AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on:Oct 10, 2024 | 8:33 PM

Share

ದೆಹಲಿ ಅಕ್ಟೋಬರ್ 10: ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಕೇನ್ ಸಾಗಿಸಲು ಬಳಸಿದ ಕಾರಿನಲ್ಲಿ ಜಿಪಿಎಸ್ ಅಳವಡಿಸಿದ್ದರಿಂದ ಡ್ರಗ್ ಸಿಂಡಿಕೇಟ್ ದಂಧೆ ನಡೆದಿದೆ. ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೈಗೊಳ್ಳಲು ಜಿಪಿಎಸ್ ಸ್ಥಳವನ್ನು ಟ್ರ್ಯಾಕ್ ಮಾಡಿ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅವರು ಹೇಳಿದರು.

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ತುಷಾರ್ ಗೋಯಲ್ (40), ಹಿಮಾಂಶು ಕುಮಾರ್ (27) ಮತ್ತು ಔರಂಗಜೇಬ್ ಸಿದ್ದಿಕಿ (23) ಮತ್ತು ಭರತ್ ಕುಮಾರ್ ಜೈನ್ (48) ಎಂದು ಗುರುತಿಸಲಾದ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಇಬ್ಬರನ್ನು ಅಮೃತಸರ ಮತ್ತು ಚೆನ್ನೈನಿಂದ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಹಾಪುರ್‌ನಲ್ಲಿ ಅಖ್ಲಾಕ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬೆಳಗ್ಗೆ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಅಖ್ಲಾಕ್ ಉತ್ತರ ಭಾರತದಲ್ಲಿ ಡ್ರಗ್ಸ್ ಸಾಗಿಸಲು ಸಹಾಯ ಮಾಡುತ್ತಿದ್ದ. 5,620 ಕೋಟಿ ರೂಪಾಯಿಗಳ ಡ್ರಗ್ ಕಾರ್ಟೆಲ್‌ನಲ್ಲಿ ಭಾಗಿಯಾಗಿರುವ ಶಂಕಿತ ಭಾರತೀಯ ಮೂಲದ ದುಬೈ ಮೂಲದ ಉದ್ಯಮಿ ವೀರೇಂದ್ರ ಬಸೋಯಾ ವಿರುದ್ಧ ದೆಹಲಿ ಪೊಲೀಸರು ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 10 October 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!