರನ್ನು ಅಮೃತಸರ ಮತ್ತು ಚೆನ್ನೈನಿಂದ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಹಾಪುರ್‌ನಲ್ಲಿ ಅಖ್ಲಾಕ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬೆಳಗ್ಗೆ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಅಖ್ಲಾಕ್ ಉತ್ತರ ಭಾರತದಲ್ಲಿ ಡ್ರಗ್ಸ್ ಸಾಗಿಸಲು ಸಹಾಯ ಮಾಡುತ್ತಿದ್ದ. 5,620 ಕೋಟಿ ರೂಪಾಯಿಗಳ ಡ್ರಗ್ ಕಾರ್ಟೆಲ್‌ನಲ್ಲಿ ಭಾಗಿಯಾಗಿರುವ ಶಂಕಿತ ಭಾರತೀಯ ಮೂಲದ ದುಬೈ ಮೂಲದ ಉದ್ಯಮಿ ವೀರೇಂದ್ರ ಬಸೋಯಾ ವಿರುದ್ಧ ದೆಹಲಿ ಪೊಲೀಸರು ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 10 October 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು